ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿರುವ ಶ್ರೀ.ಶರಣಬಸವೇಶ್ವರ ಪಬ್ಲಿಕ್ ಶಾಲೆಯ 2024-25ನೇ ಸಾಲಿನ ‘ಶಾಲಾ ಪ್ರಾರಂಭೋತ್ಸವವನ್ನು’ ಹಸಿರು ತೋರಣಗಳಿಂದ ಅಲಂಕಾರಗೊಳಿಸಿ, ವಿಘ್ನನಿವಾರಕನಾದ ಗಣೇಶನ ಪೂಜೆ ಹಾಗೂ ವಿದ್ಯಾದೇವತೆಯಾದ ಶಾರದಾಂಬೆಯ ಪೂಜೆಯನ್ನು ಶಾಲೆಯ ಪ್ರಾಂಶುಪಾಲರಾದ ಶಿವಾನಂದ ಹವಶೆಟ್ಟಿ ಹಾಗೂ ಬೋಧಕ ಸಿಬ್ಬಂದಿ ವರ್ಗದವರು ನೆರವೆರಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಬರಮಾಡಿಕೊಳ್ಳಲಾಯಿತು.