ಕಸಾಪದಿಂದ 16 ರಿಂದ ಕಾವ್ಯ ಕಮ್ಮಟ: ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ: ಇಂದಿನ ಯುವ ಪೀಳಿಗೆಯಲ್ಲಿ ಕಾವ್ಯ ಪರಂಪರೆ ಬೆಳೆಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜೂನ್ 16 ರಂದು ಬೆಳಗ್ಗೆ 10.30 ಕ್ಕೆ ಒಂದು ದಿನದ ಕಾವ್ಯ ಕಮ್ಮಟ-2024 ವನ್ನು ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಪರಿಷತ್ತು ಇಂಥ ಕಮ್ಮಟಗಳು ಆಗಾಗ ಆಯೋಜಿಸುವ ಮೂಲಕ ಒಳ್ಳೆಯ ವಿಚಾರಗಳನ್ನು ಪ್ರಸಾರಿಸಿ ಜನರ ಮನಸ್ಸನ್ನು ಸಂಸ್ಕಾರಗೊಳಿಸುವ ಉದ್ದೇಶ ಹೊಂದಲಾಗಿದೆ. ಯಾವುದೇ ಒಂದು ಬರಹವು ಒಳ್ಳೆಯ ಸಮಾಜ ನಿರ್ಮಾಣದ ಆಶಯವನ್ನು ಇರಿಸಿಕೊಂಡಿರುತ್ತದೆ. ಕಾವ್ಯದಲ್ಲಿ ಉತ್ತಮ ಸಮಾಜವನ್ನು ಸೃಷ್ಠಿಸುವ ಶಕ್ತಿ ಹೊಂದಿರುವ ಇಂದಿನ ಹೊಸ ಪೀಳಿಗೆಯನ್ನು ಕಾವ್ಯ ಕ್ಷೇತ್ರದಲ್ಲಿ ತೆಗೆದುಕೊಂಡೊಯ್ಯಲು ಈ ಕಮ್ಮಟವನ್ನು ರೂಪಿಸಲಾಗಿದೆ.

ಕನ್ನಡ ಕಾವ್ಯದ ಸ್ವರೂಪ ವೈವಿಧ್ಯ, ಕನ್ನಡ ಭಾಷೆ ಮತ್ತು ಶೈಲಿ, ಕಾವ್ಯ ರಚನೆಯ ಹೊಸ ಸವಾಲುಗಳು, ಕಾವ್ಯಾಭಿವ್ಯಕ್ತಿಯ ವಿಭಿನ್ನ ಮಾದರಿಗಳು ಇವುಗಳ ಕುರಿತು ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರ ಮಂಡನೆ, ಸಂವಾದ, ಚರ್ಚೆಗಳು ಈ ಕಾವ್ಯ ಕಮ್ಮಟದ ಮುಖ್ಯ ಭಾಗವಾಗಿರುತ್ತವೆ.

ಚಿಂತಕ ಬಿ.ವ್ಹಿ.ಚಕ್ರವರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ನ ಮಾಜಿ ಸದಸ್ಯ ರಾಮಲಿಂಗರೆಡ್ಡಿ ದೇಶಮುಖ ಕೋಡ್ಲಿ, ಜಿಲ್ಲಾ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್. ದೇಸಾಯಿ, ನ್ಯಾಯವಾದಿ ಸುರೇಶ ಪಾಟೀಲ ಜೋಗೂರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಅನುಭವಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ಲಿಂಗಣ್ಣ ಗೋನಾಲ, ಜಗನ್ನಾಥ ಎಲ್ ತರನಳ್ಳಿ, ಡಾ. ಶಿವರಂಜನ್ ಸತ್ಯಂಪೇಟೆ, ಡಾ. ಚಂದ್ರಕಲಾ ಬಿದರಿ ಅವರು ವಿವಿಧ ವಿಷಯಗಳ ಮೇಲೆ ವಿಚಾರ ಮಂಡನೆ ಮಾಡಲಿದ್ದಾರೆ.

ವಿವಿಧ ಗೋಷ್ಠಿಗಳಲ್ಲಿ ವಿವಿಧ ಕ್ಷೇತ್ರದ ಪ್ರಮುಖರಾದ ವಿದ್ಯಾಸಾಗರ ದೇಶಮುಖ, ವಿಶ್ವನಾಥರೆಡ್ಡಿ ಕಾಮರೆಡ್ಡಿ ಗೋಟೂರ, ದೇವೀಂದ್ರ ಮೇಲಕೇರಿ ಧಂಗಾಪೂರ, ನರಸಿಂಗರಾವ ಹೇಮನೂರ, ಶಿವಪುತ್ರ ಕರಣಿಕ್, ಸಾಹೇಬಗೌಡ ಕಡ್ಲಿ ಅವರಾದ, ಪ್ರೊ. ಅಮರೇಸ ಹಾಲ್ವಿ, ಪರಮೇಶ್ವರ ಓಕಳಿ, ದೇವಯ್ಯಾ ಗುತ್ತೇದಾರ, ಪರಮೇಶ್ವರ ಮಡಿವಾಳ ಕಾಳಗಿ, ಗುರುಶಾಂತಪ್ಪ ಓಗಿ ತಾಜ್ ಸುಲ್ತಾನಪುರ, ಬಸವರಾಜ ಹೆಳವರ ಸೇರಿದಂತೆ ಅನೇಕರು ವೇದಿಕೆ ಮೇಲಿರುವರು ಎಂದು ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ ತಿಳಿಸಿದ್ದಾರೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420