ಸುರಪುರ: ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ವತಿಯಿಂದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಿ,ಸುರಪುರ ಪೊಲೀಸ್ ಠಾಣೆಗೆ ಹೆಚ್ಚಿನ ಸಿಬ್ಬಂದಿ ನೇಮಿಸುವಂತೆ ರಮೇಶ ದೊರೆ ಆಳ್ದಾಳ ಒತ್ತಾಯಿಸಿದ್ದಾರೆ.
ಈ ಕುರಿತು ಬರೆದ ಮನವಿಯನ್ನು ಕಲಬುರ್ಗಿ ವಿಭಾಗಿಯ ಪೊಲೀಸ್ ಮಹಾನಿರ್ದೇಶಕ ಮನೀಷ್ ಖರ್ಬೇಕರ್ ಅವರ ಮೂಲಕ ಮನವಿ ಸಲ್ಲಿಸಿದ್ದು.ಸುರಪುರ ಪೊಲೀಸ್ ಠಾಣೆ ೧೯೭೨ರಲ್ಲಿ ಆರಂಭಗೊಂಡಿದೆ ಅಂದಿನ ಜನಸಂಖ್ಯೆಗನುಗುಣವಾಗಿ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿತ್ತು.ಆದರೆ ಈಗ ಜನಸಂಖ್ಯೆ ದುಪ್ಪಟ್ಟಾಗಿದೆ. ಅಲ್ಲದೆ ಸುರಪುರ ಠಾಣೆ ವ್ಯಾಪ್ತಿಗೆ ಸುಮಾರು ಐವತ್ತಕ್ಕು ಹೆಚ್ಚು ಗ್ರಾಮಗಳಿದ್ದು ಎಲ್ಲಾ ಗ್ರಾಮಗಳಿಗೆ ಪೊಲೀಸ್ ಭೇಟಿ ನೀಡಲು, ರಾತ್ರಿ ಗಸ್ತು ತಿರಗಲು ಸಾಧ್ಯವಾಗದು.ನಮ್ಮ ಸುರಪುರ ತಾಲ್ಲೂಕು ಸೂಕ್ಷ್ಮ ಕೇಂದ್ರದಲ್ಲಿ ಒಂದಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ಸಿಬ್ಬಂದಿ ನೇಮಿಸುವಂತೆ ಆಗ್ರಹಿಸಿದ್ದಾರೆ.
ಸುರಪುರ ಉಪ ವಿಭಾಗ ಆರಂಭಗೊಂಡು ಮೂರು ವರ್ಷವಾದರೂ ಇನ್ನೂ ಉಪ ವಿಭಾಗಕ್ಕೆ ನೂತನ ಕಟ್ಟಡ ನಿರ್ಮಾಣಗೊಳಿಸಿಲ್ಲ ಜೊತೆಗೆ ಡಿಎಸ್ಪಿ ಯವರ ವಾಸಿಸಲು ವಸತಿಗೃಹ ನಿರ್ಮಾಣಗೊಳಿಸಬೇಕು.ಮುಖ್ಯವಾಗಿ ಸುರಪುರ ಪೊಲೀಸ್ ವಸತಿಗೃಹಗಳು ನಿರ್ಮಾಣಗೊಳಿಸಿ ಸುಮಾರು ಐವತ್ತು ವರ್ಸಗಳಾಗಿವೆ.ಈಗ ಪೊಲೀಸ್ ವಸತಿ ಗೃಹಗಳು ಯಾವಾಗ ಬೀಳುವವೊ ಗೊತ್ತಿಲ್ಲದಂತಿವೆ,ಆದ್ದರಿಂದ ನೂತನ ಸುಸಜ್ಜಿತವಾದ ಪೊಲೀಸ್ ವಸತಿ ಗೃಹಗಳ ನಿರ್ಮಿಸಬೇಕು.ನಗರದಲ್ಲಿ ವಾಹನಗಳ ಓಡಾಟ ಹೆಚ್ಚಿನ ಮಟ್ಟದಲ್ಲಿದ್ದು ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿವೆ.ಆದ್ದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದು ಇದರ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸ್ ಠಾಣೆ ಆರಂಭಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ವೆಂಕಟೇಶ ಬೇಟೆಗಾರ, ಭೀಮು ಕಟ್ಟಿಮನಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…