ಬಿಸಿ ಬಿಸಿ ಸುದ್ದಿ

ಸೋಮವಾರದೊಳಗೆ ಅಮಾನತು ಆಗಿಲ್ಲ ಶಾಲೆಗೆ ಬೀಗ ಹಾಕಿ ಧರಣಿ: ಎಸ್ಎಫ್ಐ

ಹಟ್ಟಿ: ಯಲಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಾಲೆಗೆ ನಿರಂತರ ಗೈರಾಗುತ್ತಿರುವ ಮುಖ್ಯಗುರು ನಾಗನಗೌಡ ರನ್ನು ಸೇವೆಯಿಂದ ಅಮಾಮಾತಿಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಲಿಂಗಸ್ಗೂರು ತಾಲೂಕು ಸಮಿತಿ ನೇತೃತ್ವದಲ್ಲಿ ಶಾಲೆಯ ಒಳಾಂಗಣದಲ್ಲಿ ಅನಿರ್ಧಿಷ್ಟಾವಧಿ ಧರಣಿ 3ನೇ ದಿನಕ್ಕೆ ತಲುಪಿದೆ.

ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಮಾತನಾಡಿ ನಾಗನಗೌಡ ಉದ್ಯಮಿಯಾಗಿದ್ದು, ಅವರು ಶೈಕ್ಷಣಿಕ ವಾತಾವರಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಪ್ರತಿನಿತ್ಯ ಅವರು ಶಾಲೆಗೆ 9:30 ಕ್ಕೆ ಬರುತ್ತಿಲ್ಲ ಮತ್ತು ಶಾಲೆಯ ಪ್ರಾರ್ಥನೆಗೆ ಹಾಜರಿಲ್ಲ. ಈ ಮೂಲಕ ಕರ್ನಾಟಕ ಶಿಕ್ಷಣ ಖಾಯ್ದೆ 1983 ಕಾಯ್ದೆ, ಕರ್ನಾಟಕ ನಾಗರೀಕ ಸೇವಾ ನಿಯಮಗಳು 1958, ಕರ್ನಾಟಕ ಸರ್ಕಾರ ನೌಕರರ (ವರ್ತನೆ) ನಿಯಮಗಳ 1966 ಹಾಗೂ ಕರ್ನಾಟಕ ಸರಕಾರಿ ಸೇವಾ(ಸಿಸಿಎ) ನಿಯಮಗಳು 1957 ರ ಉಲ್ಲಂಘನೆ ಮಾಡಿದ್ದು, ಇವುಗಳ ಆಧಾರದ ಮೇಲೆ ಅಧಿಕಾರಿ ಗಳು ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಸೋಮವಾರ ಒಳಗೆ ಅಮಾನತು ಮಾಡಿಲ್ಲ ಅಂದ್ರೆ ಹೋರಾಟದ ಸ್ವರೂಪ ತೀವ್ರಗೊಳಿಸಲು ತೀರ್ಮಾನಿಸಲಾಗಿದೆ ಎಂದರು.

ಸಂಘಟನೆ ಜಿಲ್ಲಾಧ್ಯಕ್ಷ ರಮೇಶ ವೀರಾಪೂರ ಮಾತನಾಡಿ, ನಾಗನಗೌಡ ಉದ್ಯಮಿಯಾಗಿದ್ದು, ಅವರಿಗೆ ಶೈಕ್ಷಣಿಕ ಕಾಳಜಿ ಇಲ್ಲ. ಕಳೆದ ಎರಡು ವರ್ಷಗಳಿಂದ ಶಾಲೆಗೆ ನಿರಂತರವಾಗಿ ಅನಧಿಕೃತವಾಗಿ ಗೈರಾಗುತ್ತಿದ್ದು, ಶೈಕ್ಷಣಿಕ ವಾತಾವರಣ ಹಾಗೂ ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ಬಗ್ಗೆ ಅನೇಕ ಬಾರಿ ಇಲಾಖೆ ಗಮನಕ್ಕೆ ತಂದರೂ ಕ್ರಮ ವಹಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಶಾಲೆಯ 68 ವಿದ್ಯಾರ್ಥಿಗಳ ಪೈಕಿ 33 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಬಿಇಒ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ರಮೇಶ ವೀರಾಪೂರ ಆಗ್ರಹಿಸಿದರು.

ಧರಣಿಗೆ ಕರ್ಣಾಟಕ ಪ್ರಾಂತ ರೈತ ಸಂಘ ( ಕೆಪಿಆರ್ ಎಸ್) , ಸಿಐಟಿಯು, ಡಿವೈಎಫ್ಐ, ದಲಿತ ಸಂಘರ್ಷ ಸಮಿತಿ, ಜಯಕರ್ನಾಟಕ, ಕರುನಾಡ ವಿಜಯ ಸೇನೆ ಸಂಘಟನೆಗಳು ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಅನೇಕರ ಸಂಘಟನೆಗಳು ಧರಣಿ ಬೆಂಬಲಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ತಾಲ್ಲೂಕು ಕಾರ್ಯದರ್ಶಿ ಪವನ್ ಕಮದಾಳ, ತಾಲೂಕು ಮುಖಂಡರಾದ ವಿನಯ್ ಬಸವರಾಜ, ಕೆಪಿಆರ್ ಎಸ್ ತಾಲ್ಲೂಕು ಮುಖಂಡ ನಿಂಗಪ್ಪ ಎಂ., ಎಸ್ ಡಿ ಎಂ ಸಿ ಅಧ್ಯಕ್ಷ ನಿಂಗಪ್ಪ ಸಾಹುಕಾರ್, ಸಹಿಪ್ರಾ ಶಾಲೆ ಎಸ್ಡಿಎಂಸಿ ಅಧ್ಯಕ್ಷ ಸಾಬಣ್ಣ, ವಿವಿಧ ಸಂಘಟನೆಗಳ ಮುಖಂಡರಾದ ಅಣ್ಣಯ್ಯ, ಶಿವಶಂಕರ, ವಾಡಿಕೆಪ್ಪ, ಸಿದ್ರಾಮ ಚಲುವಾದಿ, ರಾಜು ನಾಯಕ, ಸಿದ್ದು ಮಾಲಿ, ಅನಿಲ್ ಕಂಬಳಿ, ಅಮರೇಶ ಸೋಮನಮರಡಿ, ಹಂಪಯ್ಯ, ಮೌಲಾಸಬ್, ಗ್ರಾಪಂ ಸದಸ್ಯರಾದ ಸಿದ್ದಪ್ಪ ಗಾಣದಾಳ, ಚಾಂದ್ ಪಾಷಾ, ರಘುವೆಂದ್ರ, ಗ್ರಾಮಸ್ಥರಾದ ವೆಂಕಣ್ಣ ಕೋಲ್ಕರ್, ಲಕ್ಷ್ಮಣ ಮೂಡಲಗುಂಡ, ಶಿವಪ್ಪ ಹಾವಿನ್, ಕೃಷ್ಣ ನಾಯಕ್, ದುರುಗಪ್ಪ ಬೊಮ್ಮನಾಳ, ಹನುಮಂತ ಶೆಗುಂಟಿ, ಶಿವು ಪಿ ಜಿ. ಯಮನೂರಪ್ಪ ಮಾಸ್ಟರ್ ಸಹದೇವ, ರಫಿ ಗುರುಗುಂಟಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಸುರಪುರ-ಕಲಬುರ್ಗಿ ಸಗರನಾಡು ಬಸ್‍ಗಳ ಸಂಚಾರ ಹೆಚ್ಚಿಸಿ; ರಮೇಶ ದೊರೆ

ಸುರಪುರ: ನಗರದಿಂದ ಕಲಬುರಗಿ ನಗರಕ್ಕೆ ಸಗರನಾಡು ಬಸ್‍ಗಳ ಸಂಚಾರದಲ್ಲಿ ಸಾಕಷ್ಟು ಕಡಿಮೆಗೊಂಡಿದ್ದು ಇದರಿಂದಾಗಿ ಸುರಪುರ ದಿಂದ ಕಲಬುರಗಿ ನಗರಕ್ಕೆ ಸಂಚರಿಸಲು…

6 hours ago

ಸುರಪುರ:ಬಸ್ ಪಾಸ್ ನೀಡಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸುರಪುರ: ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಂತೆ ಹಾಗೂ ವಿವಿಧ ಗ್ರಾಮಗಳಿಗೆ ಬಸ್ ಓಡಿಸಲು ಆಗ್ರಹಿಸಿ ಅಖಿಲ ಭಾರತ…

6 hours ago

ಬೆಂಗಳೂರ ನಿರ್ಮಾತೃ ಕೆಂಪೇಗೌಡ ಹೆಸರು ಅಜಾರಾಮರ

ಸುರಪುರ:ಬೆಂಗಳೂರ ನಿರ್ಮತೃ ನಾಡಪ್ರಭು ಕೆಂಪೇಗೌಡ ಅವರು ಭಾರತದ ಇತಿಹಾಸದಲ್ಲಿ ಅವರ ಹೆಸರು ಅಜರಾಮರವಾಗಿದೆ ಎಂದು ತಹಸಿಲ್ದಾರ್ ಕೆ.ವಿಜಯಕುಮಾತ ಮಾತನಾಡಿದರು. ನಗರದ…

6 hours ago

ಸಿಮೆಂಟ್ ಕಾರ್ಖಾನೆಗಳಲ್ಲಿ 50% ಸ್ಥಳಿಯರಿಗೆ ಉದ್ಯೋಗ ನೀಡಲು ಕೇಂದ್ರ ಸಚಿವರಿಗೆ ಮನವಿ

ಶಹಾಬಾದ, ಕಡೇಚೂರು-ಬಾಡಿಯಾಳ ಕಾರ್ಖಾನೆ ಪುನರ ಪ್ರಾರಂಭಿಸಲು ಮನವಿ ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಅನೇಕ ಸಿಮೆಂಟ್ ಕಾರ್ಖಾನೆ ಹಾಗೂ ಸಕ್ಕರೆ…

6 hours ago

ಶಾಲೆ-ಅಂಗನವಾಡಿಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆ ವೀಕ್ಷಣೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ  ಕಲಬುರಗಿ; ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ…

7 hours ago

ದಲಿತ ಚಳುವಳಿಗೆ: ಹಾಸನದಲ್ಲಿ 50ನೇ ವರ್ಷ ರಾಜ್ಯಮಟ್ಟದ ಸಮಾವೇಶ ಜೂನ್ 29ರಂದು

ಕೊಪ್ಪಳ : ದಲಿತ ಚಳುವಳಿಯ ರೂವಾರಿ ಪ್ರೊ.ಬಿ,ಕೃಷ್ಣಪ್ಪ ಅವರ ಜನುಮ ದಿನ ಹಾಗೂ ದಲಿತ ಚಳುವಳಿ ಗೆ 50 ವರ್ಷ…

7 hours ago