ಜಗದೇವ ಗುತ್ತೇದಾರಗೆ ಜೂ.15ರಂದು ಕಲಬುರಗಿಯಲ್ಲಿ ಸನ್ಮಾನ

0
118

ಕಲಬುರಗಿ: ರಾಜ್ಯ ವಿಧಾನ ಪರಿಷತ್ತಿಗೆ ನಾಮಕರಣಗೊಂಡಿರುವ ಜಗದೇವ ಗುತ್ತೇದಾರ್ ಅವರಿಗೆ ಇದೇ ಜೂ. 15ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೃಹತ್ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸತತ ಏಳು ವರ್ಷ ಸೇವೆ ಸಲ್ಲಿಸಿದ ಜಗದೇವ್ ಅವರ ಪ್ರಾಮಾಣಿಕ ಸೇವೆ ಗುರುತಿಸಿ ಪಕ್ಷದ ವರಿಷ್ಠರು ಅವರನ್ನು ರಾಜ್ಯ ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದಾರೆ. ಇದರಿಂದ ಪಕ್ಷದಲ್ಲಿ ಹಲವು ವರ್ಷಗಳಿಂದ ತಳಮಟ್ಟದ ಕಾರ್ಯಕರ್ತರಿಗೆ ನೈತಿಕ ಬಲ ದೊರೆತಂತಾಗಿದೆ ಎಂದು ಸಮಾಧಾನ ವ್ಯಕ್ತಪಡಿಸಿದರು.

Contact Your\'s Advertisement; 9902492681

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯಸಿಂಗ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ಪಕ್ಷದ ವಿವಿಧ ಆಯಕಟ್ಟಿನ ನಾಯಕರು, ಪ್ರಮುಖರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕಾಂಗ್ರೆಸ್ ಹಿರಿಯ ಮುಖಂಡ ಭೀಮರಾವ್ ತೇಗಲತಿಪ್ಪಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ್, ಜಿಲ್ಲಾ ಪಂಚಾಯತಿ ಮಾಜಿ ಪ್ರತಿಪಕ್ಷ ನಾಯಕ ಶಿವಾನಂದ ಪಾಟೀಲ್ ಮರತೂರ್, ಕಾಂಗ್ರೆಸ್ ಮುಖಂಡರಾದ ನೀಲಕಂಠರಾವ್ ಮುಲಗೆ, ಪ್ರವೀಣ ಹರವಾಳ, ಡಾ.ಕಿರಣ ದೇಶಪಾಂಡೆ, ಈರಣ್ಣ ಝಳಕಿ, ರಮೇಶ್ ಮರಗೋಳ, ಶಿವಾನಂದ ಹೊನಗುಂಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here