ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ ಕಳೆದ ಮೂರು ತಿಂಗಳಿಂದ ಸತತವಾಗಿ ಪರಿಶ್ರಮವಹಿಸಿ ಚುನಾವಣಾ ವಿಶ್ರಾಂತಿಯ ನಂತರ ಮತಗಣನೆಗೆ ಒಂದು ದಿನ ಬಾಕಿ ಇರುವಾಗ ಸಂಸದ ಡಾ. ಉಮೇಶ್ ಜಾಧವ್ ಮನೆದೇವರು ರಟಕಲ್ ರೇವಣಸಿದ್ದೇಶ್ವರರ ದರ್ಶನ ಮಾಡಿ ಪ್ರಾರ್ಥನೆ ಕೈಗೊಂಡರು.
ಚಿಂಚೋಳಿ ತಾಲೂಕು ರಟಕಲ್ ಗ್ರಾಮದಲ್ಲಿರುವ ಶ್ರೀ ರೇವಣಸಿದ್ದೇಶ್ವರ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿ ಮತದಾರರ ತೀರ್ಪು ಬಿಜೆಪಿ ಪರವಾಗಿರಲಿ ಎಂಬ ಆಶಯದೊಂದಿಗೆ ಪ್ರಾರ್ಥನೆ ಸಲ್ಲಿಸಿ ಈ ಬಾರಿ ಉತ್ತಮ ಮಳೆಯಾಗಿ ರೈತರ ಬಾಳು ಹಸನಾಗಲಿ ಮತ್ತು ರಾಜ್ಯದಲ್ಲಿ ಸುಭಿಕ್ಷೆ ನೆಲೆಸಲಿ ಎಂದು ವಿಶೇಷ ಪೂಜೆ ನೆರವೇರಿಸಿದರು.
ಕಳೆದ ಮೂರು ತಿಂಗಳಲ್ಲಿ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಲ್ಬುರ್ಗಿ ಲೋಕಸಭೆಗೆ ಮತದಾನ ಮುಗಿಸಿ ತೆಲಂಗಾಣ ಮತ್ತು ಮಹಾರಾಷ್ಟ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ವಾಪಸಾದ ಅವರು ಮತ್ತೆ ಬಿಡುವಿಲ್ಲದೆ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರವಾಗಿ ವಿವಿಧ ತಾಲೂಕುಗಳಲ್ಲಿ ಪ್ರವಾಸ ಮಾಡಿದ್ದರು.
ಬಳಿಕ ಜಿಲ್ಲೆಯ ಹಲವೆಡೆ ಜನರ ಪರವಾಗಿ ಸ್ಪಂದಿಸಲು ವಿವಿಧಡೆಗಳಿಗೆ ಸಂಚರಿಸಿ ದೂರು ದುಮ್ಮಾ ನಗಳನ್ನು ಆಲಿಸಿದರು. ಜೂನ್ ನಾಲ್ಕರಂದು ಮತ ಎಣಿಕೆ ನಡೆಯಲಿರುವುದರಿಂದ ತಮ್ಮ ಮನೆ ದೇವರಾದ ರಟಕಲ್ ರೇವಣಸಿದ್ದೇಶ್ವರ ಫ್ಯೂ ದೇವರ ಮೊರೆ ಹೋಗಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥನೆ ಮಾಡಿದರು.
ಈ ಸಂದರ್ಭದಲ್ಲಿ ದೇಗುಲದ ಮುಖ್ಯ ಪೂಜಾರಿ ಸೋಮನಾಥ್, ಬಸವರಾಜ ಪಾಟೀಲ್ ಬೆಡಸೂರ್, ರಾಜು ಜಾಧವ್, ಶಿವರಾಜ್ ಪಾಟೀಲ್
ಸಂಜು ಕುಮಾರ್ ತಮ್ಮನೆ, ವಿನೋದ್ ಚೌಹಾಣ್ ಮತ್ತೆ ಸರ್ ಜೊತೆಗಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…