ಅನುದಿನವೂ ಪರಿಸರ ದಿನವಾಗಬೇಕು

0
39

ಕಲಬುರಗಿ: ಪರಿಸರ ಸ್ನೇಹಿ ನಡುವಳಿಕೆಯನ್ನು ಪ್ರದರ್ಶಿಸದಿದ್ದರೆ ಮನುಕುಲಕ್ಕೆ ಉಳಿಗಾಲವಿಲ್ಲ. ಪರಿಸರ ಉಳಿದರೆ ಮನುಕುಲ ಉಳಿಯುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ವಿಶ್ವ ಪರಿಸರ ದಿನದಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದ ಆವರಣದಲ್ಲಿ ಜರುಗಿದ ಅನುದಿನ ಪರಿಸರ ದಿನ ವಿಶೇಷ ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಗಿಡ ಮರಗಳನ್ನು ಹೆಚ್ಚೆಚ್ಚು ಬೆಳೆಸುವ ಮೂಲಕ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ವಾಗಿದೆ.

Contact Your\'s Advertisement; 9902492681

ಜಿಲ್ಲಾ ಕಸಾಪ ದ ರವೀಂದ್ರಕುಮಾರ ಭಂಟನಳ್ಳಿ, ಶ್ರೀಕಾಂತ ಪಾಟೀಲ ತಿಳಗೂಳ, ಎಂ.ಎನ್. ಸುಗಂಧಿ, ಪ್ರಭವ ಪಟ್ಟಣಕರ್, ನವಾಬ್ ಖಾನ್, ಸೈಯದ್ ನಜಿರುದ್ದೀನ್ ಮುತ್ತವಲಿ, ಸಂತೋಷ ಕುಡಳ್ಳಿ, ಪ್ರಭಾವತಿ, ಪ್ರಸಾದ ಜೋಶಿ, ರಾಜೇಂದ್ರ ಮಾಡಬೂಳ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here