ಬಿಸಿ ಬಿಸಿ ಸುದ್ದಿ

ಜಾಲಿಬೆಂಚಿ ಗ್ರಾಮಕ್ಕೆ ಬೆಳಿಗ್ಗೆ ಬಸ್ ಓಡಿಸಲು ಸಾರ್ವಜನಿಕರ ಮನವಿ

ಸುರಪುರ: ತಾಲೂಕಿನ ಜಾಲಿಬೆಂಚಿ ಗ್ರಾಮಕ್ಕೆ ಬೆಳಿಗ್ಗೆ ಬಸ್ ಓಡಿಸಲು ಆಗ್ರಹಿಸಿ ಗ್ರಾಮಸ್ಥರು ಶ್ರೀ ಮಹಾತ್ಮಾ ಗಾಂಧೀಜಿ ರೈತ ಒಕ್ಕೂಟದ ಮೂಲಕ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿ,ಜಾಲಿಬೆಂಚಿ ಗ್ರಾಮಕ್ಕೆ ಬೆಳಿಗ್ಗೆ 7:30ಕ್ಕೆ ಒಂದು ಬಸ್ ಬರುತ್ತಿದ್ದು ಅದು ಮಾವಿನಮಟ್ಟಿ ಗ್ರಾಮಕ್ಕೆ ಹೋಗಿ ಬರುವುದರಿಂದ ಗ್ರಾಮದ ಮಕ್ಕಳು ಸುರಪುರಕ್ಕೆ ಶಾಲಾ ಕಾಲೇಜಿಗೆ ಬರಲು ಆಸನ ಇಲ್ಲದೆ ದಿನಾಲು ಮಕ್ಕಳು ಶಿಕ್ಷಣ ದಿಂದ ವಂಚಿತರಾಗುತ್ತಿದ್ದಾರೆ.ಆದ್ದರಿಂದ ಕೂಡಲೇ ಗ್ರಾಮಕ್ಕೆ ಬೆಳಿಗ್ಗೆ ಒಂದು ಬಸ್ ಓಡಿಸಬೇಕು ಮತ್ತು ಜಾಲಿಬೆಂಚಿ ಕ್ರಾಸ್ ಮೂಲಕ ಹೋಗುವ ಬಾಗಲಕೋಟೆ,ವಿಜಯಪುರ ಹಾಗೂ ಕನ್ನೆಳ್ಳಿ,ಬೈಚಬಾಳ,ಕೂಡಲಗಿ ಗ್ರಾಮಗಳಿಗೆ ಹೋಗುವ ಎಲ್ಲಾ ಬಸ್‍ಗಳು ಜಾಲಿಬೆಂಚಿ ಗ್ರಾಮದೊಳಗೆ ವಾಯಾ ಮಾಡಿಕೊಂಡು ಹೋಗಲು ಕ್ರಮ ಕೈಗೊಳ್ಳಬೇಕು,ಇಲ್ಲವಾದಲ್ಲಿ ಗ್ರಾಮದ ಜನರು ಕುಂಬಾರಪೇಟ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಮುಖಂಡರಾದ ದೇವಿಂದ್ರಪ್ಪಗೌಡ ಪೊಲೀಸ್ ಪಾಟೀಲ್,ಮಲ್ಲಣ್ಣ ಸಾಹುಕಾರ,ಅಂಬ್ರೇಶ ಮರಾಠ,ಇಸ್ಮಾಯಿಲ್ ಉಸ್ತಾದ,ಮಾಜಿ.ಗ್ರಾ.ಪಂ ಅಧ್ಯಕ್ಷ ವಿಶ್ವನಾಥರಡ್ಡಿ ಕಾಮತ್,ದೇವಿಂದ್ರಪ್ಪ ನಾಯಕ ಮಲ್ಲಿಬಾವಿ,ಭೀಮಣ್ಣ ಪೂಜಾರಿ ನಾಗನಟಗಿ ,ರವಿ ಕಾಮತ್,ಬಸವರಾಜ ಕಟ್ಟಿಮನಿ,ಮಲ್ಲಿಕಾರ್ಜುನ ಬಡಿಗೇರ,ಗುಲಾಂ ಹುಸೇನ್ ಕನ್ನೆಳ್ಳಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

2 hours ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

3 hours ago

ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ಸಮಾಲೋಚನ ಕಾರ್ಯಗಾರ

ಕಲಬುರಗಿ: ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ನಗರದ ಅಪ್ಪಾ ಪಬ್ಲಿಕ್ ಶಾಲೆಯ ಲಿಂ.ಡಾ.ಬಸವರಾಜಪ್ಪ ಅಪ್ಪಾ ಸ್ಮಾರಕ ಭವನದಲ್ಲಿಂದು…

3 hours ago

ಖಾಸಗಿ ಶಾಲೆಯ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಮನವಿ

ಕಲಬುರಗಿ: ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಶುಲ್ಕ ಹೆಚ್ಚಳ ಹಾಗೂ ಕಟ್ಟಡ ಮತ್ತು ಪ್ರವೇಶ ಶುಲ್ಕ ಹೆಸರಿನಲ್ಲಿ ಡೊನೇಷನ್…

3 hours ago

ಪರಿಚಲನೆ ಅಭಿನಂದನಾ ಗ್ರಂಥ ಲೋಕಾರ್ಪಣೆ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಜರುಗುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ…

3 hours ago

ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಅರ್ಜಿ ಸ್ವೀಕಾರ

ಸಾರ್ವಜನಿಕರ ಕೆಲಸಗಳಿಗೆ ವಿಳಂಬ ಮಾಡುವುದು ಸರಿಯಲ್ಲ: ಡಿವೈಎಸ್ಪಿ ಹಣಮಂತ್ರಾಯ ಸುರಪುರ: ಸಾರ್ವಜನಿಕರು ತಮ್ಮ ಯಾವುದೇ ಕೆಲಸಗಳಿಗೆ ಕಚೇರಿಗೆ ಬಂದರೆ ವಿಳಂಬ…

3 hours ago