ಕಲಬುರಗಿ; ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಇದೇ ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೂ ಮತದಾನ ನಡೆಯಲಿದ್ದು, ಕ್ಷೇತ್ರದಾದ್ಯಂತ ಮತದಾರರು ಮತಗಟ್ಟೆಗೆ ಬಂದು ತಪ್ಪದೆ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕೆಂದು ಕ್ಷೇತ್ರದ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಮತದಾರ ಪ್ರಭುಗಳಲ್ಲಿ ಮನವಿ ಮಾಡಿದ್ದಾರೆ.
ಕ್ಷೇತ್ರದಾದ್ಯಂತ 99,121 ಪುರುಷರು, 57,483 ಮಹಿಳೆಯರು, ಇತರೆ 19 ಸೇರಿ ಒಟ್ಟು 1,56,623 ಜನ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದು, ಕಲಬುರ್ಗಿ ವಿಭಾಗದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವ್ಯಾಪ್ತಿ ಹೊಂದಿರುವ ಈ ಕ್ಷೇತ್ರದಲ್ಲಿ 160 ಮುಖ್ಯ ಮತ್ತು 35 ಹೆಚ್ಚುವರಿ ಸೇರಿ ಒಟ್ಟು 195 ಮತಗಟ್ಟೆ ಸ್ಥಾಪಿಸಿಲಾಗಿದೆ. ಪ್ರತಿ ಮತಗಟ್ಟೆಗೆ ಓರ್ವ ಪಿ.ಆರ್.ಓ, ಓರ್ವ ಎ.ಪಿ.ಆರ್.ಓ, ಇಬ್ಬರು ಪಿ.ಓ., ಮೈಕ್ರೋ ವೀಕ್ಷಕರು ಒಬ್ಬರು, ಓರ್ವ ಗ್ರೂಪ್ ‘ಡಿ’ ಸಿಬ್ಬಂದಿ ಸೇರಿ ಒಟ್ಟು 6 ಜನ ಸಿಬ್ಬಂದಿ ಇರಲಿದ್ದು, ಸೂಕ್ತ ಪೊಲೀಸ್ ಭದ್ರತೆ ಸಹ ಒದಗಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಕನಿಷ್ಠ ಮೂಲಸೌಕರ್ಯ ಖಾತ್ರಿಪಡಿಸಿಕೊಳ್ಳಲಾಗಿದೆ ಎಂದರು.
ಸಾಮಾನ್ಯವಾಗಿ ವಿಧಾನಸಭೆ, ಲೋಕಸಭೆ ಚುನಾವಣೆಗಳು ಇ.ವಿ.ಎಂ. ಮತಯಂತ್ರಗಳ ಮೂಲಕ ಮತ ಚಲಾಯಿಸಲಾಗುತ್ತಿದೆ. ಇಲ್ಲಿ ಪೋಸ್ಟಲ್ ಬ್ಯಾಲೆಟ್ ಮೂಲಕ ಪ್ರಾಶಸ್ತ್ಯದ ಮತ ನೀಡಲು ಅವಕಾಶವಿದ್ದು, ಸಾಮಾನ್ಯ ಚುನಾವಣೆಗ್ಗಿಂತ ಇದು ಭಿನ್ನವಾಗಿದೆ. ಮತದಾನ ಕೇಂದ್ರದಲ್ಲಿ ಚುನಾವಣಾ ಆಯೋಗವು ನೀಡುವ ನೇರಳೆ ಬಣ್ಣದ ಸ್ಕೆಚ್ ಪೆನ್ನಿನಿಂದ ಮಾತ್ರ ಆದ್ಯತಾ ಮತಗಳನ್ನು ಸಂಖ್ಯಾತ್ಮಕವಾಗಿ ನಮೂದಿಸಬೇಕು.
ಆದ್ಯತಾ ಸಂಖ್ಯೆ ನಮೂದಿಸುವಾಗ ಒಂದೇ ಭಾಷೆ ಬಳಸಬೇಕು. ಅಕ್ಷರದಲ್ಲಿ ಬರೆಯಬಾರದು. ಸ್ಕೆಚ್ ಪೆನ್ ಹೊರತುಪಡಿಸಿ ಇತರೆ ಪೆನ್ ಬಳಸಿ ಮತ ಚಲಾಯಿಸಿದಲ್ಲಿ ಅಂತಹ ಮತಗಳು ಅಸಿಂಧುಗೊಳ್ಳಲಿದೆ. ಇನ್ನು ಈ ಚುನಾವಣೆಯಲ್ಲಿ ನೋಟಾ (ಓಔಖಿಂ) ಅನ್ವಯಿಸದ ಕಾರಣ ಮತಪತ್ರದಲ್ಲಿ ಇದನ್ನು ಮುದ್ರಿಸಿರುವುದಿಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…