ಕಲಬುರಗಿ: ಕರ್ನಾಟಕದ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದ, ಸಾದ್ವಿ ಶಿರೋಮಣಿ ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರದಲ್ಲಿ ಅರಂಭಗೊಂಡಿದೆ.
ಈಶಾನ್ಯ ಪದವೀಧರ ಮತ ಎಣಿಕೆ ಹಿನ್ನೆಲೆ ಬೆಳಿಗ್ಗೆ 8 ಗಂಟೆಗೆ ಪೋಸ್ಟಲ್ ಬಾಕ್ಸ್ ಓಪನ್ ಮಾಡಿ ಮತಪತ್ರಗಳ ರ್ಯಾಂಡಮೈಜೇಷನ್ ಮಾಡಿ ತಲಾ 25 ಮತಗಳ ಬಂಡಲ್ ಕಟ್ಟುವ ಕಾರ್ಯ ಮುಗಿದಿದೆ. ಸಂಜೆ 4 ಗಂಟೆಗೆ 14 ಟೇಬಲ್ ಮೂಲಕ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ಚಲಾವಣೆಯಾದ 1,09,082 ಮತಗಳ ಎಣಿಕೆ ಕಾರ್ಯ ಮುಗಿದ ಮೇಲೆ ಪುರಸ್ಕೃತ ಮತ್ತು ತಿರಸ್ಕೃತ ಮತಗಳು ಹಾಗೂ ಅಭ್ಯರ್ಥಿವಾರು ಪ್ರಥಮ ಪ್ರಾಶಸ್ತ್ಯ ಪಡೆದ ಮತಗಳ ಮಾಹಿತಿ ಲಭ್ಯವಾಗಲಿದೆ ನಂತರ ವಿನ್ನಿಂಗ್ ಕೋಟಾ ಶೇ.50+1 ಫಿಕ್ಸ್ ಮಾಡಲಾಗುತ್ತದೆ ತದನಂತರ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ವಿನ್ನಿಂಗ್ ಕೋಟಾ ನಿಯಮದಂತೆ ಶೇ.50+1 ಮತ ಯಾವುದೇ ಅಭ್ಯರ್ಥಿ ಪಡೆದಿದ್ದಲ್ಲಿ ಅವರನ್ನು ವಿಜಯಶಾಲಿ ಎಂದು ಘೋಷಿಸಲಾಗುತ್ತದೆ.
ಒಂದು ವೇಳೆ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಯಾವುದೇ ಅಭ್ಯರ್ಥಿಗೆ ಶೇ.50+1 ಮತ ಸಿಗದಿದ್ದಲ್ಲಿ ಆಗ ಎಲಿಮಿನೇಟ್ ರೌಂಡ್ ಆರಂಭವಾಗಿ ಅತ್ಯಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ಎಲಿಮಿನೇಟ್ ಮಾಡಿ ಎರಡನೇ ಪ್ರಾಶಸ್ತ್ಯ ಮತ ಎಣಿಕೆ ಆರಂಭವಾಗಲಿದ್ದು, ಟ್ರೆಂಡ್ಸ್ ಮಾಹಿತಿ ರಾತ್ರಿ 9-10 ಗಂಟೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.
ಮತ ಏಣಿಕೆ ಕೇಂದ್ರದಲ್ಲಿ ಚುನಾವಣಾ ಅಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ, ಚುನಾವಣೆ ವೀಕ್ಷಕರಾದ ಎಂ ಮಹೇಶ್ವರ ರಾವ್, ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ, ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಕಲಬುರಗಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ ಮುಂತಾದವರು ಇದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…