ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲರ ಮೇಲೂ ಕಠಿಣ ಕ್ರಮವಾಗಲಿ

ಸುರಪುರ: ನಟಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಆರೋಪದ ಮೇಲೆ ಚಿತ್ರದುರ್ಗ ದಿಂದ ಅಪಹರಿಸಿಕೊಂಡು ಹೋದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿಎ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿ,ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಅದಕ್ಕೆ ಕಾನೂನು ಶಿಕ್ಷೆ ನೀಡಲಿ,ಅದು ಬಿಟ್ಟು ನಟ ದರ್ಶನಾಗಲಿ ಅಥವಾ ಅವರ ಹಿಂಬಾಲಕರಾಗಲಿ ಶಿಕ್ಷೆ ನೀಡುವುದಕ್ಕೆ,ಕೊಲೆ ಮಾಡುವುದಕ್ಕೆ ಅಧಿಕಾರ ನೀಡಿದವರಾರು,ನಟ ಎಂದ ಮೇಲೆ ಯಾರನ್ನಾದರು ಕೊಲೆ ಮಾಡಬಹುದು ಎಂದು ಯಾವ ಕಾನೂನು ಹೇಳಿದೆ,ಇಂದು ರೇಣುಕಾಸ್ವಾಮಿ ಕುಟುಂಬ ಕಣ್ಣೀರಲ್ಲಿ ಮುಳುಗಿದೆ,ಆ ಕುಟುಂಬಕ್ಕೆ ಇಂದು ಯಾರೂ ದಿಕ್ಕಿಲ್ಲದಂತಾಗಿದೆ.

ರೇಣುಕಾಸ್ವಾಮಿ ಕೊಲೆ ಘಟನೆಯನ್ನು ನಮ್ಮ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ಉಗ್ರವಾಗಿ ಖಂಡಿಸುತ್ತದೆ ಮತ್ತು ರೇಣುಕಾಸ್ವಾಮಿ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕು ಮತ್ತು ಕೊಲೆ ಘಟನೆಯ ಎಲ್ಲರಿಗೂ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಒತ್ತಾಯಿಸುತ್ತದೆ ಒಂದು ವೇಳೆ ಘಟನೆ ಸರಿಯಾದ ತನಿಖೆಯಾಗಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡದಿದ್ದಲ್ಲಿ ಸಂಘಟನೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಒತ್ತಾಯಿಸಿದ್ದಾರೆ.

ಯುವ ಹೋರಾಟಗಾರ ಶರಣು ಬಳಿ ಒತ್ತಾಯ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ ಸೇರಿದಂತೆ ಎಲ್ಲರಿಗೂ ಉಗ್ರ ಶಿಕ್ಷೆ ನೀಡಬೇಕು ಎಂದು ಯುವ ಹೋರಾಟಗಾರ ಶರಣು ಬಳಿ ಆಗ್ರಹಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿ,ಕಾನೂನು ಎಲ್ಲರಿಗೂ ಒಂದೆ,ನಟ ದರ್ಶನ ಆಗಲಿ ಜನ ಸಾಮಾನ್ಯರಾಗಲಿ ಕೊಲೆಯನ್ನು ಯಾರೂ ಕೂಡ ಸಹಿಸುವುದಿಲ್ಲ,ತಪ್ಪು ಮಾಡಿದ್ದರೆ ರೇಣುಕಾಸ್ವಾಮಿಗೆ ಶಿಕ್ಷೆ ನೀಡಲು ಕಾನೂನು ಮೊರೆ ಹೋಗಬೇಕಿತ್ತು.ಆದರೆ ತಾವೆ ಕಾನೂನು ಕೈಗೆತ್ತಿಕೊಂಡು ಕೊಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದ್ದು,ಕೊಲೆಯ ಎಲ್ಲಾ ಆರೋಪಿಗಳಿಗೆ ಜೀವಾವಧಿಯಂತಹ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

7 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

12 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

17 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

22 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420