ಶಹಾಬಾದ: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಗೆಲುವು ಸಾಧಿಸಿದ ಹಿನ್ನೆಯಲ್ಲಿ ಕಾಂಗ್ರೆಸ್ ಮುಖಂಡರಾದ ನಾಗಣ್ಣ ರಾಂಪೂರೆ,ಮಹ್ಮದ್ ಅಜರೋದ್ದಿನ್,ಮಹ್ಮದ್ ಇಮ್ರಾನ್, ಅಭಿಷೇಕ ಪಾಟೀಲ ಅವರು ಚಂದ್ರಶೇಖರ ಪಾಟೀಲ್ ಅವರಿಗೆ ಹೂಗುಚ್ಚ ನೀಡಿ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ನಾಗಣ್ಣ ರಾಂಪೂರೆ, ಪದವೀಧರ ಮತದಾರರ ಮತ್ತೊಮ್ಮೆ ಕೈ ಹಿಡಿಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಅವರಿಗೆ ಗೆಲ್ಲಿಸಿದ್ದಾರೆ. ಎಲ್ಲಾ ಮತದಾರ ಪ್ರಭುಗಳಿಗೆ ಕೃತಜ್ಞತೆ ಸಲ್ಲಿಸುತ್ತೆನೆ.ನಿಮ್ಮ ಸಮಸ್ಯೆಗಳಿಗೆ ಈ ಬಾರಿ ಎಲ್ಲಾ ರಿತೀಯ ಪರಿಹಾರ ಒದಗಿಸುವಲ್ಲಿ ಚಂದ್ರಶೇಖರ ಪಾಟೀಲರು ಕೆಲಸ ನಿರ್ವಹಿಸುತ್ತಾರೆ.
ರಾಜ್ಯದಲ್ಲಿ ನಮ್ಮ ಸರಕಾರವಿರುವುದರಿಂದ ಮತ್ತಷ್ಟು ಉತ್ತಮ ಕೆಲಸಗಳು ಮಾಡಲು ಸಹಕಾರಿಯಾಗುತ್ತದೆ.ನಮ್ಮ ನಾಯಕರಾದ ಡಾ.ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ,ಅಜಯ್ಸಿಂಗ್, ಅಲ್ಲಮಪ್ರಭು ಪಾಟೀಲ, ಬಿ.ಆರ್. ಪಾಟೀಲ,ಎಂ.ವೈ.ಪಾಟೀಲ, ಮಾಲಿಕಯ್ಯ ಗುತ್ತೆದಾರ ಸೇರಿದಂತೆ ಅನೇಕರ ಸಂಘಟಾತ್ಮಕ ಶಕ್ತಿಯಿಂದ ಇಂದು ಮತ್ತೆ ಹಿಂದಿನ ವೈಭವವನ್ನು ಕಾಂಗ್ರೆಸ್ ಪಕ್ಷದಲ್ಲಿ ಕಾಣುತ್ತಿದ್ದೆವೆ. ಬಿಜೆಪಿಯ ದುರಾಢಳಿತಕ್ಕೆ ಬೇಸತ್ತು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೆಚ್ಚು ಸ್ಥಾನವನ್ನು ನೀಡಿದ್ದಾರೆ.
ಮೋದಿ ಹವಾ ಸಂಪೂರ್ಣ ಪಂಚರ್ ಆಗಿದೆ.ಸುಳ್ಳು ಹೇಳುವ ಭರವಸೆ ನೀಡುವ, ಜಾತಿ-ಧರ್ಮದ ಹೆಸರಿನಲ್ಲಿ ಕೋಮು ಭಾವನೆ ಉಂಟು ಮಾಡುವ ಪಕ್ಷದವರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.ಕಾಂಗ್ರೆಸ್ ಪಕ್ಷವನ್ನು ಮತದಾರರು ಕೈಹಿಡಿದಿದ್ದಾರೆ ಎಂದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…