ಶಿವಾನಂದ ಪಾಟೀಲರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಬೀರಾಳ ಆಗ್ರಹ

ಶಹಾಬಾದ :ಜಿಲ್ಲೆಯಲ್ಲಿಯೇ ಎಲ್ಲರ ಜತೆಗೆ ಒಡನಾಟವನ್ನು ಹೊಂದಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸದಾಕಾಲ ಶ್ರಮಿಸುತ್ತಿರುವ ಕಾಂಗ್ರೆಸ್ ಮುಖಂಡ ಶಿವಾನಂದ ಪಾಟೀಲ ಮರತೂರ ಅವರಿಗೆ ಪಕ್ಷ ಗುರುತಿಸಿ ಕಾಂಗ್ರೆಸ್ ಪಕ್ಷದ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಮುಖಂಡರಾದ ವಿಶ್ವರಾಧ್ಯ ಬೀರಾಳ,ನಾಗಣ್ಣ ರಾಂಪೂರೆ ಆಗ್ರಹಿಸಿದ್ದಾರೆ.

ಸುಮಾರು 35 ವರ್ಷಗಳ ರಾಜಕೀಯ ಅನುಭವ ಹೊಂದಿರುವ ಶಿವಾನಂದ ಪಾಟೀಲ ತಾಪಂ ಸದಸ್ಯರಾಗಿ, ಜಿಪಂ ಸದಸ್ಯರಾಗಿರುವ ಜತೆಗೆ ಜಿಪಂ ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಿರುವ ಎಲ್ಲಾ ಅನುಭವ ಹೊಂದಿದ್ದಾರೆ.ಅಲ್ಲದೇ ಇತ್ತಿಚಿಗಷ್ಟೇ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಬಿ.ಜಿ.ಪಾಟೀಲ ವಿರುದ್ಧ ಆರೋಗ್ಯಕರ ಪೈಪೋಟಿ ನೀಡುವ ಮೂಲಕ ಕೆಲವೇ ಅಂತರದ ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ.ಆದರೆ ಎದುರಾಳಿಯವರನ್ನು ಬೆವರಿಳಿಸುವಂತೆ ಮಾಡಿದ್ದರು.

ಜಿಲ್ಲೆಯಲ್ಲಿ ಹಾಗೂ ವಿಶೇಷವಾಗಿ ಚಿತ್ತಾಪೂರ ತಾಲೂಕಿನಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದಾರೆ.ಇತ್ತಿಚ್ಚಿನ ಲೋಕಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಹಗಲು- ರಾತ್ರಿ ಎನ್ನದೇ ಪಕ್ಷಕ್ಕಾಗಿ ಶ್ರಮಿಸಿದ್ದಾರೆ.ಪಕ್ಷದ ಎಲ್ಲಾ ಶಾಸಕರ ಜತೆ ಉತ್ತಮ ಒಡನಾಟವನ್ನು ಹೊಂದಿದ್ದು, ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವ ಎಲ್ಲಾ ಸಾಮಥ್ರ್ಯ ಅವರಲ್ಲಿದೆ.ಅಲ್ಲದೇ ಎಲ್ಲಾ ಸಮುದಾಯದ ಜನರೊಂದಿಗೆ ಉತ್ತಮ ಭಾಂಧವ್ಯವನ್ನು ಹೊಂದಿರುವ ಇವರು ಸಾಮಾಜಿಕ ,ಶೈಕ್ಷಣಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಯಾವಾಗಲೂ ಬೆಂಬಲಿಸುತ್ತಾ ಬಂದಿದ್ದಾರೆ. ಈ ಭಾಗದಲ್ಲಿ ಯಾವುದೇ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಂತೆ ಸಕ್ರೀಯವಾಗಿ ಪಾಲ್ಗೊಳ್ಳುತ್ತಾರೆ. ಇವರೊಬ್ಬ ಸಂಘಟನಾ ಚತುರ. ಆದ್ದರಿಂದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಶಿವಾನಂದ ಪಾಟೀಲ ಅವರ ಅನುಭವ, ಸಂಘಟನೆ ದೃಷ್ಟಿಯಿಂದ ಮತ್ತು ಪಕ್ಷದ ಬಲವರ್ಧನೆಗಾಗಿ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕೆಂದು ಅ ಅವರಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ 117 ನೇ ಜನ್ಮದಿನೋತ್ಸವ

ರಾಯಚೂರು: ಭಾರತದ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 117 ನೇ ಜನ್ಮದಿನೋತ್ಸವವನ್ನು ಅಖಿಲಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ-ಎಐಆರ್ ಎಸ್…

1 hour ago

ಶಿವರಾಜ್ ಪಾಟೀಲ್ ಗೋಣಿಗಿಗೆ ಪ್ರಶಸ್ತಿ ಪ್ರದಾನ: ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿವರಾಜ್ ಪಾಟೀಲ್ ಗೋಣಿಗಿ ಅವರಿಗೆ ನಗರ ರಂಗ ಮಂದಿರದಲ್ಲಿ ಶನಿವಾರ ಪೂಜ್ಯ ಹಾರಕೂಡ ಶ್ರೀಗಳು…

2 hours ago

ಕಲಬುರಗಿ: ಶ್ರೀರೇವಣಸಿದ್ದೇಶ್ವರ ಹುಂಡಿಯಲ್ಲಿ ಚಿನ್ನ, ಬೆಳ್ಳಿ 37.94 ಲಕ್ಷ ರೂ. ನಗದು ಸಂಗ್ರಹ

ಕಲಬುರಗಿ: ಇಲ್ಲಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ತಾಪ್ತಿಯ ಸುಪ್ರಸಿದ್ಧ ದೇವಸ್ಥಾನದಲ್ಲಿ ಒಂದಾಗಿರುವ ರೇವಗ್ಗಿ ರಟಕಲ್ ಶ್ರೀರೇವಣಸಿದ್ದೇಶ್ವರ ದೇವಸ್ಥಾನದ ಸುಮಾರು…

4 hours ago

ಸಂಗೀತದಿಂದ ಮಾನಸಿಕ ಆರೋಗ್ಯ ಮತ್ತು ಸ್ಮರಣ ಶಕ್ತಿ ವೃದ್ಧಿ

ಕಲಬುರಗಿ: ನಗರದ ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಮತ್ತು ಬಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಯುವ ವಿದ್ಯಾರ್ಥಿಗಳಿಗೆ ಏಕಾಗ್ರತೆ…

18 hours ago

ಕಲಬುರಗಿ: ದಾರಿದೀಪ ಕಂಬಗಳು ಲೋಕಾರ್ಪಣೆ

ಕಲಬುರಗಿ : ಮಹಾನಗರ ಪಾಲಿಕೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿ ಮೋಹನ್ ಲಾಡ್ಜ ವೃತ್ತದಿಂದ ರಾಮಮಂದಿರ…

18 hours ago

ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಎಸ್.ಯು.ಸಿ.ಐ(ಸಿ) ಮನವಿ

ಶಹಾಬಾದ: ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗುರುವಾರ ನಗರದ ಎಸ್.ಯು.ಸಿ.ಐ(ಸಿ)ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ.ಮಾನೆ ಅವರ ನೇತೃತ್ವದ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420