ನಿಷ್ಠೆ, ಪ್ರಾಮಾಣಿಕತೆಯ ಸೇವೆ ಅಗತ್ಯ

ಕಲಬುರಗಿ: ಸರ್ಕಾರಿ ನೌಕರಿ ಪಡೆಯುವಲ್ಲಿನ ಹುಮ್ಮಸ್ಸು, ಪಡೆದ ನಂತರ ಬದಲಾಗಬಾರದು. ನೌಕರಿ ಪಡೆಯುವುದು, ದೀರ್ಘ ಕಾಲ ಸೇವೆ ಮಾಡುವುದೇ ದೊಡ್ಡ ಸಾಧನೆಯಲ್ಲ. ಬದಲಿಗೆ ದೊರೆತ ಹುದ್ದೆಗೆ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಬದ್ಧತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ಅಂತಹ ಸೇವೆ ನಿಜಕ್ಕೂ ಸಮಾಜಪರ, ಸಾರ್ಥಕತೆಯಾಗಲು ಸಾಧ್ಯವಿದೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ಅಂಕುಶ್ ಎ.ಅಳಂದೆ ಹೇಳಿದರು.

ನಗರದ ಅಗ್ನಿಶಾಮಕ ಠಾಣೆಯ ‘ಪ್ರಾದೇಶಿಕ ಅಗ್ನಿಶಾಮಕ ತರಬೇತಿ ಕೇಂದ್ರ’ದ ಸಭಾಂಗಣದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಮುಖ್ಯಮಂತ್ರಿ ಪದಕ ಪುರಷ್ಕøತ ಪ್ರಮುಖ ಅಗ್ನಿಶಾಮಕರಾದ ಶಾಂತಪ್ಪ ಪಟ್ಟೇದ್‍ರಿಗೆ ಮಂಗಳವಾರ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಾಂತಪ್ಪ ಪಟ್ಟೇದ ನೆಲೋಗಿ ಅವರು ಪ್ರಮುಖ ಅಗ್ನಿಶಾಮಕರಾಗಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜಪರ ಕಾಳಜಿಯಿದೆ. ತುರ್ತು ಸಂದರ್ಭಗಳಲ್ಲಿ ಧೈರ್ಯದಿಂದ ಕಾರ್ಯನಿರ್ವಹಿಸಿ ಸಮಸ್ಯೆಯನ್ನು ಬಗೆಹರಿಸುವಲ್ಲಿ ಶ್ರಮಿಸುತ್ತಾರೆ. ಅವರ ಅಮೋಘವಾದ ಸೇವೆಯನ್ನು ಗಮನಿಸಿ ‘ಮುಖ್ಯಮಂತ್ರಿ ಪದಕ’ ನೀಡಿ, ಗೌರವಿಸಲಾಗಿದೆ. ಇದು ಇಲಾಖೆ, ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಸತ್ಕಾರ ಸ್ವೀಕರಿಸಿ ಮಾತನಾಡಿ ಶಾಂತಪ್ಪ ಪಟ್ಟೇದ್ ನೆಲೋಗಿ, ನನಗೆ ದೊರೆತ ಪುರಸ್ಕಾರ ನನ್ನ ಕಾರ್ಯಕ್ಕೆ ಕೈಜೋಡಿಸಿದ ಸಹದ್ಯೋಗಿಗಳು, ಇಲಾಖೆಯ ಅಧಿಕಾರಿಗಳಿಗೆ ಸಲ್ಲುತ್ತದೆ. ಬದ್ಧತೆಯಿಂದ ಸೇವೆ ಸಲ್ಲಿಸಬೇಕು ಎಂಬುದು ನನ್ನ ಧ್ಯೇಯವಾಗಿದ್ದು, ಆ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪುರಸ್ಕಾರ ನನಗೆ ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ. ಬಸವೇಶ್ವರ ಸಮಾಜ ಸೇವಾ ಬಳಗವು ಜಾತ್ಯಾತೀತ ಸೇವಾ ಸಂಸ್ಥೆಯಾಗಿದ್ದು, ಎಲ್ಲರನ್ನು ಗುರುತಿಸಿ, ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ, ಸಮಾಜ ಸೇವಕರಾದ ಡಾ.ಸುನೀಲಕುಮಾರ ಎಚ್.ವಂಟಿ, ದೇವೇಂದ್ರಪ್ಪ ಗಣಮುಖಿ, ಶಿವಯೋಗೆಪ್ಪಾ ಎಸ್.ಬಿರಾದಾರ, ಅಸ್ಲಾಂ ಶೇಖ್, ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಾದ ಶ್ರೀಶೈಲ್, ಭೀಮಯ್ಯ, ಮಲ್ಲಿಕಾರ್ಜುನ ಇಟಗಾ, ಮೊಹ್ಮದ್ ಫಿರೋಜ್, ಆಸಿಂದಕುಮಾರ, ಸುನೀಲ್, ಯೂಸುಫ್, ಸುರೇಶ ಪೂಜಾರಿ, ಸೋಪನರಾವ್ ಸೇರಿದಂತೆ ಇನ್ನಿತರರು ಹಾಜರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420