ವಾಡಿ: ಎಸ್ಸೆಸ್ಸೆಲ್ಸಿ ಶ್ರೇಷ್ಠ ಪ್ರತಿಭೆಗಳಿಗೆ ಪ್ರಶಸ್ತಿ-ಪುರಸ್ಕಾರ 6 ರಂದು

0
14

ವಾಡಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ಸ್ಥಳೀಯ ವಿವಿಧ ಪ್ರೌಢ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ವಾಡಿ ವಲಯ ಘಟಕದ ವತಿಯಿಂದ ಜೂ.6 ರಂದು “ಶಾಲೆಯ ಶ್ರೇಷ್ಠ ಪ್ರತಿಭೆ” ಪ್ರಶಸ್ತಿ-ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.

ಅಂದು ಬೆಳಗ್ಗೆ 10:30ಕ್ಕೆ ಪಟ್ಟಣದ ಸುರಕ್ಷಾ ಕ್ಯಾಂಟೀನ್ ಪ್ರದೇಶದಲ್ಲಿರುವ ಅದಾನಿ ಸಕ್ಷಮ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಚಿತ್ತಾಪುರ ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿ ಜಗದೇವಿ ಹತ್ತೂರ ಉದ್ಘಾಟಿಸುವರು.

Contact Your\'s Advertisement; 9902492681

ಕಸಾಪ ಅಧ್ಯಕ್ಷ ಸಿದ್ದಯ್ಯ ಶಾಸ್ತಿ ನಂದೂರಮಠ ಅಧ್ಯಕ್ಷತೆ ವಹಿಸುವರು. ಎಸಿಸಿ ಕಾರ್ಖಾನೆಯ ಎಚ್‌ಆರ್ ವಿಭಾಗದ ಮುಖ್ಯಸ್ಥ ಎಡ್ಡು ಕೋಟೇಶ್ವರರಾವ, ಸಿಎಸ್‌ಆರ್ ವಿಭಾಗದ ಮುಖ್ಯಸ್ಥ ಎಂ.ವೀರೇಶ, ಶ್ರೀಶೈಲ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಸದಾಶಿವ ಕಟ್ಟಿಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಕಸಾಪ ಗೌರವ ಕಾರ್ಯದರ್ಶಿ ಚಂದ್ರು ಕರಣಿಕ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here