ವಿದ್ಯಾರ್ಥಿಗಳ ಯಶಸ್ಸಿಗೆ ಸಮಯದ ಪರಿಪಾಲನೆ ಮುಖ್ಯ: ಡಾ. ಪ್ರದೀಪ್ ಬಿ.ಎಸ್.

ಕಲಬುರಗಿ : ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕಗಳು ಹಾಗು ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ಜೀವನ ಕೌಶಲ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ನಿಮ್ಹಾನ್ಸ್‌ ನ ಸಂಸ್ಥೆಯ ಸಾರ್ವಜನಿಕ ಆರೋಗ್ಯ ಮತ್ತು ಸಾಂಕ್ರಮಿಕ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಪ್ರದೀಪ್ ಬಿ.ಎಸ್. ಅವರು ಈ ಸಂದರ್ಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ವಿಯಾಗಬೇಕಾದರೆ ಭೂತಕಾಲದ ಭವಿಷ್ಯತ ಕಾಲದ ಬಗ್ಗೆ ಹೆಚ್ಚಿಗೆ ಯೋಚನೆ ಮಾಡದೆ ವರ್ತನಮಾನದಲ್ಲಿ ನಾವು ಏನು ಮಾಡಬೇಕು ಎಂದು ಯೋಚಿಸಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರಲ್ಲದೆ ದಿನ ನಿತ್ಯದ ಕಾರ್ಯಗಳ ಜೊತೆಗೆ ಅತಿ ಹೆಚ್ಚಿನ ಸಮಯ ಓದಿನ ಕಡೆಗೆ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಕಿದ್ವಾಯಿ ಆಸ್ಪತ್ರೆಯ ಹಿರಿಯ ವೈದಿಕೀಯ ಅಧಿಕಾರಿಗಳಾದ ಡಾ. ಮಹಾಂತೇಶ, ಸ್ಕ್ಯಾನ್ ಕಾರ್ಯಕ್ರಮ ನಿಯಂತ್ರಕರಾದ ಡಾ. ಲಾವಣ್ಯ ಗರಡೆ, ನಿಮ್ಹಾನ್ಸ್‌ನ ಡಾ. ಎ. ಮುತ್ತುರಾಜ್ ಎನ್‌ಎಸ್.ಎಸ್. ಅಧಿಕಾರಿಗಳಾದ ಡಾ. ಶ್ರೀಮಂತ ಹೋಳಕರ್, ಡಾ. ನಾಗಪ್ಪ ಗೋಗಿ, ಡಾ. ರವಿ ಬೌದ್ದೆ, ಪ್ರೊ. ಮೇರಿ ಮ್ಯಾಕ್ಯೂಸ್, ಡಾ. ಬಲಭೀಮ ಸಾಂಗ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಡಾ. ರಾಜೇಶ ಅಜಬ್ ಸಿಂಗ್, ಡಾ. ವಿಜಯಕುಮಾರ ಗೋಪಾಳೆ, ಡಾ. ಅರುಣಕುಮಾರ ಸಲಗರ್ ಭಾಗವಹಿಸಿದ್ದರು.

ಡಾ. ಶ್ರೀಮಂತ ಬಿ. ಹೋಳಕರ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಕು. ಆಶಾರಾಣಿ ಸ್ವಾಗತಿಸಿದರು ಕು. ಜಿಲಾನಿಯವರು ವಂದಿಸಿದರು.

emedialine

Recent Posts

ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ 117 ನೇ ಜನ್ಮದಿನೋತ್ಸವ

ರಾಯಚೂರು: ಭಾರತದ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 117 ನೇ ಜನ್ಮದಿನೋತ್ಸವವನ್ನು ಅಖಿಲಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ-ಎಐಆರ್ ಎಸ್…

1 hour ago

ಶಿವರಾಜ್ ಪಾಟೀಲ್ ಗೋಣಿಗಿಗೆ ಪ್ರಶಸ್ತಿ ಪ್ರದಾನ: ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿವರಾಜ್ ಪಾಟೀಲ್ ಗೋಣಿಗಿ ಅವರಿಗೆ ನಗರ ರಂಗ ಮಂದಿರದಲ್ಲಿ ಶನಿವಾರ ಪೂಜ್ಯ ಹಾರಕೂಡ ಶ್ರೀಗಳು…

2 hours ago

ಕಲಬುರಗಿ: ಶ್ರೀರೇವಣಸಿದ್ದೇಶ್ವರ ಹುಂಡಿಯಲ್ಲಿ ಚಿನ್ನ, ಬೆಳ್ಳಿ 37.94 ಲಕ್ಷ ರೂ. ನಗದು ಸಂಗ್ರಹ

ಕಲಬುರಗಿ: ಇಲ್ಲಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ತಾಪ್ತಿಯ ಸುಪ್ರಸಿದ್ಧ ದೇವಸ್ಥಾನದಲ್ಲಿ ಒಂದಾಗಿರುವ ರೇವಗ್ಗಿ ರಟಕಲ್ ಶ್ರೀರೇವಣಸಿದ್ದೇಶ್ವರ ದೇವಸ್ಥಾನದ ಸುಮಾರು…

4 hours ago

ಸಂಗೀತದಿಂದ ಮಾನಸಿಕ ಆರೋಗ್ಯ ಮತ್ತು ಸ್ಮರಣ ಶಕ್ತಿ ವೃದ್ಧಿ

ಕಲಬುರಗಿ: ನಗರದ ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಮತ್ತು ಬಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಯುವ ವಿದ್ಯಾರ್ಥಿಗಳಿಗೆ ಏಕಾಗ್ರತೆ…

18 hours ago

ಕಲಬುರಗಿ: ದಾರಿದೀಪ ಕಂಬಗಳು ಲೋಕಾರ್ಪಣೆ

ಕಲಬುರಗಿ : ಮಹಾನಗರ ಪಾಲಿಕೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿ ಮೋಹನ್ ಲಾಡ್ಜ ವೃತ್ತದಿಂದ ರಾಮಮಂದಿರ…

18 hours ago

ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಎಸ್.ಯು.ಸಿ.ಐ(ಸಿ) ಮನವಿ

ಶಹಾಬಾದ: ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗುರುವಾರ ನಗರದ ಎಸ್.ಯು.ಸಿ.ಐ(ಸಿ)ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ.ಮಾನೆ ಅವರ ನೇತೃತ್ವದ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420