ಬಿಸಿ ಬಿಸಿ ಸುದ್ದಿ

ಶಹಾಬಾದನಲ್ಲಿ ಕಳ್ಳತನ- ಲಕ್ಷಾಂತರ ಚಿನ್ನಾಭರಣ, ನಗದು ಕಳವು

ಶಹಾಬಾದ: ನಗರದ ಅಶೋಕ ನಗರ ಬಡಾವಣೆಯಲ್ಲಿ ಎರಡು ಮನೆಗಳ ಕಳ್ಳತನ ಮಾಡಿರುವ ಕಳ್ಳರು ಮನೆಯಲ್ಲಿದ್ದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ದೋಚಿಕೊಂಡು ಹೋಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಅಶೋಕ ನಗರದ ಮಹ್ಮದ ಇಮ್ರಾನ್ ರವರ ಬಾಡಿಗೆ ನಿವಾಸದಿಂದ 3,55,000 ರೂ.ಗಳು ಮತ್ತು ಪಕ್ಕದ ಮನೆಯ ಮಹ್ಮದ ರಫೀಕ ಮನೆಯಿಂದ 63,000 ರೂ. ಗಳ ಮೌಲ್ಯದ ಬಂಗಾರ ಮತ್ತು ನಗದು ಕದ್ದು ಪರಾರಿಯಾಗಿದ್ದಾರೆ.

ಮನೆಯಲ್ಲಿ ಯಾರು ಇಲ್ಲದನ್ನು ಕಂಡು ಹೊಂಚು ಹಾಕಿ ಖದೀಮರು ಮನೆಯ ಬಾಗಿಲಿನ ಬೀಗ ಮತ್ತು ಅಲ್ಮಾರಿ ತಿಜೋರಿ ಒಡೆದು ಒಟ್ಟು ರೂ. 4,18,500 ರೂ ನಗದು ಹಾಗೂ ಚಿನ್ನದ ಆಭರಣಗಳು ಅಂದಾಜು ರೂ.ಗಳು ಕಳ್ಳತನ ಮಾಡಿದ್ದಾರೆ.

ಇಮ್ರಾನ್ ಮತ್ತು ರಫೀಕ ಅವರ ಮನೆಯನ್ನು ದೋಚಿದ್ದು ಮತ್ತು ಅವರ ಬೆಲೆ ಬಾಳುವ ವಸ್ತುಗಳನ್ನು ಕದ್ದಿರುವುದನ್ನು ಕಂಡು ಅವರು ಬೆಚ್ಚಿ ಬಿದ್ದಿದ್ದಾರೆ.

ಸ್ಥಳಕ್ಕೆ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿ ಕ್ಯಾಮೆರಾಗಳ ಆಧಾರಗಳನ್ನು ಹುಡುಕಾಟ ಮುಂದುವರೆಸಿದ್ದಾರೆ.ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದ್ದು, ಈ ಕುರಿತು ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago