ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಏರಿಕೆ ವಿರೋಧಿಸಿ ರೈತರ ಪ್ರತಿಭಟನೆ: ಬೆಳೆ ಹಾನಿಗೆ ಪರಿಹಾರಕ್ಕೆ ಒತ್ತಾಯ

ಕಲಬುರಗಿ: ಬೀಜ, ರಸಗೊಬ್ಬರ ಬೆಲೆ ಏರಿಕೆ ವಿರೋಧಿಸಿ ಹಾಗೂ ನಕಲಿ ಮೆಕ್ಕೆಜೋಳ ಬೀಜದಿಂದ ಬೆಳೆ ಹಾನಿಯಾಗಿದ್ದು, ಕೂಡಲೇ ಸಂತ್ರಸ್ತ ರೈತನಿಗೆ ನಷ್ಟ ಭರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಬುಧವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.

ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಡಾ. ಸಾಯಬಣ್ಣಾ ಗುಡುಬಾ, ದಿಲೀಪ್ ನಾಗೂರೆ, ಜಾಫರ್‍ಖಾನ್, ಪರಮೇಶ್ವರ್ ಕಾಂತಾ, ರಾಯಪ್ಪ ಹುರುಮುಂಜೆ, ಸುಭಾಷ್ ಜೇವರ್ಗಿ, ಜಾವೇದ್ ಹುಸೇನ್, ದೇವಿಂದ್ರಪ್ಪ ಪಾಟೀಲ್ ಮುಂತಾದವರು ಪಾಲ್ಗೊಂಡಿದ್ದರು.

ಪ್ರತಿಭಟನೆಕಾರರು ನಂತರ ಜಂಟಿ ಕೃಷಿ ನಿರ್ದೇಶಕರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ರೈತರು ಬೆಳೆದ ಬೆಳೆಗಳಿಗೆ ಎಂಎಸ್‍ಪಿಯು ಇಲ್ಲ. ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯ ಪ್ರಕಾರ ಸಿ2+50 ಸೇರಿಸಿ ಬೆಂಬಲ ಬೆಲೆ ಕೊಡಬೇಕು. ಸಕ್ಕಾಪಟ್ಟೆ ಲಾಗೋಡಿ ಮಾಡಿದ ರೈತರ ಬೆಳೆಗಳಿಗೆ ಕವುಡಿ ಕಿಮ್ಮತ್ತು ಇಲ್ಲ. ಇದು ಘೋರ ಅನ್ಯಾಯ ಮಾಡಿದಂತಾಗಿದೆ. ಬರಗಾಲದ ಅಬ್ಬರದಲ್ಲಿ ರೈತರು ಕಂಗಾಲಾಗಿದ್ದಾರೆ. ಬಿತ್ತನೆ ಬೀಜಕ್ಕೆ ಸಹಾಯಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಕಳೆದ ವರ್ಷ ಶತಮಾನದಲ್ಲಿಯೇ ಕಂಡರಿಯದ ಭೀಕರ ಬರಗಾಲವನ್ನು ರಾಜ್ಯ ಅನುಭವಿಸಿತ್ತು. ಈ ವರ್ಷ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆಗಿದೆ. ಮುಂಗಾರು ಮಳೆ ಕೂಡ ಉತ್ತಮವಾಗಿರಲಿದೆ ಎಂಬ ಸೂಚನೆಗಳು ಬರುತ್ತಿವೆ. ಎಲ್ಲೆಡೆ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಆದಾಗ್ಯೂ, ಬಿತ್ತನೆ ಬೀಜಗಳ ಕೊರತೆ ಎಲ್ಲೆಡೆ ಕಂಡುಬಂದಿದೆ. ಬಿತ್ತನೆ ಬೀಜಗಳು ಎಲ್ಲೆಡೆ ಶೇಕಡಾ 40ರಿಂದ 50ರಷ್ಟು ಏರಿಕೆ ಕಂಡಿದೆ ಎಂದು ಅವರು ಆರೋಪಿಸಿದರು.

ಅಗತ್ಯ ಬಿತ್ತನೆ ಬೀಜಗಳ ಕೊರತೆಯನ್ನು ರಾಜ್ಯ ಎದುರಿಸುತ್ತಿದೆ. ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಖಾಲಿ ಇರುವ ಹುದ್ದೆಗಳಿಂದಾಗಿ ರೈತರಿಗೆ ಸಕಾಲದಲ್ಲಿ ಸೇವೆ ಸಿಗುತ್ತಿಲ್ಲ. ಬಿತ್ತನೆ ಚಟುವಟಿಕೆಗಳಿಗೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಬಿತ್ತನೆ ಬೀಜಗಳಿಗಾಗಿ ರೈತರು ಗಂಟೆಗಂಟಲೇ ಸಾಲುಗಟ್ಟಿ ನಿಲ್ಲುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಕೂಡಲೇ ಅಗತ್ಯ ಬೀಜಗಳು ಮತ್ತು ರಸಗೊಬ್ಬರಗಳನ್ನು ಸಕಾಲದಲ್ಲಿ ಒದಗಿಸಲು ಹಾಗೂ ಅವುಗಳ ಬೆಲೆಗಳನ್ನು ನಿಯಂತ್ರಿಸಿ, ರೈತರಿಗೆ ಹೊರೆಯಾಗದಂತೆ ಸಹಾಯಧನದಲ್ಲಿ ವಿತರಿಸಬೇಕು ಎಂದುಅ ವರು ಒತ್ತಾಯಿಸಿದರು.

ಬರಗಾಲ ಮತ್ತು ರೈತರ ಆತ್ಮಹತ್ಯೆಗಳು ರಾಜ್ಯದ ಬರಗಾಲ ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯದಿಂದಾಗಿ ಜಿಲ್ಲೆಯಲ್ಲಿ ರೈತ ಕುಟುಂಬಗಳ ಆತ್ಮಹತ್ಯೆಗಳು ಮುಂದುವರೆಯುತ್ತಿವೆ. ಚಿಂಚೋಳಿ ತಾಲ್ಲೂಕಿನ ಅಣವಾರ್ ಜಮೀನು ನಾಲ್ಕು ಎಕರೆ ಮೆಕ್ಕೆಜೋಳ ಬೀಜ ಖರೀದಿ ತಂದಿದ್ದು, ಲಾಗೋಡಿ ಮಾಡಿ ಬಿತ್ತನೆ ಮಾಡಿ ಮೊಳಕೆ ಒಡೆದು ಒಳ್ಳೆಯ ರೀತಿಯಿಂದ ಮೆಕ್ಕೆಜೋಳ ಬೆಳೆದು ನಿಂತಿದೆ. ಆದಾಗ್ಯೂ, ಮಾತ್ರ ಮೆಕ್ಕೆತೆನೆ ಬಿಟ್ಟು ದಾಣಿ ಮಾತ್ರ ತುಂಬಿಲ್ಲ. ನಕಲಿ ಬೀಜ ಕೊಟ್ಟು ಮೋಸ ಮಾಡಿದ ಬೀಜದ ಕಂಪೆನಿ ಕಪ್ಪು ಪಟ್ಟಿಗೆ ಸೇರಿಸಿ ಕಾನೂನು ಪ್ರಕಾರ ಕಂಪೆನಿ ವಿರುದ್ಧ ಕ್ರಮ ಕೈಗೊಂಡು, ರೈತ ನಾಗಪ್ಪ ಪೂಜಾರಿ ಅವರಿಗೆ ನಷ್ಟ ಭರಿಸಬೇಕು ಎಂದು ಅವರು ಆಗ್ರಹಿಸಿದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

13 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

13 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

13 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

13 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

13 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420