ಸುರಪುರ: ತಾಲುಕಿನ ಬಾದ್ಯಾಪುರ ಗ್ರಾಮ ದಿಂದ ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರ ಅಭಿಮಾನಿಯೊಬ್ಬ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ದೀಡ ನಮಸ್ಕಾರ ಹಾಕುವ ಮೂಲಕ ತನ್ನ ಹರಕೆ ಸಲ್ಲಿಸಿದ್ದಾನೆ.
ಬಾದ್ಯಾಪುರ ಗ್ರಾಮದ ಕಾಂಗ್ರೆಸ್ ಮುಖಂಡ ಹಾಗೂ ರಾಜಾ ವೇಣುಗೊಪಾಲ ನಾಯಕ ಅವರ ಅಭಿಮಾನಿ ಯಲ್ಲಪ್ಪ ಕವಲ್ದಾರ್ ಕಳೆದ ಮೇ 7 ರಂದು ನಡೆದ ಸುರಪುರ ವಿಧಾನಸಭಾ ಉಪ ಚುನಾವಣೆಯಲ್ಲಿ ರಾಜಾ ವೇಣುಗೋಪಾಲ ನಾಯಕ ಅವರು ಜಯಗಳಿಸಿದಲ್ಲಿ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ದೀಡ ನಮಸ್ಕಾರ ಹಾಕುವುದಾಗಿ ಹರಕೆ ಹೊತ್ತಿದ್ದ,ಈಗ ಫಲಿತಾಂಶ ಬಂದು ರಾಜಾ ವೇಣುಗೋಪಾಲ ನಾಯಕ ಅವರು ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಬಾದ್ಯಾಪುರ ಗ್ರಾಮ ದಿಂದ ಹತ್ತು ಕಿಲೋ ಮೀಟರ್ಗಳ ದೂರದ ಸುರಪುರ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ವರೆಗೆ ದೀಡ ನಮಸ್ಕಾರ ಹಾಕಿ ಹರಕೆ ತೀರಿಸಿದ್ದಾನೆ.
ಗ್ರಾಮ ದಿಂದ ದೀಡ ನಮಸ್ಕಾರದ ಯಾತ್ರೆ ಆರಂಭವಾಗುತ್ತಿದ್ದಂತೆ ಗ್ರಾಮದಲ್ಲಿನ ಅನೇಕ ಜನ ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕ ದಿ.ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರ ಹಿಡಿದು ಭಾಜಾ ಬಜಂತ್ರಿಯೊಂದಿಗೆ ಯಲ್ಲಪ್ಪ ಕವಲ್ದಾರ್ ಜೊತೆಗೆ ತಾವುಗಳು ಸಾಗಿಬಂದು ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ತಲುಪಿದ ನಂತರ ಯಲ್ಲಪ್ಪ ಕವಲ್ದಾರ್ಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಯ್ಯಪ್ಪ ವಾರಿ,ಭೀಮಣ್ಣ ಕುರಿ,ಸಿದ್ದಪ್ಪ ಅಲಗುಂಡಿ,ಭೀಮಣ್ಣ ಕವಲ್ದಾರ್,ಸಕ್ರೆಪ್ಪ ಅಂತೋಳಿ,ಶರಣಪ್ಪ ಬ್ಯಾಳಿ,ಭೀಮಣ್ಣ ಪಾಳೆಗಾರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…