ಸುರಪುರ: ತಾಲೂಕಿನಾದ್ಯಂತ ಅನೇಕ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಹೆಚ್ಚಿನ ಶುಲ್ಕ (ಡೊನೆಷನ್) ಪಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಜಿ ಸಾಗರ ಬಣದ ಮುಖಂಡರು ಆರೋಪಿಸಿ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಈ ಕುರಿತು ಮಾತನಾಡಿದ ಮುಖಂಡರು,ಸುರಪುರ ನಗರ,ರಂಗಂಪೇಟೆ,ಕೆಂಭಾವಿ,ಕನ್ನೆಳ್ಳಿ,ಅಮ್ಮಾಪುರ,ಹುಣಸಗಿ,ಕಕ್ಕೇರಾ ಹೀಗೆ ಅನೇಕ ಕಡೆಗಳಲ್ಲಿ ಖಾಸಗಿ ಶಾಲೆಗಳಲ್ಲಿ ಮತ್ತು ಅನುದಾನಿತ ಶಾಲೆಗಳಲ್ಲೂ ಸರಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿದ್ದು ಇದರಿಂದ ಬಡ ಕುಟುಂಬದ ಮಕ್ಕಳಿಗೆ ತೊಂದರೆಯಾಗುತ್ತಿದೆ,ಆದ್ದರಿಂದ ಎಲ್ಲಾ ಶಾಲೆಗಳಿಗೂ ಸರಕಾರ ನಿಗದಿಪಡಿಸಿದ ಶುಲ್ಕವನ್ನೆ ಪಡೆದುಕೊಳ್ಳುವಂತೆ ಆದೇಶ ಮಾಡಬೇಕು ಹಾಗೂ ಹೆಚ್ಚಿನ ಶುಲ್ಕ ಡೊನೆಷನ್ ರೂಪದಲ್ಲಿ ಪಡೆಯುವುದಕ್ಕೆ ಕಡಿವಾಣ ಹಾಕಬೇಕು,ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಕೇತ್ರಶಿಕ್ಷಣಾಧಿಕಾರಿಗಳಿಗೆ ಬರೆದ ಮನವಿಯನ್ನು ಕಚೇರಿ ಸಿರಸ್ತೆದಾರರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ತಾ.ಸಂಚಾಲಕ ತಿಪ್ಪಣ್ಣ ಶೆಳ್ಳಗಿ,ಎಮ್.ಪಟೇಲ್,ಶೇಖರ ಮಂಗಳೂರ,ರಾಜು ಬಡಿಗೇರ,ಚನ್ನಬಸಪ್ಪ ತಳವಾರ,ವೆಂಕಟೇಶ ದೇವಾಪುರ,ಹುಸನಪ್ಪ ಪೂಜಾರಿ,ಹಣಮಂತ ದೇವಾಪುರ,ಮಲ್ಲಪ್ಪ ದೇವಾಪುರ,ಮೌನೇಶ ತಿಂಥಣಿ,ಶಾಂತಪ್ಪ ತಳವಾರಗೇರ ಸೇರಿದಂತೆ ಅನೇಕರಿದ್ದರು.
ಸುರಪುರ: ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ನಗರದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ…
ಸುರಪುರ: ನಮ್ಮ ಸರಕಾರ ರೈತರಿಗಾಗಿ ಹಲವಾರು ಯೋಜನೆಗಳನ್ನು ಜೊರಿಗೊಳಿಸಿದ್ದು ರೈತರು ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳ ಬೇಕು ಎಂದು ಶಾಸಕ…
ಕಲಬುರಗಿ: ನಗರದ ಎನ್.ವಿ ಸಂಸ್ಥೆಯ ಸತ್ಯಪ್ರಮೋದತೀರ್ಥ ಸಭಾಂಗಣದಲ್ಲಿ ಎನ್.ವಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಗುಲಬರ್ಗ ನಾರ್ಥವತಿಯಿಂದ ವಿದ್ಯಾರ್ಥಿನಿಯರಿಗೆ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಶಾಖೆ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ರೈತ ಸಮಾವೇಶವನ್ನು ಸಂಘದ…
ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ 8ನೇ ಎಥ್ಲೇಟಿಕ್ ಮೀಟ್ 2024-25 ರಾಜ್ಯ ಮಟ್ಟದ 200 ಮಿಟರ್ ಓಟದ ಸ್ಪರ್ಧೆಯಲ್ಲಿ…
ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…