ಬಿಸಿ ಬಿಸಿ ಸುದ್ದಿ

ಮರ ಬೆಳೆಸಿ ಪರಿಸರ ಉಳಿಸುವುದು ಎಲ್ಲರ ಜವಬ್ದಾರಿಯಾಗಿದೆ; ನ್ಯಾ. ಮಾರುತಿ ಕೆ

ಸುರಪುರ: ಇಂದು ವಾತಾವರಣ ಕಲುಷಿತಗೊಳ್ಳುತ್ತಿದೆ,ಬಿಸಿಲ ಧಗೆ ಹೆಚ್ಚುತ್ತಿದೆ ಇದಕ್ಕೆ ಮರ ಬೆಳೆಸದೆ ಪರಿಸರ ನಾಶ ಮಾಡುತ್ತಿರುವುದು ಕಾರಣವಾಗಿದೆ,ಅದಕ್ಕಾಗಿ ಎಲ್ಲರು ಮರ ಬೆಳೆಸುವ ಮೂಲಕ ಪರಿಸರ ಉಳಿಸುವುದು ಎಲ್ಲರ ಜವಬ್ದಾರಿಯಾಗಿದೆ ಎಂದು ದಿವಾಣಿ ನ್ಯಾಯಾಧೀಶ ಮಾರುತಿ ಕೆ ತಿಳಿಸಿದರು.

ನಗರದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ,ನ್ಯಾಯವಾದಿಗಳ ಸಂಘ,ಅರಣ್ಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಇವರುಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿ,ಮರ ಮನುಷ್ಯನ ಜೀವ ರಕ್ಷಣೆ ಮಾಡುತ್ತದೆ,ಕಾರ್ಬನ್ ಡೈ ಆಕ್ಸೈಡ್‍ನ್ನು ಹೀರಿಕೊಂಡು ನಮಗೆಲ್ಲರಿಗೆ ಆಮ್ಲಜನಕವನ್ನು ನೀಡುತ್ತಿದೆ,ಶುದ್ಧ ಗಾಳಿ ದೊರೆಯಬೇಕಾದರೆ ನಾವೆಲ್ಲರು ಮರ ಬೆಳೆಸುವುದು ಮುಖ್ಯವಾಗಿದೆ.ಅದಕ್ಕಾಗಿಯೇ ಪ್ರತಿ ವರ್ಷ ಜೂನ್ 5 ರಂದು ಪರಿಸರ ದಿನವನ್ನು ಆಚರಿಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ಬಸವರಾಜ ಅವರು ಮಾತನಾಡಿ,ಇಂದು ನಾವೆಲ್ಲರು ಒಂದೊಂದು ಸಸಿ ನೆಟ್ಟು ಪೋಷಣೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕಿದೆ.ಕಳೆದ ತಿಂಗಳಷ್ಟೆ ತಾಪಮಾನದ ಏರಿಕೆಯಿಂದ ಎಷ್ಟೊಂದು ಬಿಸಿಲಿನ ಧಗೆಯನ್ನು ಕಂಡಿದ್ದೇವೆ,ಅದನ್ನು ತಗ್ಗಿಸಲು ಮರ ಬೆಳೆಸುವುದು ಅಗತ್ಯವಾಗಿದೆ. ಅದಕ್ಕಾಗಿ ಇಂದು ನಾವೆಲ್ಲರು ವಿಶ್ವ ಪರಿಸರ ದಿನವನ್ನು ಆಚರಿಸುತ್ತಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಅರಣ್ಯ ಅಧಿಕಾರಿ ಬುರಾನುದ್ದಿನ್,ಶರಣಪ್ಪ ಕುಂಬಾರ, ತೋಟಗಾರಿಕೆ ಇಲಾಖೆ ಅಧಿಕಾರಿ ಪರಮೇಶ್,ವಕೀಲರಾದ ಮಹ್ಮದ ಹುಸೇನ್,ಆದಪ್ಪ ಹೊಸಮನಿ,ಎಮ್.ಟಿ ಮಂಗಿಹಾಳ ಸೇರಿದಂತೆ ಅನೇಕ ಜನ ವಕೀಲರು,ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಭಾಗವಹಿಸಿದ್ದರು.

ಗೃಹರಕ್ಷಕ ದಳ ವಿಶ್ವ ಪರಿಸರ ದಿನಾಚರಣೆ: ತಾಲೂಕು ಗೃಹರಕ್ಷಕ ದಳದ ವತಿಯಿಂದ ನಗರದ ಶ್ರೀ ಪ್ರಭು ಕಾಲೆಜ್ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ,ಮದ್ಯದ ಬಾಟಲಿಗಳು,ಗಾಜಿನ ಚೂರುಗಳು, ಕಸ ಹಾಗೂ ಮುಳ್ಳಿನ ಗಿಡಗಳನ್ನು ತೆರವುಗೊಳಿಸುವ ಮೂಲಕ ವಿಶೇಷವಾಗಿ ವಿಶ್ವ ಪರಿಸರ ದಿನವನ್ನು ಆಚರಿಸಿದರು.ಕಂಪನಿ ಕಮಾಂಡರ್ ಯಲ್ಲಪ್ಪ ಹುಲಿಕಲ್,ಫ್ಲಾಟೂನ್ ಕಮಾಂಡರ್ ವೆಂಕಟೇಶ್ವರ ಸುರಪುರ,ರಮೇಶ ಅಂಬುರೆ,ಶರಣು ಯಾದಗಿರಿ,ಸುರೇಶ ಗೋನಾಲ,ಸುರೇಶ ಕವಡಿಮಟ್ಟಿ,ಗುರುನಾಥ ಜಾಧವ್, ಬಸ್ಸಣ್ಣ,ಹೆಚ್.ರಾಠೋಡ್,ಧರ್ಮರಾಜ್,ಮಾಧುರಿ,ಸೃಷ್ಠಿ,ಬಸಮ್ಮ,ಅವಿತಾ,ರೇಣುಕಾ,ರೇಖಾ ಸೇರಿದಂತೆ ಅನೇಕರಿದ್ದರು.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

22 mins ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

2 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

15 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

15 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

17 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

17 hours ago