ಶಿವಾನಂದ ಪಾಟೀಲರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಬೀರಾಳ ಆಗ್ರಹ

0
87

ಶಹಾಬಾದ :ಜಿಲ್ಲೆಯಲ್ಲಿಯೇ ಎಲ್ಲರ ಜತೆಗೆ ಒಡನಾಟವನ್ನು ಹೊಂದಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸದಾಕಾಲ ಶ್ರಮಿಸುತ್ತಿರುವ ಕಾಂಗ್ರೆಸ್ ಮುಖಂಡ ಶಿವಾನಂದ ಪಾಟೀಲ ಮರತೂರ ಅವರಿಗೆ ಪಕ್ಷ ಗುರುತಿಸಿ ಕಾಂಗ್ರೆಸ್ ಪಕ್ಷದ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಮುಖಂಡರಾದ ವಿಶ್ವರಾಧ್ಯ ಬೀರಾಳ,ನಾಗಣ್ಣ ರಾಂಪೂರೆ ಆಗ್ರಹಿಸಿದ್ದಾರೆ.

ಸುಮಾರು 35 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಶಿವಾನಂದ ಪಾಟೀಲ ತಾಪಂ ಸದಸ್ಯರಾಗಿ, ಜಿಪಂ ಸದಸ್ಯರಾಗಿರುವ ಜತೆಗೆ ಜಿಪಂ ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಿರುವ ಎಲ್ಲಾ ಅನುಭವ ಹೊಂದಿದ್ದಾರೆ.ಅಲ್ಲದೇ ಇತ್ತಿಚಿಗಷ್ಟೇ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಬಿ.ಜಿ.ಪಾಟೀಲ ವಿರುದ್ಧ ಆರೋಗ್ಯಕರ ಪೈಪೋಟಿ ನೀಡುವ ಮೂಲಕ ಕೆಲವೇ ಅಂತರದ ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ.ಆದರೆ ಎದುರಾಳಿಯವರನ್ನು ಬೆವರಿಳಿಸುವಂತೆ ಮಾಡಿದ್ದರು.

Contact Your\'s Advertisement; 9902492681

ಜಿಲ್ಲೆಯಲ್ಲಿ ಹಾಗೂ ವಿಶೇಷವಾಗಿ ಚಿತ್ತಾಪೂರ ತಾಲೂಕಿನಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದಾರೆ.ಇತ್ತಿಚ್ಚಿನ ಲೋಕಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಹಗಲು- ರಾತ್ರಿ ಎನ್ನದೇ ಪಕ್ಷಕ್ಕಾಗಿ ಶ್ರಮಿಸಿದ್ದಾರೆ.ಪಕ್ಷದ ಎಲ್ಲಾ ಶಾಸಕರ ಜತೆ ಉತ್ತಮ ಒಡನಾಟವನ್ನು ಹೊಂದಿದ್ದು, ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವ ಎಲ್ಲಾ ಸಾಮಥ್ರ್ಯ ಅವರಲ್ಲಿದೆ.ಅಲ್ಲದೇ ಎಲ್ಲಾ ಸಮುದಾಯದ ಜನರೊಂದಿಗೆ ಉತ್ತಮ ಭಾಂಧವ್ಯವನ್ನು ಹೊಂದಿರುವ ಇವರು ಸಾಮಾಜಿಕ ,ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಯಾವಾಗಲೂ ಬೆಂಬಲಿಸುತ್ತಾ ಬಂದಿದ್ದಾರೆ. ಈ ಭಾಗದಲ್ಲಿ ಯಾವುದೇ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಂತೆ ಸಕ್ರೀಯವಾಗಿ ಪಾಲ್ಗೊಳ್ಳುತ್ತಾರೆ. ಇವರೊಬ್ಬ ಸಂಘಟನಾ ಚತುರ. ಆದ್ದರಿಂದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಶಿವಾನಂದ ಪಾಟೀಲ ಅವರ ಅನುಭವ, ಸಂಘಟನೆ ದೃಷ್ಟಿಯಿಂದ ಮತ್ತು ಪಕ್ಷದ ಬಲವರ್ಧನೆಗಾಗಿ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕೆಂದು ಅ ಅವರಲ್ಲಿ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here