ಕಲಬುರಗಿ; ಶುದ್ಧ ಕುಡಿಯುವ ನೀರು ಸರಬರಾಜಿಗೆ ಜೈ ಕನ್ನಡಿಗರ ರಕ್ಷಣಾ ವೇದಿಕೆ ಆಗ್ರಹ

0
6

ಕಲಬುರಗಿ : ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದ್ದು, ಆ ನೀರು ಕುಡಿದರೆ ಆರೋಗ್ಯ ತಪ್ಪಿ ರೋಗರುಜಿನಗಳು ಬರುತ್ತಿದು, ಕೂಡಲೇ ಈ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಸಚೀನ್ ಫರಹತಾಬಾದ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಲಬುರಗಿ ನಗರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ತುಂಬಾ ತೊಂದರೆಯಗಳು ಆಗುತ್ತಿದ್ದು, ಸದರಿ ಕಲಬುರಗಿ ನಗರದ ಜೀಮ್ಸ್ ಆಸ್ಪತ್ರೆ ಹಾಗೂ ಇತರೇ ಆಸ್ಪತ್ರೆಗಳಲ್ಲಿ ನೀರು ಇಲ್ಲದೇ ರೋಗಿಗಳು, ಸಾರ್ವಜನಿಕರು ತುಂಬಾ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ದಿನಪತ್ರಿಕೆಯಲ್ಲಿ ತಿಳಿದು ಬಂದಿರುತ್ತದೆ. ಹಾಗೂ ಪ್ರತಿಯೊಂದು ಕಲಬುರಗಿ ನಗರದ ಏರಿಯಾಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಎದ್ದಿರುತ್ತದೆ ಇದರಿಂದ ಅನೇಕ ರೀತಿಯ ಅವಘಡಗಳು ಸಂಭವಿಸುತ್ತಿವೆ.

Contact Your\'s Advertisement; 9902492681

ಒಂದು ವೇಳೆ ಕುಡಿಯುವ ನೀರು ಬಂದರೆ ಸಂಪೂರ್ಣವಾಗಿ ಆ ನೀರು ಮಲೀನಗೊಂಡಂತಹ ಬಣಕ್ಕೆ ತಿರುಗುತ್ತಿದ್ದು. ಇದರಿಂದ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಉದ್ಭವಿಸುವ ಲಕ್ಷಣಗಳು ಗೋಚರಿಸುತ್ತಿವೆ. ಆದ್ದರಿಂದ ನಮ್ಮ ವೇದಿಕೆ ವತಿಯಿಂದ ತಮ್ಮಲ್ಲಿ ಕುಡಿಯುವ ನೀರನ ವ್ಯವಸ್ಥೆಯನ್ನು ಸ್ವಚ್ಛವಾಗಿ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಬೇಕೆಂದು ಈ ಮೂಲಕ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ವಿನಂತಿಸಿಕೊಳ್ಳುತ್ತೇವೆ.

ಒಂದು ವೇಳೆ ತಾವುಗಳು ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ, ಸದರಿ ಕಲಬುರಗಿ ನಗರದ ಸಂಪೂರ್ಣ ಸಮಸ್ತ ನಾಗರೀಕರು ತಮ್ಮ ಕಛೇರಿಯ ಮುಂದೆ ಖಾಲಿ ಕೊಡಗಳನಿಟ್ಟು ಉಗ್ರವಾದ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸುರೇಶ ಹನಗುಡಿ, ಅಕ್ಷಯ, ನವೀನ, ಅಣವೀರ ಪಾಟೀಲ, ರವಿ ಸಜ್ಜನ್, ಬಸ್ಸು, ಅಜಯ, ಪ್ರವೀಣ ಸಿಂಧೆ, ಅಂಬು ಮಸ್ಕಿ, ಸಾಯಿಕುಮಾರ ಸಿಂಧೆ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here