ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಮುಖಂಡರ ಸುದ್ದಿಗೋಷ್ಠಿ; ರಾಜೀನಾಮೆ ಪಡೆದರೆ ಉಗ್ರ ಹೋರಾಟದ ಎಚ್ಚರಿಕೆ

ಸುರಪುರ: ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃಧ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುವ 87 ಕೋಟಿ ರೂಪಾಯಿ ಹಣ ವರ್ಗಾವಣೆಗೂ ಸಚಿವ ಬಿ.ನಾಗೇಂದ್ರ ಅವರಿಗೂ ಯಾವುದೇ ಸಂಬಂಧವಿಲ್ಲ,ಅವರ ಮೇಲಿನ ಆರೋಪ ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಶ್ರೀ ಮಹರ್ಷಿ ವಾಲ್ಕೀಕಿ ನಾಯಕ ಸಂಘದ ತಾಲೂಕ ಕಾರ್ಯಾಧ್ಯಕ್ಷ ರಮೇಶ ದೊರೆ ಆಲ್ದಾಳ ಆರೋಪಿಸಿದರು.

ನಗರದ ರಿಕ್ರಿಯೇಷನ್ ಕ್ಲಬ್ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿ, ಬಿ. ನಾಗೇಂದ್ರ ಅವರು ಪರಿಶಿಷ್ಟ ಪಂಗಡದ ಪ್ರಭಾವಿ ನಾಯಕರಾಗಿದ್ದಾರೆ ಅವರ ಬೆಳವಣಿಗೆ ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅವರ ವಿರುದ್ಧ ಷಢ್ಯಂತ್ರ ಮಾಡಿ ಸಚಿವರನ್ನು ಮೂಲೆ ಗುಂಪು ಮಾಡುವ ಹುನ್ನಾರು ನಡೆಸಲಾಗಿದೆ ಎಂದು ದೂರಿದರು.

ಸಚಿವ ಬಿ, ನಾಗೇಂದ್ರ ಅವರು ರಾಜಕೀಯ ಪ್ರವೇಶ ಮಾಡಿದಾಗಿನಿಂದಲೂ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಬಡವರಿಗಾಗಿ ದೀನ ದಲಿತರಿಗಾಗಿ, ಹಿಂದುಳಿದ ವರ್ಗದ ಏಳ್ಗೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅಂತವರ ಮೇಲೆ ಕೆಲವರು ಸುಳ್ಳು ಆರೋಪ ಮಾಡಿ ಸಚಿವ ಸ್ಥಾನದ ರಾಜಿ ನಾಮೆ ಕೇಳುತ್ತಿರುವುದನ್ನು ಸಮಾಜ ಉಗ್ರವಾಗಿ ಖಂಡಿಸುತ್ತಿದೆ ಎಂದು ಕಿಡಿ ಕಾರಿದರು.

ವೆಂಕಟೇಶ ಬೇಟೆಗಾರ ಮಾತನಾಡಿ ನಿಗಮದ ನೌಕರ ಚಂದ್ರಶೇಖರ ಅವರು ಇಲಾಖೆಯಲ್ಲಿ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವ ಹಿಸುತ್ತಿದ್ದರು. ಸಚಿವರ ಸಂಬಂಧ ಏನಿದ್ದರು ವ್ಯವಸ್ಥಾಪಕರ ಜೊತೆಗೆ ಇರುತ್ತದೆ ಲೆಕ್ಕಾಧಿಕಾರಿಗೆ ಒತ್ತಡ ಹೇರುವ ಪ್ರಶ್ನೆಯೇ ಬರುವುದಿಲ್ಲ. ಭ್ರಷ್ಠಾಚಾರದಲ್ಲಿ ಭಾಗಿಯಾದವರ ಮೇಲೆ ಶಿಸ್ತುಕ್ರಮ ಜರುಗಿಸಲಿ ಅದು ಬಿಟ್ಟು ನಿಷ್ಪಪಕ್ಷಪಾತದಿಂದ ಇರುವಸಚಿವ ಬಿ. ನಾಗೇಂದ್ರ ಅವರನ್ನು ಈ ಪ್ರಕರಣದಲ್ಲಿ ತಳುಕು ಹಾಕುತ್ತಿರುವುದು ಸರಿಯಲ್ಲ ಎಂದರು.

ಆತ್ಮಹತ್ಯೆ ನಡೆದಿರುವುದು ಬೇರೆ ಕಾರಣ ಇರಬಹುದು ಘಟನೆಯಲ್ಲಿ ಸಚಿವರ ಪಾತ್ರ ಎಳ್ಳಷ್ಟು ಇಲ್ಲಾ. 87 ಕೋಟಿ ಹಣ ವರ್ಗಾವಣೆ ಆಗಿರುವ ಕುರಿತು ಸಮಗ್ರ ತನಿಖೆ ಮಾಡಿಸಬೇಕು ಮಾನ್ಯ ಮುಖ್ಯಂತ್ರಿಯವರು ಯಾವುದೇ ಕಾರಣಕ್ಕೂ ಸಚಿವರ ರಾಜಿನಾಮೆ ನೀಡುವುದಕ್ಕೆ ಒತ್ತಡ ಹೇರ ಬಾರದು ಒಂದು ವೇಳೆ ಸಚಿವರ ರಾಜಿನಾಮೆ ಪಡೆದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ವಕೀಲ ಬಲಭೀಮ ನಾಯಕ,ಶ್ರೀನಿವಾಸ ದೊರೆ ಮಾಲಗತ್ತಿ ಮಾತನಾಡಿದರು.ಮುಖಂಡರಾದ ವಿಜಯಕುಮಾರ ಚಿಟ್ಟೆ, ಗೋಪಾಲ ನಾಯಕ, ಮಾರ್ಥಂಡಪ್ಪ ದೊರೆ, ರಾಜು ದರಬಾರಿ, ದೇವಿಂದ್ರ ಚಿಕ್ಕನಳ್ಳಿ, ನಿಂಗಪ್ಪ ಬೈರಿಮಡ್ಡಿ, ಅಮರಪ್ಪ ಶಖಾಪುರ ಇತರರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420