ಜತ್ತ: ಮಹಾರಾಷ್ಟç ಸರಕಾರವು ಕನ್ನಡ ಶಾಲೆಗಳಲ್ಲಿ ಮರಾಠಿ ಮಾಧ್ಯಮದ ಶಿಕ್ಷಕರ ನೇಮಕ ಮಾಡಿ ಆದೇಶ ಹೊರಡಿಸಿದೆ. ಸಾಂಗಲಿ ಹಾಗೂ ಸೊಲ್ಲಾಪುರ ಜಿಲ್ಲೆಗಳಲ್ಲಿ ಸುಮಾರು ೪೦ ಸಾವಿರಕ್ಕಿಂತ ಹೆಚ್ಚಿನ ಮಕ್ಕಳು ಕನ್ನಡ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಾರೆ. ಸುಮಾರು ೩೦೦ ಕ್ಕಿಂತಲು ಹೆಚ್ಚಿಗೆ ಕನ್ನಡ ಶಾಲೆಗಳಿವೆ. ಕಳೆದ ಹಲವು ವರ್ಷಗಳಿಂದ ಶಿಕ್ಷಕರ ನೇಮಕಾತಿ ಮಾಡಿರಲಿಲ್ಲ ಈ ವರ್ಷ ನೇಮಕಾತಿ ಮಾಡಲಾಗಿದೆ.
ಸಾಂಗಲಿ ಹಾಗೂ ಸೊಲ್ಲಾಪುರ ಜಿಲ್ಲೆಯಲ್ಲಿ ಒಟ್ಟು ೨೪ ಶಿಕ್ಷಕರ ನೇಮಕಾತಿ ಮಾಡಿ ಆದೇಶ ಹೊರಡಸಲಾಗಿದೆ. ಅದರಲ್ಲಿ ಕೇವಲ ೭ ಜನರು ಮಾತ್ರ ಕನ್ನಡ ಕಲಿತವರು ಆಗಿದ್ದಾರೆ. ಉಳಿದೆಲ್ಲ ನೇಮಕ ಶಿಕ್ಷಕರು ಮರಾಠಿ ಹಾಗೂ ಉರ್ದು ಮಾಧ್ಯಮದಿಂದ ಬಂದವರಿದ್ದಾರೆ. ಈ ನೇಮಕ ಶಿಕ್ಷಕರಿಗೆ ಕನ್ನಡ ಭಾಷೆಯ ಗಂಧಗಾಳಿಯು ಗೊತ್ತಿಲ್ಲ.
ಈ ಕುರಿತು ಇಲ್ಲಿನ ಕನ್ನಡಿಗರು ದೊಡ್ಡ ಪ್ರಮಾಣದಲ್ಲಿ ವಿರೋಧ ಮಾಡುತ್ತಿದ್ದಾರೆ. ಆದರೆ ಸರಕಾರ ಯಾವುದೆ ರೀತಿಯಲ್ಲಿ ಹಿಂಜರಿಯುವ ಮಾತೆ ಇಲ್ಲ ಅನ್ನುತ್ತಿದೆ. ಕರ್ನಾಟಕ ಸರಕಾರ ತುರ್ತಾಗಿ ಇಲ್ಲಿನ ಕನ್ನಡಿಗರ ಬೆನ್ನೆಲಬಾಗಿ ನಿಲ್ಲಬೇಕಿದೆ. ಇಲ್ಲವಾದಲ್ಲಿ ಈ ಭಾಗದಲ್ಲಿ ಕನ್ನಡ ಶಾಲೆಗಳು ನಶಿಸಿ ಹೋಗುತ್ತವೆ. ಅಲ್ಲಿನ ಕನ್ನಡಿಗರ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ಮರಾಠಿ ಹಾಗೂ ಉರ್ದು ಭಾಷೆಯ ಶಿಕ್ಷಕರ ನೇಮಕಾತಿಯಿಂದ ಆಗುವ ಅಪಾಯಗಳು
ಕನ್ನಡ ಶಾಲೆಯಲ್ಲಿಯ ಮಕ್ಕಳಿಗೆ ಮರಾಠಿ ಶಿಕ್ಷಕರು ಹೇಗೆ ಕಲಿಸಲು ಸಾಧ್ಯ..? ಇದೊಂದು ತಪ್ಪು ಧೋರಣೆ. ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ಇದರಿಂದ ಕನ್ನಡ ಮಕ್ಕಳ ಕಲಿಕೆಯ ಮೇಲೆ ಗಂಭೀರ ಪರಿಣಾಮ ಆಗುತ್ತದೆ. ಇದನ್ನು ನಾನು ಸಂಪೂರ್ಣವಾಗಿ ವಿರೋಧಿಸುತ್ತೇನೆ. ನನಗೆ ಕನ್ನಡ-ಮರಾಠಿ ಭಾಷಾ ಬಾಂಧ್ಯವ್ಯ ಮುಖ್ಯ. ಮರಾಠಿ ಭಾಷೆಯವರನ್ನು ಪ್ರೀತಿಸುಷ್ಟು ಕನ್ನಡ ಭಾಷೆಯರನ್ನು ಪ್ರೀತಿಸುತ್ತೇನ. ಕನ್ನಡ ಶಾಲೆಗಳ ಉನ್ನತಿಗಾಗಿ ಪ್ರಯತ್ನಿಸುತ್ತೇನೆ ಹಾಗೂ ಜತ್ತ ತಾಲ್ಲೂಕಿನ ಕನ್ನಡಿಗರ ಹಿತ ಕಾಪಾಡುತ್ತೇನೆ. – ವಿಕ್ರಮದಾದಾ ಸಾವಂತ, ಶಾಸಕರು, ಜತ್ತ.
ಕನ್ನಡ ಶಾಲೆಗಳಲ್ಲಿ ಮರಾಠಿ ಶಿಕ್ಷಕರನ್ನು ನೇಮಕ ಮಾಡಿದ್ದು ತುಂಬಾ ಕಳವಳಕಾರಿಯಾಗಿದೆ. ನಾವು ಕನ್ನಡ ಮಾಧ್ಯಮದ ಡಿ ಎಡ್ ಅಭ್ಯರ್ಥಿಗಳಿದ್ದು ಟಿ.ಇ.ಟಿ ಪಾತ್ರರಾಗಿದ್ದೇವೆ. ಆದರೆ ನಮ್ಮನ್ನು ನೇಮಕ ಮಾಡದೆ, ಸರಕಾರ ಕನ್ನಡ ಶಾಲೆಗಳ ಮೇಲೆ ನಮ್ಮನ್ನು ನೇಮಕ ಮಾಡದೆ ಇದ್ದದ್ದು ನಮ್ಮ ಮೇಲೆ ಮಾಡಿದ ಬಹುದೊಡ್ಡ ಅನ್ಯಾಯವಾಗಿದೆ. ಕನ್ನಡ ಕಲಿತರು ನಾವು ನಿರುದ್ಯೋಗಿಗಳಾಗುತ್ತೇವೆ. ಕರ್ನಾಟಕ ಸರಕಾರ ಬೇಗನೆ ಈ ಸಮಸ್ಯೆ ಕಡೆ ಗಮನ ಹರಿಸಬೇಕು. – ಅನೀಲ ಚೌಗುಲೆ, ಕನ್ನಡ ಮಾಧ್ಯಮ ಟಿ.ಇ.ಟಿ ಪಾತ್ರ ಅಭ್ಯರ್ಥಿ, ಜತ್ತ
ಮರಾಠಿ ಶಿಕ್ಷಕರ ನೇಮಕಾತಿ ಕನ್ನಡ ಶಾಲೆಗಳ ಅವನತಿ ಆಗಿದೆ. ಇದಕ್ಕಾಗಿ ನಾವೆಲ್ಲಾ ಕನ್ನಡಿಗರು ಒಟ್ಟಾಗಿ ಹೋರಾಟ ಮಾಡುತ್ತೇವೆ. ಈ ಕುರಿತು ಅಲ್ಪ ಸಂಖ್ಯಾಕ ಆಯೋಗದ ಗಮನಕ್ಕೆ ಕೂಡ ತಂದಿದ್ದೇವೆ. ಇದೊಂದು ಅನ್ಯಾಯಕಾರಕ ಧೋರಣೆ. ಕನ್ನಡ ಮುಗಿಸುವ ಕುತಂತ್ರ. ದಯವಿಟ್ಟು ಕರ್ನಾಟಕ ಮುಖ್ಯಮಂತ್ರಿಯವರು ಬೇಗ ನಮ್ಮ ಸಹಾಯಕ್ಕೆ ನಿಲ್ಲಬೇಕು ಎಂದು ಕೇಳಿಕೊಳ್ಳುತ್ತೇನೆ. – ಮಲ್ಲೇಶಪ್ಪಾ ತೇಲಿ, ಕನ್ನಡ ಹೊರಾಟಗಾರರು, ಜತ್ತ.
ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರು,ಮಾಜಿ ಶಿಕ್ಷಣ ಸಚಿವರು ಹಾಗು ಕೊಳ್ಳೇಗಾಲದ ಮಾಜಿ ಶಾಸಕರಾದ…
ಕಲಬುರಗಿ: ದಕ್ಷ ಮಹಿಳಾ ಅಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ವಿರುದ್ಧ ಇತ್ತೀಚೆಗೆ ಕೆಲವರು ಇಲ್ಲಸಲ್ಲದ ಆರೋಪ…
ಬೆಂಗಳೂರು: ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ…
ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸುವ ನಮೂನೆ 50, 53 ಹಾಗೂ 57 ಬಗರ್ ಹುಕುಂ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ…
ಗೊಬ್ಬೂರನಲ್ಲಿ ಮಹಿಳಾ ಅರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ ಕಲಬುರಗಿ; ಮಹಿಳೆಯರು ಶಿಕ್ಷಿತರಾಗಿ ತಮ್ಮ ಹಕ್ಕುಗಳ ಪಡೆಯಬೇಕು. ಜೊತೆಗೆ ಪರುಷ ಪ್ರಧಾನವಾದ…
ಕಲಬುರಗಿ; ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಬಲಿಷ್ಠ ರಾಷ್ಟ್ರ ಕಟ್ಟಲು ಸಹಕಾರಿಗುತ್ತದೆ ಎಂದು ಶ್ರೀನಿವಾಸ ಸರಡಗಿ ಪೂಜ್ಯರಾದ ಡಾ. ರೇವಣಸಿದ್ದ ಶಿವಾಚಾರ್ಯರು…