ಬಿಸಿ ಬಿಸಿ ಸುದ್ದಿ

ವಚನ ವಿಚಾರಗಳು ಕೇವಲ‌ ಆಚರಣೆಗೆ ಸೀಮಿತವಾಗದೆ ಅನುಸರಣೆಯಲ್ಲಿ ಬರಬೇಕು

ಕಲಬುರಗಿ: ಅಂಧಶ್ರದ್ಧೆ, ಮೂಢನಂಬಿಕೆ ವಿರುದ್ಧ ಹೋರಾಡಿದ ಬಸವಣ್ಣನವರು ಲೋಕಪೂಜ್ಯರು. ಅವರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಶಾಬಾದಿ ಅಭಿಪ್ರಾಯಪಟ್ಟರು.

891ನೇ ಬಸವ ಜಯಂತ್ಯುತ್ಸವ ನಿಮಿತ್ತವಾಗಿ ಇಲ್ಲಿನ
ಶ್ರೀ ಸದ್ಗುರು ಕಲಾ ಸಂಸ್ಥೆ ವತಿಯಿಂದ ಶಿವಾಜಿ ನಗರದ ಬಸವಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ವಚನ ಸಂಗೀತೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನುಭವ ಮಂಟಪದ ಮೂಲಕ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಮನೋಭಾವನೆ ಮೂಡಿಸಿದ ಮಹಾತ್ಮರು. ಅಂಥ ಮಹಾತ್ಮರ ಜಯಂತಿಯನ್ನು ಬಹಳಷ್ಟು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಜ್ಯೋತಿಬಾ ಫುಲೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಎಸ್ಎಸ್ ವಿ ಚಾನಲ್ ಸಂಸ್ಥಾಪಕ ಶಂಕರ ಕೋಡ್ಲಾ ಮಾತನಾಡಿ, ಬಸವಾದಿ ಶರಣರು ಬದುಕಿ, ಬೋಧಿಸಿದ ವಿಚಾರಗಳು ಪಕ್ಕಾ ವಾಸ್ತವವಾಗಿವೆ. ಮೇಲಾಗಿ ಸರಳ, ಸಹಜವಾಗಿವೆ. ಶರಣರ ವಿಚಾರಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ವಚನ ವಿಚಾರಗಳು ಕೇವಲ ಆಚರಣೆಯಾಗಬಾರದು, ಅನುಸರಣೆ ಮಾಡಬೇಕು ಎಂದು ತಿಳಿಸಿದರು.

ಮಹಾಂತೇಶ ಕುಂಬಾರ ಅವರು ಬಸವಣ್ಣನವರ ಕುರಿತಾಗಿ ವಿಶೇಷ ಅನುಭಾವ ನೀಡಿದರು. ಬಸವಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಶಿವಾನಂದ ಬಿಲಗುಂದಿ, ಗುರುಬಸವ ಡಿಸ್ಟ್ರಿಬ್ಯೂಟರ್ಸ್ ನ ಕಲ್ಯಾಣಕುಮಾರ ಸಗರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ನಂತರ ನಡೆದ ವಚನ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ದತ್ತರಾಜ ಕಲಶೆಟ್ಟಿ, ರಾಚಯ್ಯ ಸ್ವಾಮಿ ರಟಕಲ್, ಬಸಯ್ಯ ಗುತ್ತೇದಾರ, ಭೀಮಾಶಂಕರ ಹೂಗಾರ, ಜಗದೀಶ ದೇಸಾಯಿ ಕಲ್ಲೂರ, ಭಗವಂತರಾವ ಕಣ್ಣೂರ, ಮೌನೇಶ ವಿಶ್ವಕರ್ಮ, ಸೂರ್ಯಕಾಂತ ಗೊಬ್ಬೂರವಾಡಿ ಮತ್ತಿತರ ಕಲಾವಿದರಿಂದ ವಚನ ಸಂಗೀತೋತ್ಸವ ಕಾರ್ಯಕ್ರಮ ಜರುಗಿತು.

ಲೀಲಾವತಿ ಚಂದ್ರಕಾಂತ ಗೋಗಿ ನಿರೂಪಿಸಿದರು. ಶಿವಲಿಂಗ ಕೆಂಗನಾಳ ಸ್ವಾಗತಿಸಿದರು. ತೇಜು ಎಸ್ವಿ. ನಾಗೋಜಿ ಪ್ರಾರ್ಥನೆಗೀತೆ ಹಾಡಿದರು. ‌ವಿಜಯಲಕ್ಷ್ಮೀ ಕೆಂಗನಾಳ ವಂದಿಸಿದರು.

ಸದ್ಗುರು ಕಲಾ ರತ್ನ ಪ್ರಶಸ್ತಿ ಪುರಸ್ಕೃತರು: ಇದೇ ವೇಳೆಯಲ್ಲಿ ಉದಯಕುಮಾರ ಸಾಲಿ, ರಾಜಕುಮಾರ ಕೋಟಿ, ಡಾ. ಶಿವರಂಜನ ಸತ್ಯಂಪೇಟೆ, ಸಿದ್ಧರಾಮ ಯಳವಂತಗಿ, ಶಿವಶರಣಪ್ಪ ದೇಗಾಂವ, ಚಂದ್ರಕಾಂತ ಎಂ. ಗುಳಗಿ ಅವರಿಗೆ ಸದ್ಗುರು ಕಲಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

emedialine

Recent Posts

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

2 hours ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

4 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

4 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

4 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

4 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

5 hours ago