ಆಳಂದ: ಕಲಬುರಗಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾಗಿದ್ದ ಜಗದೇವ ಗುತ್ತೇದಾರ ವಿಧಾನ ಪರಿಷತ್ತು ಸದಸ್ಯರಾಗಿ ನೇಮಕಗೊಂಡ ನಂತರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ವಕ್ಷನಿಷ್, ಸಂಘಟನೆ ಹಾಗೂ ಕ್ಷೇತ್ರವಾರು ಪ್ರಾತಿನಿಧ್ಯದ ಆಧಾರದಲ್ಲಿ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಎಂದು ಹಿರಿಯ ಕಾಂಗ್ರೇಸ್ ಮುಖಂಡ ಶಂಕರರಾವ ದೇಶಮುಖ ತಿಳಿಸಿದರು.
ಸೋಮವಾರ ಆಳಂದ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಮಲಾಪುರ ಮೀಸಲು ಕ್ಷೇತ್ರದ ವ್ಯಾಪ್ತಿಯಲ್ಲಿ ೧೯೮೩ರಿಂದಲೂ ಕಾಂಗ್ರೇಸ್ದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ, ಹಿರಿಯ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎನ್ ಧರ್ಮಸಿಂಗ್ ಹಾಗೂ ಜಿ.ರಾಮಕೃಷ್ಣ ಅವರ ಬೆಂಬಲಿಗರಾಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ತಾಪಂ ಸದಸ್ಯರಾಗಿ ೪೦ ವರ್ಷದಿಂದ ಪಕ್ಷದ ಸಂಘಟನೆಯಲ್ಲಿ ದುಡಿದ್ದೇನೆ ಎಂದರು.
ಜಿಲ್ಲಾಧ್ಯಕ್ಷ ಸ್ನಾನವು ಇವರಗೆ ಸೇಡಂ, ಚಿತ್ತಾಪುರ,ಚಿಂಚೋಳಿ, ಜೇವರ್ಗಿ ತಾಲ್ಲೂಕಿಗೆ ಸೀಮಿತವಾಗಿವೆ, ಆಳಂದ ತಾಲ್ಲೂಕಿಗೆ ಒಮ್ಮೆಯೂ ಅಧ್ಯಕ್ಷ ಸ್ಥಾನ ದೊರೆತಿಲ್ಲ, ಈ ಬಾರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಿರಿತನ ಹಾಗೂ ಸಂಘಟನಾಶಕ್ತಿ ಆಧರಿಸಿ ತಮ್ಮನ್ನು ಪರಿಗಣಿಸಲು ಪಕ್ಷದ ಮುಖಂಡರಿಗೂ, ಶಾಸಕರಿಗೂ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೂ ಮನವಿ ಮಾಡಲಾಗುವುದು ಎಂದರು.
ದೇಶಮುಖರಿಗೆ ಸೂಕ್ತ ಸ್ಥಾನಕ್ಕೆ ಮನವಿ: ಆಳಂದ ತಾಲ್ಲೂಕಿನ ಹಿರಿಯ ಕಾಂಗ್ರೇಸ್ ಮುಖಂಡರಾಗಿರುವ ಶಂಕರರಾವ ದೇಶಮುಖ ಅವರಿಗೆ ಪಕ್ಷದ ಜಿಲ್ಲಾಧ್ಯಕ್ಷ ಇಲ್ಲವೇ ಸರ್ಕಾರದ ವಿವಿಧ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು ಎಂದು ಕೆಪಿಸಿಸಿ ಸದಸ್ಯ ರಾಜಶೇಖರ ಪಾಟೀಲ ಚಿತಲಿ ಒತ್ತಾಯಿಸಿದರು.
ಮುಖ್ಯಮಂತ್ರಿ ಸಲಹೆಗಾರರು, ಶಾಸಕ ಬಿ.ಆರ್.ಪಾಟೀಲ ಅವರ ಗಮನಕ್ಕೂ ತರಲಾಗುವದು, ೪೦ ವರ್ಷದಿಂದ ಕಾಂಗ್ರೇಸ್ ಪಕ್ಷದ ನಿಷ್ಠೆಯ ಕಾರ್ಯಕರ್ತರಾಗಿ, ನಾಯಕರಾಗಿ ಪಕ್ಷದ ಸಂಘಟನೆಯಲ್ಲಿ ದುಡಿದಿರುವ ಶಂಕರರಾವ ದೇಶಮುಖ ಅವರಿಗೆ ಸೂಕ್ತ ಸ್ಥಾನ ನೀಡಲು ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರಲ್ಲಿ ಒತ್ತಾಯಿಸಲಾಗುವುದು ಎಂದರು.ಮುಖಂಡ ಸಂಜಯ್ ನಾಯಕ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…