ಕಲಬುರಗಿ : ಸರಕಾರಿ ಮಹಾವಿದ್ಯಾಯ ಸ್ವಾಯತ್ತದಲ್ಲಿ ರಾಷ್ಟ್ರಿಯ ಸೇವಾ ಯೋಜನೆ (ಎನ್ಎಸ್ಎಸ್) ೨೦೨೩-೨೪ನೇ ಸಾಲೀನ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಪ್ರಗತಿಪರ ಚಿಂತಕರಾದ ಪ್ರೋ.ಆರ್.ಕೆ.ಹುಡಗಿ ಅವರು ಮಾತನಾಡಿ ಇಂದಿನ ದಿನಗಳಲ್ಲಿ ಜಗತ್ತಿನಲ್ಲಿ ಮಾನವಿಯತೆಗೆ ಬರ ಬಂದಿದ್ದು ಇನ್ನೋಬ್ಬರ ಸಂಕಷ್ಟದಲ್ಲಿ ಭಾಗಿಯಾಗುವ ಮನೋಭಾವ ಕಡಿಮೆ ಆಗುತ್ತಿದೆ, ಅದರ ಬದಲಿಗೆ ನೋವು ಸಂಕಷ್ಟಗಳನ್ನು ಕಂಡು ಸಂತೋಷ ಪಡುವ *ಸಂದ್ಗಿದ* ಪರಿಸ್ಥಿತಿಯಲ್ಲಿ ಇದ್ದೆವೆ. ಇದು ಅತ್ಯಂತ ಖೇದಕರ್ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇಂತಹ ಪರಿಸ್ಥಿತಿಗಳಿಂದ ಹೊರಗಡೆ ಬರಬೇಕಾದರೆ ವಿದ್ಯಾಭ್ಯಾಸ ಮಾಡಿ ಉತ್ತಮ ಶಿಕ್ಷಣ ಪಡೆಯುದೊಂದೆ ಪರಿಹಾರ ಎಂದರಲ್ಲದೆ ಖಾಸಗಿಕರಣದ ಇಂದಿನ ಯುವದಲ್ಲಿ ಉದ್ಯೋಗ ಅಸಾಧ್ಯವಾಗಿದೆ. ಖಾಸಗಿ ಕ್ಷೇತ್ರವೂ ಕೂಡಾ ಇದರಿಂದ ಹೊರತಾಗಿಲ್ಲ ಆದರಿಂದ ಎಲ್ಲಾ ಬಾಗಿಲುಗಳು ಮುಚ್ಚಿದಾಗ ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯವಿದ್ದು ಎಲ್ಲೂರೂ ಕಷ್ಟಪಟು ಅಧ್ಯಾಯನ ಮಾಡಬೇಕು ಎಂದು ಕರೆ ನೀಡಿದರು.
ಕಲಬುರಗಿ ಉಪ ವಿಭಾಗದ ಎಸಿಪಿ ಡಿ.ಜೆ.ರಾಜಣ ಅವರು ಮಾತನಾಡಿ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಕಷ್ಟಪಟ್ಟು ಅಧ್ಯಾಯನ ಮಾಡಿ ಉನ್ನತ ಹುದ್ದೆಗಳು ಪಡೆಯುವುದರ ಮೂಲಕ ತಂದೆ ತಾಯಿಗೆ ಒಳ್ಳೆಯ ಹೆಸರು ತರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ವಿಭಾಗದ ಡೀನರಾದ ಡಾ.ವಿಜಯಕುಮಾರ ಸಾಲಿಮನಿ ವಹಿಸಿದ್ದರು. ವೇದಿಕೆಯ ಮೇಲೆ ಡಾ.ರಾಜಕುಮಾರ ಸಲಗರ್, ಡಾ.ವಿನೋದಕುಮಾರ ರಾಠೋಡ, ಡಾ.ವಿಜಯನಂದ ವಿಠಲರಾವ, ಎನ್ಎಸ್ಎಸ್ ಅಧಿಕಾರಿಗಳಾದ ಡಾ.ಶ್ರೀಮತ ಬಿ.ಹೋಳಕರ್, ಡಾ.ನಾಗಪ್ಪ ಗೋಗಿ, ಡಾ. ರವಿ ಬೌದ್ದೆ, ಪ್ರೋ.ಮೇರಿ ಮ್ಯಾಥ್ಯೂಸ್, ಡಾ.ಬಲಭೀಮ ಸಾಂಗ್ಲಿ, ಡಾ.ವಿಜಯಕುಮಾರ ಗೋಪಾಳೆ, ಡಾ.ರಾಜೇಶ ಅಜಬ್ಸಿಂಗ್, ಡಾ. ಶ್ಯಾಮಲಾ ಸ್ವಾಮಿ ಉಪಸ್ಥಿತರಿದ್ದರು. ಕುಮಾರಿ ಪ್ರಿಯಾಂಕಾ ಸ್ವಾಗತಿಸಿದರು. ಕುಮಾರಿ ರಂಜಿತಾ ನಿರೂಪಿಸಿದರು. ದುರ್ಗಪ್ಪ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರು,ಮಾಜಿ ಶಿಕ್ಷಣ ಸಚಿವರು ಹಾಗು ಕೊಳ್ಳೇಗಾಲದ ಮಾಜಿ ಶಾಸಕರಾದ…
ಕಲಬುರಗಿ: ದಕ್ಷ ಮಹಿಳಾ ಅಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ವಿರುದ್ಧ ಇತ್ತೀಚೆಗೆ ಕೆಲವರು ಇಲ್ಲಸಲ್ಲದ ಆರೋಪ…
ಬೆಂಗಳೂರು: ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ…
ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸುವ ನಮೂನೆ 50, 53 ಹಾಗೂ 57 ಬಗರ್ ಹುಕುಂ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ…
ಗೊಬ್ಬೂರನಲ್ಲಿ ಮಹಿಳಾ ಅರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ ಕಲಬುರಗಿ; ಮಹಿಳೆಯರು ಶಿಕ್ಷಿತರಾಗಿ ತಮ್ಮ ಹಕ್ಕುಗಳ ಪಡೆಯಬೇಕು. ಜೊತೆಗೆ ಪರುಷ ಪ್ರಧಾನವಾದ…
ಕಲಬುರಗಿ; ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಬಲಿಷ್ಠ ರಾಷ್ಟ್ರ ಕಟ್ಟಲು ಸಹಕಾರಿಗುತ್ತದೆ ಎಂದು ಶ್ರೀನಿವಾಸ ಸರಡಗಿ ಪೂಜ್ಯರಾದ ಡಾ. ರೇವಣಸಿದ್ದ ಶಿವಾಚಾರ್ಯರು…