ಯೋಗದಿಂದ ರೋಗ ಮುಕ್ತಿ ಆರೋಗ್ಯ ವೃದ್ಧಿ; ಭಂವರ್ ಸಿಂಗ್ ಮೀನಾ

0
7

ಕಲಬುರಗಿ: ಪ್ರತಿದಿನ ಯೋಗ ಮಾಡುವುದರಿಂದ ರೋಗ ಮುಕ್ತಿಯಾಗಿ ಮನುಷ್ಯನ ಆರೋಗ್ಯ ವೃದ್ಧಿಯಾಗುತ್ತದೆ ಮನುಷ್ಯನು ಸದಾ ದೈಹಿಕ ಚಟುವಟಿಕೆಗಳು ತೊಡಗಿಸಿಕೊಳ್ಳುವುದರಿಂದ ಹೃದಯಘಾತ, ಮಧುಮೇಹ ಅನೇಕ ಕಾಯಿಲೆಗಳು ಇಲ್ಲವಾಗುತ್ತವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ ಮೀನಾ ಹೇಳಿದರು.

ಗುರುವಾರದಂದು ಜಗತ್ತ್ ವೃತ್ತದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಆಯುಷ್ ಇಲಾಖೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಲಬುರಗಿ ಹಾಗೂ ಇತರೆ ಇಲಾಖೆಗಳು ಆಯುಷ್ ಮಹಾವಿದ್ಯಾಲಯಗಳು ಮತ್ತು ವಿವಿಧ ಯೋಗ ಸಂಘ ಸಂಸ್ಥೆಗಳು, ಕಲಬುರಗಿ ಇವರ ಸಹಭಾಗಿತ್ವದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಚಾರಣೆ ಅಂಗವಾಗಿ ಯೋಗ ನಡಿಗೆ ಜಾಥ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

Contact Your\'s Advertisement; 9902492681

ಜೂನ್ 21 ರಂದು ಯೋಗಾಭ್ಯಾಸ ಪ್ರಾತ್ಯಕ್ಷಿಕ ಬೆಳಿಗ್ಗೆ 6.30 ಗಂಟೆಯಿಂದ 8.30ಗಂಟೆಯವರೆಗೆ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು, ಕಾಲೇಜಿನ ಪ್ರಾಂಶುಪಾಲರು, ವಿವಿಧ ಸಂಘ ಸಂಸ್ಥೆಗಳು ಚಂದ್ರಶೇಖರ ಪಾಟೀಲ್ ಕ್ರೀಡಾಂಗಣಕ್ಕೆ ಬಂದು ಯೋಗ ಅಭ್ಯಾಸವನ್ನು ಮಾಡಬೇಕು ತಮ್ಮ ತಮ್ಮ ಶಾಲಾ ಕಾಲೇಜುಗಳಲ್ಲಿ ವಿಶ್ವವಿದ್ಯಾಲಯ, ತಾಲೂಕುಗಳಲ್ಲಿ ಗ್ರಾಮ ಪಂಚಾಯತ್‍ಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಆಯುಷ್ ಇಲಾಖೆ ಅಧಿಕಾರಿ ಡಾ. ಗಿರೀಶ ಎಸ್. ಯು. ಅವರು ಮಾತನಾಡಿದರು. ಜನರಲ್ಲಿ ಜಾಗೃತಿ ಮೂಡಿಸುವಂತಹ ಯೋಗ ಕಾರ್ಯಕ್ರಮವಾಗಿದೆ ಜನರು ಯೋಗವನ್ನು ತಮ್ಮ ಜೀವನದ ಅವಿಭಾಜ ಅಂಗವಾಗಿ ಅಳವಡಿಸಿಕೊಳ್ಳಬೇಕು ಯೋಗ ಮಾಡುವುದರಿಂದ ದೈಹಿಕವಾಗಿ ಮಾನಸಿಕವಾಗಿ ಆರೋಗ್ಯವಂತರಾಗಿ ಇರಲು ಸಾಧ್ಯ ಎಂದರು.

ಯೋಗ ನಡಿಗೆ ಜಾಥ ಕಾರ್ಯಕ್ರಮವು ಜಗತ್ತ್ ವೃತ್ತದಿಂದ ಪ್ರಾರಂಭವಾಗಿ ಸರ್ದಾರ ವಲಭ ಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ಬಂದು ಮುಕ್ತಾಯವಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಡಾ. ರತಿಕಾಂತ್ ಸ್ವಾಮಿ, ಪದವಿ ಪೂರ್ವ ಶಾಲಾ ಶಿಕ್ಷಣ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಹೋಮಿಯೋಪತಿ ಮಡಿಕಲ್ ಕಾಲೇಜ್, ಹಿಂಗುಲಾಂಭಿಕಾ ಆಯುರ್ವೇದ ಆಸ್ಪತ್ರೆ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ವಿವೇಕ ಜಾಗೃತಿ ವಿದ್ಯಾಪೀಠ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಸಾರ್ವಜನಿಕರು, ಯುವಸಬಲೀಕರಣ ಕ್ರೀಡಾ ಇಲಾಖೆ ವಸತಿ ನಿಲಯದ ಯುವಕರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here