ಬಿಸಿ ಬಿಸಿ ಸುದ್ದಿ

ಜಿ.ಪಂ/ತಾ.ಪಂ ಚುನಾವಣೆಗೆ ಜೆಡಿಎಸ್ ಕಾರ್ಯಕರ್ತರು ಸಿದ್ದರಾಗಬೇಕು: ಬಾಲರಾಜ್ ಗುತ್ತೇದಾರ

ಕಲಬುರಗಿ ಜಿಲ್ಲಾ ಜೆಡಿಎಸ್ ಮುಖಂಡರ ಸಭೆ

ಕಲಬುರಗಿ : ಮುಂಬರುವ ಜಿ.ಪಂ ಹಾಗೂ ತಾ.ಪಂ ಚುನಾವಣೆ ಎದುರಿಸಲು ಜೆಡಿಎಸ್ ಪಕ್ಷದ ಕಾರ್ಯಕರ್ತರು ಬೂತ ಮಟ್ಟದಿಂದ ಸಿದ್ದರಾಗಬೇಕು ಎಂದು ಜೆಡಿಎಸ್ ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಕರೆ ನೀಡಿದ್ದರು,

ಕಲಬುರಗಿ ನಗರದ ಜಿಲ್ಲಾ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೆಗೌಡರು, ಜೆಡಿಎಸ್ ಪಕ್ಷದ ರಾಜ್ಯಧ್ಯಕ್ಷರಾದ ಹೆಚ್,ಡಿ, ಕುಮಾರಸ್ವಾಮಿ ಅವರ ಆಡಳಿತದಲ್ಲಿ ಜಾರಿಮಾಡಿರುವ ರೈತರ ಸಾಲಮನ್ನ, ಗ್ರಾಮ ವಾಸ್ತವ್ಯ , ನೀರಾವರಿ ಯೋಜನೆ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮ ಜಾರಿಮಾಡಿದ್ದು ಜೆಡಿಎಸ್ ಪಕ್ಷದ ಕಾರ್ಯಕ್ರಮಮಗಳ ಬಗ್ಗೆ ಜನರಿಗೆ ತಿಳಿಹೇಳುವ ಮೂಲಕ ಭೂತ ಮಟ್ಟದಿಂದ ಜೆಡಿಎಸ್ ಪಕ್ಷವನ್ನು ಸಂಘಟಿಸಬೇಕು , ರಾಜ್ಯ ಸರ್ಕಾರದ ಬೇಲೆ ಏರಿಕೆ ವಿರುದ್ಧ , ಸ್ಥಳಿಯ ಕಾರ್ಖಾನೆಗಳಲ್ಲಿ ಸ್ಥಳಿಯ ನಿರುದ್ಯೊಗಿ ಯುವಕರಿಗೆ ಉದ್ಯೋಗ ನೀಡಲು ಆಗ್ರಹಿಸಿ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದರು.

ಸಭೆಯಲ್ಲಿ ಮುಂಬರುವ ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರು ಹಾಗೂ ಉಪಮಹಾಪೌರರ ಚುನಾವಣೆ, ಜೆಡಿಎಸ್ ಪಕ್ಷದ ಸದ್ಯಸತ್ವ ನೋಂದಣಿ ಅಭಿಯಾನದ ಕಾರ್ಯಕ್ರಮ , ಕಳೆದ ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಗೆ ಸಂಬಂದಿಸಿದ ಎಲ್ಲಾ ವಿಧಾನಸಭೆಯ ಮತಕ್ಷೇತ್ರದಲ್ಲಿ ನಮ್ಮ ಏನ್ ಡಿ ಎ ಪಕ್ಷದ ಅಭ್ಯರ್ಥಿಗೆ ಯಾವ ಕ್ಷೇತ್ರದಲ್ಲಿ ಏಕೆ ಹೆಚ್ಚು ಮತಗಳು ಬಂದವು ಯಾವ ಕ್ಷೇತ್ರದಲ್ಲಿ ಏಕೆ ಕಡಿಮೆ ಮತಗಳು ಬಂದವು ಏನುವುದರ ಬಗ್ಗೆ , ಕಲಬುರಗಿ ಜಿಲ್ಲೆಯಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಪಕ್ಷವನ್ನು ಸಂಘಟಿಸುವ ಕುರಿತು ವಿಶೇಷ ವಾಗಿ ಚರ್ಚಿಸಲಾಯಿತ್ತು.

ಸಭೆಯಲ್ಲಿ ಮಾಜಿ ಶಾಸಕರು ಹಾಗೂ ರಾಜ್ಯ ಜೆಡಿಎಸ್ ಕಾರ್ಯಧ್ಯಕ್ಷರಾದ ದೊಡ್ಡಪ್ಪ ಗೌಡ ಎಸ್ ಪಾಟೀಲ ನರಿಬೋಳ ಮುಖಂಡರಾದ ಕೃಷ್ಣರೆಡ್ಡಿ, ಸಂಜೀವನ ಯಾಕಪುರ, ನಾಸಿರ್ ಹುಸೇನ್ ಉಸ್ತಾದ್, ವಿಶ್ವನಾಥ ನಾಡಗೌಡ, ಹಣಮಂತ ಸನಗುಂದಿ,ಹಣಮಂತ ಕಂದಹಳ್ಳಿ, ಸಿದ್ದಣ್ಣ ಪಾಟೀಲ್,ಸುನಿಲ್ ಗಾಜರೆ. ಸಂಜು ಮಡಕಿ, ಪ್ರವೀಣ್ ಜಾಧವ ಯೇಶುನಾಥ, ಭೀಮರಾಯ ಜನಿವಾರ, ಜಮೀಲ್ ಗೌóಡಿ, ಕಲೀಮ್ ಬಾಂಡ್, ರವಿಶಂಕರ್ ರೆಡ್ಡಿ, ಶ್ರೀಮತಿ ಪಾರ್ವತಿ ಪುರಾಣಿಕ್ , ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಕೇಂದ್ರ ಕೈಗಾರಿಕಾ ಸಚಿವರಾದ ನಮ್ಮ ಪಕ್ಷದ ರಾಜ್ಯಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಿನ ಕಾರ್ಖಾನೆ ಪ್ರಾರಂಭಿಸಲು ಹೆಚ್ಚಿನ ಆದ್ಯತೆ ನೀಡಲು ನಮ್ಮ ಜಿಲ್ಲೆಯ ಪಕ್ಷದ ನಾಯಕರೊಂದಿಗೆ ಮನವಿ ಪತ್ರ ಸಲ್ಲಿಸಲಾಗುವುದು.- ಬಾಲರಾಜ್ ಗುತ್ತೇದಾರ, ಜೆಡಿಎಸ್ ಪಕ್ಷದ ಜಿಲ್ಲಾದ್ಯಕ್ಷರು ಕಲಬುರಗಿ

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago