ಕಲಬುರಗಿ : ತಾಲ್ಲೂಕಿನ ಸರಡಗಿ ಬಿ ಗ್ರಾ.ಪಂ. ಕಾರ್ಯದರ್ಶಿ ರೇವಣಸಿದ್ದಪ್ಪ ತಡಕಲ್ ಮತ್ತು ಕಡಣಿ ಗ್ರಾ. ಪಂ ಕಾರ್ಯದರ್ಶಿ ರಾಜಶೇಖರ ಪಾಟೀಲ ಇವರು ವಯೋನಿವೃತ್ತಿ ಹೊಂದಿದ ಪ್ರಯುಕ್ತ ತಾಲ್ಲೂಕು ಪಂಚಾಯತ ವತಿಯಿಂದ ಹಾಗೂ ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕಲಬುರಗಿ ತಾಲ್ಲೂಕು ಪಂಚಾಯತ ಕಾರ್ಯಾಲಯದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಡಿ ಸೈಯ್ಯದ ಪಟೇಲ ರವರ ಅಧ್ಯಕ್ಷತೆಯಲ್ಲಿ ಗೌರವಿಸಿ ಸನ್ಮಾನಿಸಿ ನಿವೃತ್ತಿ ಜೀವನ ಸುಖೀ ಮಯವಾಗಿ, ಆಯಸ್ಸು ಆರೋಗ್ಯ, ನೆಮ್ಮದಿಯ ಜೀವನ ಇರಲೆಂದು ಹಾರೈದಿ ಬೀಳ್ಕೊಡಲಾಯಿತು.
ಈ ಕಾರ್ಯಕ್ರಮದಲ್ಲಿ ಆರ್ಡಿಪಿಆರ್ ಸಹಾಯಕ ನಿರ್ದೇಶಕ ವಿಶ್ವನಾಥ, ತಾಲ್ಲೂಕು ಪಂಚಾಯತ ವ್ಯವಸ್ಥಾಪಕರು, ತಾಲ್ಲೂಕು ಪಂಚಾಯತ ಕಛೇರಿಯ ಎಲ್ಲಾ ಶಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಪಿಡಿಓ ರವರು, ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಯ ಕಾರ್ಯದರ್ಶಿಗಳು,ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಭಾಗವಹಿಸಿದ್ದರು.