ಸುರಪುರ; ಹಿಂದೆ ನಮ್ಮ ತಂದೆಯವರು ಇದ್ದಾಗ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಅದನ್ನು ಮುಂದುವರಿಸಿಕೊಂಡು ಹೋಗುತ್ತೇನೆ, ಕ್ಷೇತ್ರದ ಅಭಿವೃದ್ಧಿಗೆ ಎಲ್ಲರ ಸಹಕಾರ ಬಯಸುವೆ ಎಂದು ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.
ನಗರದ ತಮ್ಮ ಕಚೇರಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಹಿಂದೆ ನಮ್ಮ ತಂದೆಯವರು ಇದ್ದಾಗ ಅವರೊಂದಿಗೆ ಕ್ಷೇತ್ರದಲ್ಲಿ ಸಂಚರಿಸಿ ಅವರು ಮಾಡುತ್ತಿದ್ದ ಕಾರ್ಯಗಳು, ಸಾರ್ವಜನಿಕರೊಂದಿಗೆ ಅವರಿಗಿದ್ದ ಒಡನಾಟ ಹಾಗೂ ಜನರ ಸಮಸ್ಯೆಗಳಿಗೆ ಅವರು ಸ್ಪಂದಿಸುತ್ತಿದ್ದ ರೀತಿ ಎಲ್ಲವನ್ನು ಕೂಡ ನೋಡಿ ಬೆಳೆದಿದ್ದೇನೆ,ಮುಂದೆಯೂ ಅವರ ಆದರ್ಶವನ್ನು ಇಟ್ಟುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುವೆ ಪತ್ರಕರ್ತರು ಕೂಡ ಸದಾ ಕಾಲ ತಮ್ಮ ಸಲಹೆ ನೀಡುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಶಾಸಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ಗಿರೀಶ್ ಶಾಬಾದಿ ಯು,ಅಧ್ಯಕ್ಷ ಸಿದ್ದಯ್ಯ ಪಾಟೀಲ, ಹಿರಿಯಾಯ ಪತ್ರಕರ್ತ ಧೀರೇಂದ್ರ ಕುಲಕರ್ಣಿ, ಅಶೋಕ ಸಾಲವಾಡಗಿ, ಮಲ್ಲು ಗುಳಗಿ,ರಾಜು ಕುಂಬಾರ, ಶ್ರೀಕರ ಜೋಷಿ,ನಾಗರಾಜ ನ್ಯಾಯಮೂರ್ತಿ, ಕಲೀಮ್ ಫರೀದಿ, ಪರಶುರಾಮ ಮಲ್ಲಿಬಾವಿ, ಪುರುಷೋತ್ತಮ ನಾಯಕ ದೇವತ್ಕಲ್,ಹೊನ್ನಪ್ಪ ತೇಲ್ಕರ್ ಮುರಳಿಧರ ಅಂಬುರೆ, ಶ್ರೀಮಂತ ಚಲುವಾದಿ, ನಾಗಭೂಷಣ ಯಾಳಗಿ, ಥಾಮಸ್ ಮ್ಯಾಥ್ಯೂ,ಮಲ್ಲು ಬಾದ್ಯಾಪುರ ಮುಖಂಡರಾದ ಚಂದ್ರಶೇಖರ್ ದಂಡಿನ್ ಹಣಮಂತ್ರಾಯ ಮಕಾಶಿ, ಪರಶುರಾಮ ಮಂಗಿಹಾಳ,ಬಸವರಾಜ ಜಾಲಿಬೆಂಚಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…