371(ಜೆ) ವಿರೋಧಿ ಕೂಗಿಗೆ ಮಾರುತ್ತರ- ಕಲ್ಯಾಣ ಕರ್ನಾಟಕದ ಜನರ ಜೊತೆ ಇದ್ದೇನೆ: ಕೆಕೆಆರ್‌ಡಿಬಿ ಅಧ್ಯಕ್ಷ

ಕಲಬುರಗಿ: ಕಲಂ 371ನೇ ಜೇ ವಿರೋಧಿಸಿ ಬೆಂಗಳೂರು ಮೂಲದ ಕೆಲವು ಸಂಘಟನೆಗಳು, ಲ್ಲಿನ ಹಲವು ಬುದ್ದಿಜವಿಗಳು ಸೇರಿಕೊಂಡು ಕಲಂ 371 ಜೆ ಸಂವಿಧಾನದ ರಕ್ಷಣೆಯ ಕುರಿತಂತೆ ಅಪಪ್ರಾಚರದ್ಲಿ ತೊಡಗಿರೋದನ್ನ ಕಟುವಾಗಿ ಖಂಡಿಸಿರುವ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಈ ವಿಾರದಲ್ಲಿ ತಾವು ಸದಾಕಾಲ ಕಲ್ಯಾಣದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಜನರ ಜೊತೆಗೇ ಇರೋದಾಗಿ ಹೇಳಿದ್ದಾರೆ.

ಈ ಕುರಿತಂತೆ ಹೇಳಿಕೆ ನೀಡಿರುವ ಡಾ. ಅಜಯ್‌ ಸಿಂಗ್‌ , ಹಸಿರು ಪ್ರತಿಷ್ಠಾನ ಸಂಘಟನೆಯ ಮೂಲಕ ಕೆಲವರು ಸೇರಿಕೊಂಡು ಇಂತಹ ಹೇಳಿಕೆ, ಹೋರಾಟಗಳ ಮೂಲಕ ಕಲ್ಯಾಣದ ಜನರ ಭಾವನೆಗಳನ್ನು ಕೆಣಕುವ ಪ್ರಯತ್ನ ಮಾಡಿರೋದು ಸರಯಲ್ಲ. ಹೀಗೆ ಮಾಡುವ ಮೊದಲು ಅವರು ಅಭಿವೃದ್ಧಿ ಹಾಗೂ ಪ್ರಾದೇಶಿಕ ಅಸಮಾನತೆ ವಿಚಾರದಲ್ಲಿ ಕಲ್ಯಾಣದ ಜಿಲ್ಲೆಗಳ ಜನ ಅನುಭವಿಸಿದ, ಇಂದಿಗೂ ಅನುಭವಿಸುತ್ತಿರುವ ನೋವು- ಯಾತನೆ ಅಿಯಬೇಕಿತ್ತು ಎಂದಿದ್ದಾರೆ.

ಪ್ರಾದೇಶಿಕ ಅಸಮಾನತೆಯ ನಿವಾರಣೆಗೆ ಜಾರಿಗೆ ಬಂದ ಕಲ್ಯಾಣ ಕರ್ನಾಟಕದ ಸಂವಿಧಾನದ 371ನೇ ಜೇ ಕಲಂ ನಮ್ಮ ಹಕ್ಕು. ಕಲ್ಯಾಣ ಕರ್ನಾಟಕಕ್ಕೆ ಜಾರಿಯಾಗಿರುವ ವಿಶೇಷ ಸ್ಥಾನಮಾನದಿಂದ ರಾಜ್ಯದ ಸರ್ಕಾರಿ ಸೇವೆಗಳಲ್ಲಿ ಹೆಚ್ಚಿನ ಪಾಲು ಕಲ್ಯಾಣ ಕರ್ನಾಟಕದರೆ ಪಡೆಯುತ್ತಿದ್ದಾರೆಂದು ಅಪಪ್ರಚಾರ ಮಾಡುತ್ತಿರೋದು ಸರಿಯಲ್ಲ.

ಈ ವಿಷಯವಾಗಿ ಕಲ್ಯಾಣದ ಜನರ ಕೂಗು, ಅಸಮಾಧಾನವನ್ನೆಲ್ಲ ತಾವೇ ಖುದ್ದಾಗಿ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಅವರ ಗಮನಕ್ಕೆ ತರೋದಾಗಿಯೂ ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 1956 ರಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯ ನಿರ್ಲಕ್ಷ್ಯ ಮತ್ತು ಮಲತಾಯಿ ಧೋರಣೆ ಬೆಂಗಳೂರಿಗರಿಗೆ ಗೊತ್ತಿಲ್ಲವೆ? ನಿರಂತರ ಹೋರಾಟ ಮತ್ತು ರಾಜಕೀಯ ಇಚ್ಛಾಶಕ್ತಿಯಿಂದ ಪಡೆದ ಸಂವಿಧಾನದ 371ನೇ ಜೇ ಕಲಂ ಬಗ್ಗೆ ಅವರಿಗೇನು ಗೊತ್ತು. ನಮ್ಮ ನೋವು- ಯಾತನೆ ಸಹ ಗೊತ್ತಿಲ್ಲದಂತೆ ಅಪಪ್ರಾರಕ್ಕೆ ಮುಂದಾಗಿರೋದು ಸರಿಯಲ್ಲ ಎಂದೂ ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶ ಅತ್ಯಂತ ಹಿಂದುಳಿದಿರುವ ಬಗ್ಗೆ ಸರಕಾರದ ಅಧಿಕೃತ ಸಂಸ್ಥೆಗಳಾದ ಸತ್ಯಶೋಧನಾ ಸಮಿತಿಯ ವರದಿ, ಧರಮಸಿಂಗ್ ಸಮಿತಿ ವರದಿ, ನಂಜುಂಡಪ್ಪ ವರದಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ನಾವು ವಿಶಾಲ ಕರ್ನಾಟಕದಲ್ಲಿ ಉದ್ಯೋಗದಿಂದ ವಂಚಿತರಾದಾಗ, ಶೈಕ್ಷಣಿಕ ಪ್ರವೇಶದಿಂದ ವಂಚಿತರಾದಾಗ, ಅಭಿವೃದ್ಧಿಯಿಂದ ವಂಚಿತರಾದಾಗ, ಕ್ಯಾರೆ ಎನ್ನದ ಸಂವಿಧಾನ ವಿರೋಧಿ ಶಕ್ತಿಗಳು ಇಂದು ನಮ್ಮ ಪಾಲಿನ ಹಕ್ಕು ನಾವು ಪಡೆಯುತ್ತಿರುವ ಕೆಲವು ಲಾಭಗಳನ್ನು ಆರಂಭಿಕ ಹಂತದಲ್ಲಿಯೇ 371ನೇ(ಜೆ) ಕಲಮಿಗೆ ವಿರೋಧಿಸುತ್ತಿರುವುದು ಸರಿಯಲ್ಲ, ಅವರು ತಮ್ಮ ನಿಲುವನ್ನು ಕೈಬಿಡಬೇಕು, ಹೋರಾಟಗಳಿಂದ ಹಿಂದೆ ಸರಿದು ಕಲ್ಯಾಣದ ಜನರ ಬವಣೆ, ಬೇಕು ಬೇಡಗಳಿಗೆ ಸ್ಪಂದಿಸಬೇಕು ಎಂದು ಡಾ. ಅಜಯ್‌ ಸಿಂಗ್‌ ಅವರು ಹಸಿರು ಪ್ರತಿಷ್ಠಾನ ಸಂಘಟನೆ ಹಾಗೂ ಅವರೊಂದಿಗೆ ಕೈ ಜೋಡಿಸಿರುವ ಎಲ್ಲರಿಗೂ ಕಿವಿಮಾತು ಹೇಳಿದ್ದಾರೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420