ಬಿಸಿ ಬಿಸಿ ಸುದ್ದಿ

ರೇಣುಕಸ್ವಾಮಿ ಹತ್ಯೆ; ಕಡಕೋಳ ಶ್ರೀಗಳು ಖಂಡನೆ

ಶಹಾಪುರ: ಚಿತ್ರದುರ್ಗ ರೇಣುಕಸ್ವಾಮಿ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ನಟ ದರ್ಶನ ನಡೆ ಅತ್ಯಂತ ಖಂಡನೀಯ ಎಂದು ಕಡಕೋಳ ಹಾಗೂ ಮುಡಬೂಳ ಮಡಿವಾಳೇಶ್ವರ ಮಹಾಮಠದ ಪೀಠಾಧಿಪತಿ ಶ್ರೀ ರುದ್ರಮುನಿ ಶಿವಾಚಾರ್ಯರು ತಿಳಿಸಿದ್ದಾರೆ.

ನಮ್ಮ ನಾಡಿನಲ್ಲಿ ಮೇರುನಟ ಡಾ.ರಾಜಕುಮಾರ, ವಿಷ್ಣುವರ್ದನ ಸೇರಿ ಹಲವು ನಾಯಕ ನಟರು, ಖಳನಟರು ಹಾಗೂ ಪೋಷಕ ನಟರು ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಅಷ್ಟೇ ಅಲ್ಲದೇ ಸಾವಿರಾರು ಅಭಿಮಾನಿಗಳಿಗೆ ಆದರ್ಶವಾಗಿದ್ದರು. ತಮ್ಮ ಜೀವನದಲ್ಲಿ ಪ್ರತಿ ಹೆಜ್ಜೆಯೂ ಎಚ್ಚರಿಕೆಯಿಂದ ಇಟ್ಟು, ಇಂದಿಗೂ ಶ್ರೇಷ್ಠ ವ್ಯಕ್ತಿಗಳಾಗಿ ಉಳಿದಿದ್ದಾರೆ. ಆದರೆ ಕೊಲೆ ಆರೋಪಿ ದರ್ಶನ ತನ್ನ ಕೆಟ್ಟ ಬುದ್ಧಿ, ದುಡ್ಡಿನ ಅಹಂಕಾರದಿಂದ ಒಂದು ಶ್ರೀಸಾಮಾನ್ಯನ ಜೀವ ತಗೆಯುವ ಕೀಳಮಟ್ಟಕ್ಕೆ ಹೋಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಕೊಲೆಗಳು ಹೆಚ್ಚುತ್ತಿವೆ. ಇದು ಆತಂಕಕ್ಕೆ ಕಾರಣವಾಗಿದೆ. ಚಿತ್ರ ನಟರಾಗಿ ಕೊಲೆ ಮಾಡುವ ಮಟ್ಟಕ್ಕಿಳಿಯುವುದು ಸರಿಯಲ್ಲ, ಪೊಲೀಸರು ಈ ಕೊಲೆಯನ್ನು ಸಂಪೂರ್ಣ ತನಿಖೆ ಮಾಡಿ ಎಲ್ಲ ತಪ್ಪಿತಸ್ಥರಿಗೆ ಸೂಕ್ತ ಕಠಿಣ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬರುವ ಯುವ ನಟರು ದೇಶಕಂಡ ಶ್ರೇಷ್ಠ ಚಿತ್ರನಟರ ಜೀವನ ಆದರ್ಶ ಓದಿಕೊಂಡು ಅವರಂತೆ ತಾವು ಸಹ ಬಾಳಿ ಬದುಕುವ ಗುರಿ, ಆದರ್ಶವನ್ನಿಟ್ಟುಕೊಂಡು ಸಿನಿಮಾ ಕ್ಷೇತ್ರಕ್ಕೆ ಬರಬೇಕು. ಅಂದಾಗ ಮಾತ್ರ ಸಮಾಜ ಮತ್ತು ಅಭಿಮಾನಿಗಳು ಅವರನ್ನು ಸದಾ ಸ್ಮರಿಸುತ್ತಾರೆ ಎಂದು ಸಲಹೆ ನೀಡಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ದುರಂಹಕಾರಿ, ಆರೋಪಿ ದರ್ಶನಗೆ ಚಿತ್ರ ರಂಗದಿಂದ ಬಹಿಷ್ಕಾರ ಹಾಕಬೇಕು.ಸರಕಾರ ದರ್ಶನ್ ಅವರ ನಟಿಸುವ ಚಿತ್ರಗಳನ್ನು ನಿಷೇಧಿಸಬೇಕು, ಕೊಲೆಯಾದ ಕುಟುಂಬಕ್ಕೆ ಸರಕಾರ ನೌಕರಿ ಅಥವಾ ಆರ್ಥಿಕ ಸಹಾಯ ನೀಡಬೇಕು ಎಂದು ತಿಳಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

59 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago