ಕಲಬುರಗಿ: ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುತ್ತಿದ್ದ 11 ಕೃಷಿ ಮಾರಾಟ ಮಳಿಗೆಗಳ ಪರವಾನಿಗೆಯನ್ನು ಅಮಾನತ್ತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಜಂಟಿ ಕೃಷಿ ನಿರ್ದೇಶಕರು ಹಾಗೂ ಬೀಜ ಪರಿವೀಕ್ಷಕರು ನೇತೃತ್ವದ ತಂಡ ಕಳೆದ ಒಂದು ವಾರದಿಂದ ಜಿಲ್ಲೆಯ ವಿವಿಧ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ ದಾಳಿ ಮಾಡಿ ತಪಾಸಣೆ ಮಾಡಿದಾಗ ಬೀಜ ಅಧಿನಿಯಮ-1966 ಹಾಗೂ ಬೀಜಗಳ (ನಿಯಂತ್ರಣ) ಆದೇಶ-1983 ಉಲ್ಲಂಘಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಲಬುರಗಿ ನಗರದ ನೆಹರು ಗಂಜ್ ಪ್ರದೇಶದ ಓಂಪ್ರಕಾಶ ಶ್ರೀನಿವಾಸ್ & ಸನ್ಸ್ ಮತ್ತು ನೀಲಾ ಎಂಟರ್ಪ್ರೈಸೆಸ್, ಜೇವರ್ಗಿ ತಾಲೂಕಿನ ಶ್ರೀ ಸಾಯಿ ಟ್ರೇಡರ್ಸ್ ಜೇವರ್ಗಿ ಮತ್ತು ಸೊನ್ನ ಗ್ರಾಮದ ಸೌದಾಗರ್ ಟ್ರೇಡರ್ಸ್, ಯಡ್ರಾಮಿ ಪಟ್ಟಣದ ಭಾಗ್ಯವಂತಿ ಅಗ್ರೋ ಏಜೆನ್ಸಿಸ್ ಹಾಗೂ ಅಫಜಲಪೂರ ಪಟ್ಟಣದ ಗೊಲ್ಲಾಳೇಶ್ವರ ಅಗ್ರೋ ಏಜೆನ್ಸಿಸ್ ಬೀಜ ಮಾರಾಟ ಮಳಿಗೆಗಳ ಪರವಾನಿಗೆಯನ್ನು ನಿಲಂಬನೆ/ ಅಮಾನತ್ತಿನಲ್ಲಿಟ್ಟು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರೊಂದಿಗೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇನ್ನು ರಸಗೊಬ್ಬರ ನಿಯಂತ್ರಣ ಆದೇಶ-1985ರ ನಿಯಮಾವಳಿ ಉಲ್ಲಂಘನೆ ಹಿನ್ನೆಲೆಯಲ್ಲಿ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದ ಕೇತಕಿ ಸಂಗಮೇಶ್ವರ ಕೃಷಿ ಸೆಂಟರ್ ಮತ್ತು ವೀರಭದ್ರೇಶ್ವರ ಕೃಷಿ ಸೆಂಟರ್ ಮತ್ತು ಜೇವರ್ಗಿ ತಾಲೂಕಿನ ದಂಡಗುಂಡಾ ಬಸವೇಶ್ವರ ಅಗ್ರೋ ಏಜನ್ಸಿ ಜೇವರ್ಗಿ ಮತ್ತು ಜೇರಟಗಿಯ ಶ್ರೀ ಕರಿಸಿದ್ದೇಶ್ವರ ಟ್ರೇಡರ್ಸ್ ಚಿಲ್ಲರೆ ರಸಗೊಬ್ಬರ ಮಾರಾಟ ಮಳಿಗೆಗಳ ಪರವಾನಿಗೆ ಸಹ ಅಮಾನತ್ತು ಮಾಡಲಾಗಿದೆ.
ಹೆಚ್ಚಿನ ದರದಲ್ಲಿ ಮಾರಾಟ ಮಾಡಿದಲ್ಲಿ ದೂರು ಕೊಡಿ: ಅಮಾನತ್ತು ಮಾಡಲಾದ ಮೇಲ್ಕಂಡ ಬೀಜ ಮತ್ತು ರಸಗೊಬ್ಬರ ಮಳಿಗೆಯಲ್ಲಿ ರೈತರು ಬೀಜ ಮತ್ತು ರಸಗೊಬ್ಬರ ಖರೀದಿಸಬಾರದೆಂದು ತಿಳಿಸಿರುವ ಜಿಲ್ಲಾಧಿಕಾರಿಗಳು, ಸರ್ಕಾರ ನಿಗದಿಪಡಿಸಿದಂತೆ ಡಿ.ಎ.ಪಿ. ರಸಗೊಬ್ಬರ ಪ್ರತಿ ಬ್ಯಾಗಿಗೆ 1,350 ರೂ., ಯೂರಿಯಾ ರಸಗೊಬ್ಬರ ಪ್ರತಿ ಬ್ಯಾಗಿಗೆ 266 ರೂ. ಹತ್ತಿ (ಃoಟಟgಚಿಡಿಜ II) ಪ್ರತಿ ಪ್ಯಾಕೆಟ್ಗೆ 864 ರೂ. ದರಕ್ಕಿಂತ ಹೆಚ್ಚಿನ ದರಕ್ಕೆ ಯಾರಾದರು ಮಾರಾಟ ಮಾಡಿದಲ್ಲಿ ಹತ್ತಿರದ ರೈತ ಸಂಪರ್ಕ ಕೇಂದ್ತ ಅಥವಾ ಸಹಾಯಕ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸುವಂತೆ ರೈತರಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…