ಕಲಬುರಗಿ: ಸತತ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಹುಮತ ಪಡೆದು ದಶಕಗಳ ಕಾಲ ಜನವಿರೋದಿ ದುರಾಡಳಿತ ನಡೆಸಿದ್ದ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಹಿನ್ನಡೆಯನ್ನುಂಟು ಮಾಡುವ ಮೂಲಕ ತಾನು ಪ್ರಜಾಪ್ರಭುತ್ವ ಮತ್ತು ಸಂವಿಧಾನ ಹಾಗು ಜನ ಜೀವನದ ಮೇಲಿನ ಧಾಳಿಗಳನ್ನು ಸಹಿಸುವುದಿಲ್ಲವೆಂಬ ಸಂದೇಶವನ್ನು ಜನತಾ ತೀರ್ಪು ನೀಡಿ ಜನತಾ ತೀರ್ಪು ಬಿಜೆಪಿ ಮತ್ತು ನರೇಂದ್ರ ಮೋದಿಯವರಿಗೆ ಮುಖಭಂಗ ಉಂಟು ಮಾಡಿದೆ ಎಂದು ಸಿಪಿಐ(ಎಂ) ಕಾರ್ಯದರ್ಶಿ ಯು.ಬಸವರಾಜ, ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ವಿಶ್ಲೇಷಿಸಿದ್ದಾರೆ.
ನಿರುದ್ಯೋಗ, ಬೆಲೆ ಏರಿಕೆ, ಕೃಷಿ ಸಂಕಷ್ಟ, ಪ್ರಜಾಪ್ರಭುತ್ವ ಹಾಗು ಸಂವಿಧಾನದ ಮೇಲಿನ ದಾಳಿ ಮತ್ತು ಕೋಮು ದ್ವೇಷದ ವಿರುದ್ದ ಒಟ್ಟಾಗಿ ನಿಂತುದು INDIA ಕೂಟದ ಜೊತೆ ಜನತೆ ನಿಲ್ಲಲು ಕಾರಣವಾಗಿದೆ. ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿಯವರು ನೀತಿ ಸಂಹಿತೆಯನ್ನು ಉಲ್ಲಂಘಿಸಿ ಮಾಡಿದ ದ್ವೇಷ ಭಾಷಣದ ವಿರುದ್ದ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದಲ್ಲಿ ಖಂಡಿತವಾಗಿ ಬಿಜೆಪಿ ಮತ್ತಷ್ಟು ಹಿನ್ನಡೆ ಅನುಭವಿಸುತ್ತಿತ್ತು ಎಂದು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿ ಸಿಪಿಐ(ಎಂ) 04, ಸಿಪಿಐ ಹಾಗೂ ಸಿಪಿಐ(ಎಂ,ಎಲ್) ತಲಾ 02 ಸೇರಿ ಒಟ್ಟಾಗಿ ಎಡಪಕ್ಷಗಳು 08 ಸ್ಥಾನಗಳನ್ನು ಪಡೆದು ಹಿಂದಿಗಿಂತ ಉತ್ತಮ ಸ್ಥಿತಿ ಹೊಂದಿವೆ. ಕರ್ನಾಟಕದಲ್ಲಿಯೂ ಬಿಜೆಪಿ, ಜೆಡಿಎಸ್ ಹಾಗು ಜನಾರ್ದನ ರೆಡ್ಡಿ ಜೊತೆ ಕೈ ಜೋಡಿಸಿಯೂ ಮತ್ತು ಲಿಂಗಾಯತ ಹಾಗು ಒಕ್ಕಲಿಗ ಜಾತಿ ಸಮೀಕರಣ ಮಾಡಿ, ಕೋಮುವಾದ ಅಪ್ಪಿಕೊಂಡಿದ್ದರೂ, ನರೇಂದ್ರ ಮೋದಿ ದೇವೇಗೌಡರ ಪ್ರಚಾರ ನಡೆಸಿಯೂ ಅದು ಹಿನ್ನಡೆ ಅನುಭವಿಸಿದೆ. ಕಳೆದ ಬಾರಿಗೆ ಹೋಲಿಸಿದರೆ ಶೇ 5 ರಷ್ಟು ಮತಗಳ ಹಿನ್ನಡೆ ಕಂಡಿದ್ದು, ಸಿಪಿಐ(ಎಂ) ಮತ್ತಿತರೆ ಪ್ರಜಾಸತ್ತಾತ್ಮಕ ಶಕ್ತಿಗಳ ಕರೆಗೆ ಓಗೊಟ್ಟು ಬಿಜೆಪಿಯನ್ನು ಹಿಮ್ಮೆಟ್ಟಿಸಿ, ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಮುಂದಾದದ ಜನತೆಯನ್ನು ಪಕ್ಷ ಅಭಿನಂದಿಸುತ್ತದೆ ಎಂದಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…