ರಸ್ತೆಯಲ್ಲಿ ಮಳೆ ನೀರು ಸಂಗ್ರಹ ಸಾರ್ವಜನಿಕರ ಸಂಚಾರಕ್ಕೆ ಸಂಚಕಾರ

ಶಹಾಬಾದ: ನಗರದ ವಾರ್ಡ ನಂ.17 ಹಾಗೂ ನಗರದ ಮಧ್ಯಭಾಗದಲ್ಲಿರುವ ಸೇಂಟ್ ಥಾಮಸ್ ಶಾಲೆಯ ಮುಂಭಾಗದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಅಗೆದು ಹೋದ ರಸ್ತೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸೇರಿಕೊಂಡು ಸಾರ್ವಜನಿಕರ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ.

ಕಳೆದ ಹತ್ತು ದಿನಗಳಿಂದ ಹಿಂದೆ ರಸ್ತೆ ಅಗೆಯಲಾಗಿದೆ.ಅಲ್ಲದೇ ಮೊಳಕಾಲುದ್ದ ಆಳ ತೋಡಿದ್ದರಿಂದ ಮಳೆ ಬಂದಾಗಲೊಮ್ಮೆ ನೀರು ತುಂಬಿಕೊಂಡು ಸಾರ್ವಜನಿಕರಿಗೆ ಎಲ್ಲಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ.ಅಲ್ಲದೇ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಶಾಲೆಗೆ ಪ್ರವೇಶ ಮಾಡಬೇಕಾದರೂ ಹರಸಾಹಸ ಪಡಬೇಕಾಗಿದೆ. ಮಳೆ ನೀರು ಹೋಗುವಂತೆ ಗುತ್ತಿಗೆದಾರರು ಕ್ರಮಕೊಳ್ಳದಿರುವುದರಿಂದ ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿದೆ.

ಜನರು ಹೊಂಡದಲ್ಲಿ ಬಿದ್ದು, ಮೈಯೆಲ್ಲಾ ಕೆಸರು ಮಾಡಿಕೊಂಡ ಉದಾಹರಣೆಗಳಿವೆ. ಇದೇ ರಸ್ತೆಯಲ್ಲಿ ವಾರ್ಡ ಸದಸ್ಯೆ ಸಾಬೇರಾಬೇಗಂ ಅವರ ಮನೆಯಿದೆ.ಆದ್ದರಿಂದ ರಸ್ತೆ ನಿರ್ಮಾಣದ ಜತೆಗೆ ಮಳೆ ಬಂದಾಗಲೊಮ್ಮೆ ನೀರು ನಿಲ್ಲದಂತೆ ಕ್ರಮಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.ಒಂದು ವೇಳೆ ಏನಾದರೂ ಅನಾಹುತವಾದರೆ ಅದಕ್ಕೆಲ್ಲಾ ನಗರಸಭೆಯ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ.

ಈ ಕಾಮಗಾರಿ ವೀಕ್ಷಿಸಬೇಕಾದ ಎಇಇ, ಜೆಇಗಳು ತಮಗೂ ಅದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ.ಈ ಕಡೆ ಗಮನಹರಿಸುವುದೇ ಇಲ್ಲಾ ಎಂದು ಸಾರ್ವಜನಿಕರ ಆರೋಪವಾಗಿದೆ.ಕೂಡಲೇ ಈ ಬಗ್ಗೆ ಕ್ರಮಕೈಗೊಂಡು, ಬೇಗನೆ ರಸ್ತೆ ನಿರ್ಮಾಣ ಮಾಡಿಕೊಡಬೇಕೆಂದು ಕರವೇ ತಾಲೂಕಾಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ್ ಒತ್ತಾಯಿಸಿದ್ದಾರೆ.

emedialine

Recent Posts

ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ 117 ನೇ ಜನ್ಮದಿನೋತ್ಸವ

ರಾಯಚೂರು: ಭಾರತದ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 117 ನೇ ಜನ್ಮದಿನೋತ್ಸವವನ್ನು ಅಖಿಲಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ-ಎಐಆರ್ ಎಸ್…

1 hour ago

ಶಿವರಾಜ್ ಪಾಟೀಲ್ ಗೋಣಿಗಿಗೆ ಪ್ರಶಸ್ತಿ ಪ್ರದಾನ: ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿವರಾಜ್ ಪಾಟೀಲ್ ಗೋಣಿಗಿ ಅವರಿಗೆ ನಗರ ರಂಗ ಮಂದಿರದಲ್ಲಿ ಶನಿವಾರ ಪೂಜ್ಯ ಹಾರಕೂಡ ಶ್ರೀಗಳು…

2 hours ago

ಕಲಬುರಗಿ: ಶ್ರೀರೇವಣಸಿದ್ದೇಶ್ವರ ಹುಂಡಿಯಲ್ಲಿ ಚಿನ್ನ, ಬೆಳ್ಳಿ 37.94 ಲಕ್ಷ ರೂ. ನಗದು ಸಂಗ್ರಹ

ಕಲಬುರಗಿ: ಇಲ್ಲಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ತಾಪ್ತಿಯ ಸುಪ್ರಸಿದ್ಧ ದೇವಸ್ಥಾನದಲ್ಲಿ ಒಂದಾಗಿರುವ ರೇವಗ್ಗಿ ರಟಕಲ್ ಶ್ರೀರೇವಣಸಿದ್ದೇಶ್ವರ ದೇವಸ್ಥಾನದ ಸುಮಾರು…

4 hours ago

ಸಂಗೀತದಿಂದ ಮಾನಸಿಕ ಆರೋಗ್ಯ ಮತ್ತು ಸ್ಮರಣ ಶಕ್ತಿ ವೃದ್ಧಿ

ಕಲಬುರಗಿ: ನಗರದ ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಮತ್ತು ಬಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಯುವ ವಿದ್ಯಾರ್ಥಿಗಳಿಗೆ ಏಕಾಗ್ರತೆ…

18 hours ago

ಕಲಬುರಗಿ: ದಾರಿದೀಪ ಕಂಬಗಳು ಲೋಕಾರ್ಪಣೆ

ಕಲಬುರಗಿ : ಮಹಾನಗರ ಪಾಲಿಕೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿ ಮೋಹನ್ ಲಾಡ್ಜ ವೃತ್ತದಿಂದ ರಾಮಮಂದಿರ…

18 hours ago

ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಎಸ್.ಯು.ಸಿ.ಐ(ಸಿ) ಮನವಿ

ಶಹಾಬಾದ: ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗುರುವಾರ ನಗರದ ಎಸ್.ಯು.ಸಿ.ಐ(ಸಿ)ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ.ಮಾನೆ ಅವರ ನೇತೃತ್ವದ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420