ಕಾಲಕಾಲಕ್ಕೆ ಮಳೆಯಾಗಲು ಗಿಡಮರಗಳನ್ನು ಬೆಳೆಸುವುದು ಅನಿವಾರ್ಯ: ಜೂಜಾರೆ

ಶಹಾಬಾದ: ಪ್ರತಿಯೊಂದು ಮರವು ಮಾನವನ ಜೀವಾಳ.ಮಾನವ ಜೀವಂತವಾಗಿ ಇರಲು ಗಿಡ-ಮರಗಳು ಅನಿವಾರ್ಯ.ಕಾಲಕಾಲಕ್ಕೆ ಮಳೆಯಾಗಬೇಕಾದಲ್ಲಿ ಗಿಡಮರಗಳನ್ನು ಬೆಳೆಸುವುದು ಅನಿವಾರ್ಯ ಎಂದು ಸಿ.ಎ.ಇಂಗಿನಶೆಟ್ಟಿ ಕಾಲೇಜಿನ ಪ್ರಾಂಶುಪಾಲ ರಾಜಗೋಪಾಲ ಜೂಜಾರೆ ಹೇಳಿದರು.

ಅವರು ಬುಧವಾರ ನಗರದ ರಾಷ್ಟ್ರಭಾಷಾ ಶೀಕ್ಷಣ ಸಮಿತಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಪರಿಸರವನ್ನು ಉಳಿಸಬೇಕಾದರೆ ಹೆಚ್ಚು ಗಿಡ-ಮರಗಳನ್ನು ಬೆಳಸಬೇಕು. ಆಧುನಿಕ ಜೀವನ ಶೈಲಿಯೊಂದಿಗೆ ಪರಿಸರ ಅವನತಿಯ ಅಂಚಿಗೆ ಬಂದಿದೆ. ಇಂದಿನ ಮಕ್ಕಳು ಪರಿಸರವನ್ನು ಉಳಿಸುವುದು ಅನಿವಾರ್ಯವಾಗಿದೆ. ಪರಿಸರ ದಿನಾಚರಣೆಯಲ್ಲಿ ಮಾತ್ರ ಗಿಡ ನೆಡುವುದನ್ನು ಬಿಟ್ಟು, ಸದಾ ಕಾಲ ಪರಿಸರದ ಕಾಳಜಿ ಹೊಂದಬೇಕು ಎಂದು ಸಲಹೆ ನಿಡಿದರು.

ಎಸ್.ಎಸ್.ನಂದಿ ಪ್ರೌಢಶಾಲೆಯ ಮುಖ್ಯಗುರು ಸುಧೀರ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬಡಾವಣೆಯ ರಸ್ತೆ ಪಕ್ಕದಲ್ಲಿ, ಮನೆಯ ಅಕ್ಕ-ಪಕ್ಕದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು.

ಕಾಡನ್ನು ಬೆಳಸಿ ನಾಡು ಉಳಿಸಿ. ಕಾಡು ಬೆಳೆದರೆ ಉತ್ತಮವಾದ ಮಳೆ ಬೆಳೆಯಾಗುತ್ತದೆ. ಇದರಿಂದ ಪ್ರತಿಯೊಬ್ಬರೂ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ.ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ಗಿಡ, ಮರಗಳನ್ನು ಹೆಚ್ಚು ಬೆಳೆಸಬೇಕು ಎಂದರು.

ಎಸ್.ಜಿ.ವರ್ಮಾ ಹಿಂದಿ ಪ್ರೌಢಶಾಲೆಯ ಮುಖ್ಯಗುರು ಮಲ್ಲಿನಾಥ ಪಾಟೀಲ ಮಾತನಾಡಿ, ಪ್ರಕೃತಿ ನಮಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಶುದ್ಧ ನೀರು, ಗಾಳಿ, ಆಹಾರ ಸೇರಿದಂತೆ ಇನ್ನು ಅನೇಕ ಅಗತ್ಯ ವಸ್ತುಗಳನ್ನು ನೀಡುತ್ತಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವ ಇಚ್ಛೆಯಿಂದ ಗಿಡ, ಮರಗಳನ್ನು ಬೆಳೆಸಿ, ಪರಿಸರ ಸಂರಕ್ಷಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಬಾಬಾಸಾಹೇಬ ಸಾಳುಂಕೆ, ಚನ್ನಬಸಪ್ಪ ಕೊಲ್ಲೂರ್,ಮಹೇಶ್ವರಿ ಗುಳಿಗಿ,ರಂಜಿತಾ ಹಿರೇಮಠ, ಸುರೇಖಾ ಜಾಯಿ ಸೇರಿದಂತೆ ಶಾಲಾ ಮಕ್ಕಳು ಹಾಜರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420