ಅಫಜಲಪುರ: ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಋತುಚಕ್ರ ಎನ್ನುವುದು ಮಹಿಳೆಯರಿಗೆ ಸಹಜ ಕ್ರಿಯೆ ಇದನ್ನು ಮೌಲ್ಯಕ್ಕೆ ಹೋಲಿಸಿ ಅನಾರೋಗ್ಯಕ್ಕೆ ತುತ್ತಾಗುವುದು ಸರಿಯಲ್ಲ ಎಂದು ಮೊದಲಿಗೆ ದೀಪ ಬೆಳಗಿಸಿ ಮಾತಾನಾಡಿದ ಸಮಾಜ ಸೇವಕಿ ಪ್ರಭಾವತಿ ಮೇತ್ರಿ ಅವರು ತಿಳಿಸಿದರು.
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ. ಜಿಲ್ಲಾ ಅರ್ ಸಿ ಹಚ್ ಕಾರ್ಯಾಲಯ ಕಲಬುರಗಿ ಮತ್ತು ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ ಅಫಜಲಪುರ. ಅಡಿಯಲ್ಲಿ ವಿಶ್ವ ಋತುಚಕ್ರ ನೈರ್ಮಲ್ಯ ದಿನ ಅಂಗವಾಗಿ ಹದಿಹರೆಯದವರಿಗೆ ಋತುಚಕ್ರದ ಮತ್ತು ವೈಯುಕ್ತಿಕ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳು ಋತುಚಕ್ರ ವಿಚಾರದಲ್ಲಿ ಮುಜುಗರ ಪಟ್ಟಿಕೊಳ್ಳದೆ ನ್ಯಾಪ್ ಕಿನ್ ಬಳಸುವುದರಿಂದ ಸೋಂಕಿಗೆ ಒಳಗಾಗದಂತೆ ಜಾಗ್ರತೆ ಹೊಂದಬಹುದು ಸೂಕ್ತ ಸಮಯಕ್ಕೆ ಉತ್ತಮ ಆಹಾರ ಸೇವನೆ ಮಾಡಿಕೊಂಡು ದೇಹಕ್ಕೆ ಬೇಕಾಗುವ ಪೌಷ್ಟಿಕಾಂಶಗಳನ್ನು ಪಡೆಯುವ ನಿಟ್ಟಿನಲ್ಲಿ ನಾವು ಈ ಪ್ರಕ್ರಿಯೆಯಿಂದ ಆರೋಗ್ಯವಾಗಿ ಇರಬಹುದು ಎಂದು ಹೇಳಿದರು.
ನಂತರ ಅರ್ ಬಿ ಎಸ್ ಕೆ ಅಪ್ತ ಸಮಾಲೋಚಕಿ ಸುಜಾತಾ ಹಿರೇಮಠ ಮಾತನಾಡುತ್ತಾ ಹೆಣ್ಣು ಮಕ್ಕಳು ಋತುಚಕ್ರ ಸಮಯದಲ್ಲಿ ಮಾನಸಿಕವಾಗಿ ಕುಗ್ಗುವಿಕೆ ಕಂಡುಬರುತ್ತದೆ , ಹೆಣ್ಣು ಮಕ್ಕಳಲ್ಲಿ ಕೆಲವು ಬಾರಿ ರಕ್ತಹೀನತೆ , ಗರ್ಭಕೋಶದಲ್ಲಿ ತೊಂದರೆಯಿಂದಾಗಿ ಅನಿಮಿತ ಋತುಚಕ್ರ ಸಮಸ್ಯೆ ಕಾಣಿಕೊಳ್ಳಬಹುದು. ಕಿಶೋರಿಯರು ಮುಟ್ಟಿನ ಸಮಯದಲ್ಲಿ ಅತಿ ಕೊಬ್ಬಿನಾಂಶವಿರುವ ಮತ್ತು ಪೋಷಕಾಂಶಗಳು ಹೆಚ್ಚಿರುವ ಆಹಾರವನ್ನು ತಪ್ಪದೇ ಸೇವನೆ ಮಾಡಬೇಕು, ಯಾರು ಭಯ ಪಡದೆ ಸರ್ಕಾರಿ ಆಸ್ಪತ್ರೆ ಯಲ್ಲಿ ಸಿಗುವಂತ ಸ್ಯಾನಿಟರಿ ಪ್ಯಾಡ್ , ಹಾಗೂ ಸ್ಯಾನಿಟರಿ ಕಪ್ಪನ್ನು ಉಪಯೋಗಿಸುವುದರಿಂದ ಹೆಚ್ಚಾಗಿ ಮಹಿಳೆಯರು ಮತ್ತು ಹುಡುಗಿಯರಲ್ಲಿ ಮುಟ್ಟಿನ ಸಮಯದಲ್ಲಿ ಕಾಣಿಸಿಕೊಳ್ಳುವ ಹೊಟ್ಟೆ ನೋವು , ಬೆನ್ನು ನೋವು, ವಿಪರೀತ ರಕ್ತಸ್ರಾವ ಮುಂತಾದ ತೊಂದರೆಗಳು ಕಂಡುಬಂದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿನ ಸ್ತ್ರೀ ರೋಗ ತಜ್ಞರಿಂದ ಚಿಕಿತ್ಸೆ ಪಡೆಯುವ ಮೂಲಕ ಸೋಂಕಿನ ಸಮಸ್ಯೆಗಳು ಬರದಂತೆ ತಡೆಯಬಹುದಾಗಿದು ಎಂದು ತಿಳಿದರು.
ವೇದಿಕೆ ಮೇಲೆ ಸಮುದಾಯ ಆರೋಗ್ಯ ಅಧಿಕಾರಿ ಮೀನಾಕ್ಷಿ , ಸಮುದಾಯ ಆರೋಗ್ಯ ಸುರಕ್ಷಣಾಧಿಕಾರಿ ಕವಿತಾ, ಅಂಗನವಾಡಿ ಶಿಕ್ಷಕಿ ವಿದ್ಯಾ ಇದ್ದರು. ಸಮುದಾಯದ ಹೆಣ್ಣುಮಕ್ಕಳು ಮತ್ತು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…