ಬಿಸಿ ಬಿಸಿ ಸುದ್ದಿ

ಮಹಾವಿದ್ಯಾಲಯ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಶರಣಬಸವ ಪಬ್ಲಿಕ್ ಸ್ಕೂಲ್, ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹವಿದ್ಯಾಲಯ ಹಾಗೂ ಬಸವರಾಜಪ್ಪ ಅಪ್ಪಾ ಪದವಿ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಸಿಗಳಿಗೆ ನೀರು ಎರೆಯುವ ಮೂಲಕ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಲ್ಲಿಕಾರ್ಜುನ ಸಜ್ಜನ ಓಂಕಾರ ಯೋಗ ಪ್ರತಿಷ್ಠಾನ ರಂಗಂಪೇಟ,ನಾನಗೌಡ ದೇಸಾಯಿ ಪ್ರಾಂಶುಪಾಲರು ಬಸವರಾಜಪ್ಪ ಅಪ್ಪಾ ಪದವಿ ಮಹಾವಿದ್ಯಾಲಯರವರು ಭಾಗವಹಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನುಶಿವಾನಂದ ಹವಶೆಟ್ಟಿ ಪ್ರಾಂಶುಪಾಲರು ಶರಣಬಸವ ಪಬ್ಲಿಕ್ ಸ್ಕೂಲ್, ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹವಿದ್ಯಾಲಯರವರು ವಹಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಲ್ಲಿಕಾರ್ಜುನ ಸಜ್ಜನರವರು ವಿದ್ಯಾರ್ಥಿಳಿಗೆ ಯೋಗಾಸನ ಮಾಡುವ ತರಬೇತಿ ನೀಡಿದರು ಹಾಗೂ ಯೋಗಾಸನದಿಂದಾಗುವ ಪ್ರಯೋಜನೆಗಳನ್ನು ತಿಳಿಸಿದರು. ಪ್ರಾv:Àಕಾಲದಲ್ಲಿ ವಿದ್ಯಾರ್ಥಿಗಳಾದವರು ಬೇಗೆನೆ ಎದ್ದು ವಿವಿಧ ಯೋಗಾಸನದ ಆಯಾಮಗಳನ್ನು ಮಾಡಬೇಕು ಹಾಗೂ ಸೂರ್ಯ ನಮಸ್ಕಾರ ಹೇಗೆ ಮಾಡಬೇಕೆಂದು ಮಕ್ಕಳಿಗೆ ಮಾಡಿ ತೋರಿಸಿದರು.

ಅದರ ಪ್ರಾಮುಖ್ಯತೆಯನ್ನು ಮನದಟ್ಟು ಮಾಡಿದರು ಯೋಗಾಸನದಲ್ಲಿ ಬರುವ ವಿವಿಧ ಆಸನಗಳಾದ ತಾಡಾಸನ,ವೃಕ್ಷಾಸನ,ಪಾದಹಸ್ತಾನ, ಅರ್ಧ ಚಕ್ರಾಸಾನ, ತ್ರಿಕೋಣಾಸನ, ಪಾಶ್ರ್ವಕೋನಾಸನ, ನಟರಾಜಸನ, ಪಾಶ್ರ್ವಕಟಿಚಕ್ರಾಸನಗಳನ್ನು ಮಾಡಿಸಿದರು.

ಈ ಎಲ್ಲಾ ಆಸನಗಳು ಮಾಡುವುದರಿಂದ ಏಕಾಗ್ರತೆ ಮತ್ತು ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ ಹಾಗೂ ನಿರಂತರ ಚೈತನ್ಯಶೀಲರಾಗಿ ಇರಲು ಸಾಧ್ಯವಾಗುತ್ತದೆ ಎಂಬ ಹಲವು ಮಹತ್ವದ ವಿಷಯಗಳನ್ನು ತಿಳಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಮಹಮ್ಮದ ಮೋಯಿಜ್ ನಿರೂಪಿಸಿದರು, ಶಿವಾನಿ ಅತಿಥಿಗಳ ಪರಿಚಯ ಮಾಡಿದರು, ಸುಪ್ರಿಯಾ ಸ್ವಾಗತಿಸಿದರು,ಶ್ರೇಯಾ ಚಾರು ವಂದಿಸಿದರು.

emedialine

Recent Posts

ಸುರಪುರ-ಕಲಬುರ್ಗಿ ಸಗರನಾಡು ಬಸ್‍ಗಳ ಸಂಚಾರ ಹೆಚ್ಚಿಸಿ; ರಮೇಶ ದೊರೆ

ಸುರಪುರ: ನಗರದಿಂದ ಕಲಬುರಗಿ ನಗರಕ್ಕೆ ಸಗರನಾಡು ಬಸ್‍ಗಳ ಸಂಚಾರದಲ್ಲಿ ಸಾಕಷ್ಟು ಕಡಿಮೆಗೊಂಡಿದ್ದು ಇದರಿಂದಾಗಿ ಸುರಪುರ ದಿಂದ ಕಲಬುರಗಿ ನಗರಕ್ಕೆ ಸಂಚರಿಸಲು…

9 hours ago

ಸುರಪುರ:ಬಸ್ ಪಾಸ್ ನೀಡಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸುರಪುರ: ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಂತೆ ಹಾಗೂ ವಿವಿಧ ಗ್ರಾಮಗಳಿಗೆ ಬಸ್ ಓಡಿಸಲು ಆಗ್ರಹಿಸಿ ಅಖಿಲ ಭಾರತ…

9 hours ago

ಬೆಂಗಳೂರ ನಿರ್ಮಾತೃ ಕೆಂಪೇಗೌಡ ಹೆಸರು ಅಜಾರಾಮರ

ಸುರಪುರ:ಬೆಂಗಳೂರ ನಿರ್ಮತೃ ನಾಡಪ್ರಭು ಕೆಂಪೇಗೌಡ ಅವರು ಭಾರತದ ಇತಿಹಾಸದಲ್ಲಿ ಅವರ ಹೆಸರು ಅಜರಾಮರವಾಗಿದೆ ಎಂದು ತಹಸಿಲ್ದಾರ್ ಕೆ.ವಿಜಯಕುಮಾತ ಮಾತನಾಡಿದರು. ನಗರದ…

9 hours ago

ಸಿಮೆಂಟ್ ಕಾರ್ಖಾನೆಗಳಲ್ಲಿ 50% ಸ್ಥಳಿಯರಿಗೆ ಉದ್ಯೋಗ ನೀಡಲು ಕೇಂದ್ರ ಸಚಿವರಿಗೆ ಮನವಿ

ಶಹಾಬಾದ, ಕಡೇಚೂರು-ಬಾಡಿಯಾಳ ಕಾರ್ಖಾನೆ ಪುನರ ಪ್ರಾರಂಭಿಸಲು ಮನವಿ ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಅನೇಕ ಸಿಮೆಂಟ್ ಕಾರ್ಖಾನೆ ಹಾಗೂ ಸಕ್ಕರೆ…

9 hours ago

ಶಾಲೆ-ಅಂಗನವಾಡಿಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆ ವೀಕ್ಷಣೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ  ಕಲಬುರಗಿ; ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ…

10 hours ago

ದಲಿತ ಚಳುವಳಿಗೆ: ಹಾಸನದಲ್ಲಿ 50ನೇ ವರ್ಷ ರಾಜ್ಯಮಟ್ಟದ ಸಮಾವೇಶ ಜೂನ್ 29ರಂದು

ಕೊಪ್ಪಳ : ದಲಿತ ಚಳುವಳಿಯ ರೂವಾರಿ ಪ್ರೊ.ಬಿ,ಕೃಷ್ಣಪ್ಪ ಅವರ ಜನುಮ ದಿನ ಹಾಗೂ ದಲಿತ ಚಳುವಳಿ ಗೆ 50 ವರ್ಷ…

10 hours ago