ಸುರಪುರ: ನಗರದ ಕುಂಬಾರಪೇಟ ದಿಂದ ಮಂಗಳೂರ ಗ್ರಾಮದ ವರೆಗೆ ರಸ್ತೆ ಎರಡು ಬದಿಗಳಲ್ಲಿ ಗಿಡಿ ನೆಡುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ ಸಾಗರ ಬಣ)ದ ಮುಖಂಡರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ನಗರದ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿದ ಮುಖಂಡರು,ಕುಂಬಾರಪೇಟ ದಿಂದ ಮಂಗಳೂರ ವರೆಗೆ ಸುಮಾರು 15 ಕಿ.ಮೀ ದೂರವಿದ್ದು ಈ ರಸ್ತೆಯಲ್ಲಿ ಯಾವುದೇ ಮರಗಳಿಲ್ಲ,ಇದರಿಂದ ಜನರು ಓಡಾಡಲು ಸುಡು ಬಿಸಿಲಲ್ಲೇ ಹೋಗಬೇಕಾಗಿದೆ. ಅಲ್ಲದೆ ಸರಕಾರ ರಸ್ತೆ ಬದಿಗಳಲ್ಲಿ ಮರ ಬೆಳೆಸಲು ಅನೇಕ ಯೋಜನೆಗಳನ್ನು ನೀಡಿದೆ,ಆದರೆ ಯಾವ ಯೋಜನೆಗಳು ಈ ರಸ್ತೆಯಲ್ಲಿ ಮರ ಬೆಳೆಸಲು ಉಪಯೋಗವಾಗಿಲ್ಲ,ಆದ್ದರಿಂದ ಈಗ ಮರಗಳನ್ನು ಬೆಳೆಸುವುದು ಅಗತ್ಯವಾಗಿದ್ದು,ತಾಪಮಾನ ಕಡಿಮೆಗೊಳಿಸಲು ಈ ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಳನ್ನು ನೆಡುವಂತೆ ಮನವಿ ಮಾಡಿಕೊಂಡರು.
ನಂತರ ಅರಣ್ಯಾಧಿಕಾರಿಗೆ ಬರೆದ ಮನವಿ ಕಚೇರಿ ಸಿಬ್ಬಂದಿ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ,ತಾಲೂಕ ಸಂಚಾಲಕ ತಿಪ್ಪಣ್ಣ ಶೆಳ್ಳಗಿ,ಶೇಖರ ಮಂಗಳೂರ,ರಾಜು ಬಡಿಗೇರ,ಎಮ್.ಪಟೇಲ್,ಭೀಮರಾಯ ಮಂಗಳೂರ,ಹಣಮಂತ ರತ್ತಾಳ,ಖಾಜಾ ಅಜ್ಮೀರ್,ಯಲ್ಲಪ್ಪ ರತ್ತಾಳ,ಹಣಮಂತ ದೇವಾಪುರ,ಮೌನೇಶ ದೇವತ್ಕಲ್,ಮೌನೇಶ ತಿಂಥಣಿ,ದೇವಿಂದ್ರ ವಾಗಣಗೇರ,ಈರಪ್ಪ ಬಡಿಗೇರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…