ರಾವೂರ: ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ದಿ ಸಂಸ್ಥೆಯಲ್ಲಿ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಸಿಗೆ ನಿರುಣಿಸಿ ಚಾಲನೆ ನೀಡಲಾಯಿತು.
ಇ ವೇಳೆ ಮಾತನಾಡಿದ ಸಿದ್ದಲಿಂಗ ಶ್ರೀಗಳು ಎಲ್ಲಾ ಗ್ರಹಗಳಲ್ಲಿ ಭೂಮಿಯಲ್ಲಿ ಮಾತ್ರ ಜೀವಿಗಳು ವಾಸವಾಗಿವೆ. ಇಂತಹ ಅಮುಲ್ಯವಾದ ಭೂಮಿಯನ್ನು ವಿವಿಧ ಮಾಲಿನ್ಯಗಳ ಮೂಲಕ ಹಾಳುಮಡುತ್ತಿದ್ದೇವೆ. ಜಾಗತಿಕಾರಣ ಮತ್ತು ನಾಗರಿಕರಣದ ಭರಾಟೆಯಲ್ಲಿ ಮಾನವನ ಅತಿಯಾಸೆಗೆ ಸಿಲುಕಿ ಭೂಮಿ ನಲುಗುತ್ತಿದೆ. ಅರಣ್ಯಗಳ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಮಳೆ ಕಡಿಮೆಯಾಗಿ ನೀರಿಗೆ ಆಹಾಕಾರ ಉಂಟಾಗುತ್ತಿದೆ. ವಾತಾವರಣದಲ್ಲಿ ಉಷ್ಣತೆ ಹೆಚ್ಚಾಗಿ ಜೀವಿಗಳು ಸಾಯುತ್ತಿವೆ . ಇಂತಹ ದುರ್ಗತಿ ತಪ್ಪಿಸಲು ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಜೋಪಾನ ಮಾಡಿದಾಗ ಮಾತ್ರ ಪ್ರಕೃತಿ ಉಳಿಯಲು ಸಾಧ್ಯ ಆದ್ದರಿಂದ ನಾವೆಲ್ಲರೂ ಮರಗಳನ್ನು ಬೆಳೆಸುವ ಸಂಕಲ್ಪ ಮಾಡೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕಿ ಗೀತಾ ಜಮಾದಾರ ಪರಿಸರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಿದ್ದಲಿಂಗ ಬಾಳಿ, ಈಶ್ವರಗೌಡ ಪಾಟೀಲ್, ಗಂಗಪ್ಪ ಕಟ್ಟಿಮನಿ, ವಿಜಯಲಕ್ಷ್ಮಿ ಬಮ್ಮನಳ್ಳಿ, ಶಿವಕುಮಾರ್ ಸರಡಗಿ, ಶರಣು ಸಜ್ಜನ್, ಶಿವಾನಂದ ಡೋಮನಾಳ, ಈರಣ್ಣ ಹಳ್ಳಿ. ರಾಜು ಆಳ್ಳೊಳ್ಳಿ, ಅನುಸೂಯ ಹುಗಾರ್, ರೇಖಾ, ಮಲ್ಲಮ್ಮ ಸೇತಿದಂತೆ ಹಲವರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…