ಚಂದ್ರಶೇಖರ ಪಾಟೀಲ್ ಗೆಲುವು ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

ಶಹಾಬಾದ: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಗೆಲುವು ಸಾಧಿಸಿದ ಹಿನ್ನೆಯಲ್ಲಿ ಶುಕ್ರವಾರ ನಗರದ ನೆಹರು ವೃತ್ತದಲ್ಲಿ ಜಿಲ್ಲಾ ಕಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಡಾ.ರಶೀದ್ ಮರ್ಚಂಟ್ ಮಾತನಾಡಿ,ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ತನ್ನ ಚಾಪನ್ನು ಮೂಡಿಸಿದ ಬೆನ್ನಲ್ಲೆ, ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಎರಡನೇ ಬಾರಿ ಗೆಲುವು ದಾಖಲಿಸುವ ಮೂಲಕ ಕಾಂಗ್ರೆಸ್ ಭದ್ರಕೋಟೆಯಾಗಿ ನಿರ್ಮಾಣವಾಗಿದೆ. ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಸಂಘಟನೆಯಿಂದ ಇಂದು ಬಿಜೆಪಿ ಸಂಪೂರ್ಣ ನೆಲ ಕಚ್ಚಿದೆ.ಇನ್ನು ಪಕ್ಷವನ್ನು ಗಟ್ಟಿಯಾಗಿ ಕಟ್ಟುವುದರ ಮೂಲಕ ಖರ್ಗೆ ಅವರಿಗೆ ಕೈ ಜೋಡಿಸೋಣ.ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರಕಾರ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನಮನ್ನಣೆ ಪಡೆಯಲಿದೆ. ನಮ್ಮದು ನುಡಿದಂತಡ ನಡೆಯುವ ಸರಕಾರವಾಗಿದೆ ಎಂದು ಹೇಳಿದರು.

ವಿಜಯೋತ್ಸವದಲ್ಲಿ ಕಾಂಗ್ರೆಸ್ ಮುಖಂಡ ಆನಂದ ಪಾಟೀಲ, ಶರಣಗೌಡ ಪಾಟೀಲ ಗೋಳಾ(ಕೆ), ಮೃತ್ಯುಂಜಯ್ ಹಿರೇಮಠ, ಅಭಿಷೇಕ ಪಾಟೀಲ, ಪೀರಪಾಶಾ, ಕಿರಣ ಚವ್ಹಾಣ, ಸೂರ್ಯಕಾಂತ ಕೋಬಾಳ, ನಾಗಣ್ಣ ರಾಂಪೂರೆ, ಅನ್ವರ್ ಪಾಶಾ,ಡಾ.ಅಹ್ಮದ್ ಪಟೇಲ್, ಮಹ್ಮದ್ ಜಹೀರ್ ಪಟವೇಗರ್, ಮಹ್ಮದ್ ಮಸ್ತಾನ್, ಮಹ್ಮದ್ ಅಜರೋದ್ದಿನ್, ಮಹ್ಮದ್ ಇಮ್ರಾನ್,ಮರಲಿಂಗ ಕಮರಡಗಿ, ಶಂಕರ ಕೋಟನೂರ್,ನಿಂಗಣ್ಣ ಪೂಜಾರಿ,ರಮೇಶ ಪವಾರ,ಮೆಹಬೂಬ ಮದ್ರಿ, ಶೇರ್ ಅಲಿ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

7 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420