ಬಿಸಿ ಬಿಸಿ ಸುದ್ದಿ

ರಾಯಚೂರು: ಯಲಗಟ್ಟಾ ಪ್ರೌಢಶಾಲೆ ಮುಖ್ಯಗುರು ಅಮಾನತಿಗೆ ಆಗ್ರಹಿಸಿ 4 ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಗ್ರಹ

ಹಟ್ಟಿ: ಯಲಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಾಲೆಗೆ ನಿರಂತರ ಗೈರಾಗುತ್ತಿರುವ ಮುಖ್ಯಗುರು ನಾಗನಗೌಡ ರನ್ನು ಸೇವೆಯಿಂದ ಅಮಾಮಾತಿಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಲಿಂಗಸ್ಗೂರು ತಾಲೂಕು ಸಮಿತಿ ನೇತೃತ್ವದಲ್ಲಿ ಶಾಲೆಯ ಒಳಾಂಗಣದಲ್ಲಿ ಅನಿರ್ಧಿಷ್ಟಾವಧಿ ರವಿವಾರಕ್ಕೆ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ.

ಸೋಮವಾರದೊಳಗೆ ಅಮಾನತು ಆಗಿಲ್ಲ ಅಂದ್ರೆ ಶಾಲೆಗೆ ಬೀಗ ಹಾಕಲು ನಿರ್ಧಾರ ಮಾಡಲಾಗಿದೆ. ನಾಗನಗೌಡ ಪಾಟೀಲ್ ರಜೆ ಹೋಗಬೇಕಾದ ಸಂದರ್ಭದಲ್ಲಿ ಬಿ.ಇ.ಓ. ಕಛೇರಿಗೆ ಯಾವುದೇ ಪತ್ರ ವ್ಯವಹಾರ ಮಾಡಿರುವುದಿಲ್ಲ. ಇಲ್ಲಿಯವರೆಗೆಗೂ ಯಾವುದೇ ಎಸ್ .ಡಿ ಎಮ್.ಸಿ ಸಭೆಯನ್ನೂ ಸಹ ನಡೆಸಿರುವುದಿಲ್ಲ. ಎಸ್.ಎಸ್.ಎಲ್.ಸಿ ಫಲಿತಾಂಶ ಸಹ ಶೇಕಡಾ 51% ರಷ್ಟು ಆಗಿದ್ದು, ಉಳಿದ 33ಮಕ್ಕಳ ಅನುತ್ತೀರ್ಣರಾಗಿದ್ದಾರೆ. ಮುಖ್ಯೋಪಾದ್ಯಾಯರು ಶಾಲೆಗೆ ಬರದೇ ಹಾಜರಿ ಪುಸ್ತಕದಲ್ಲಿ ಸಹಿ ಮಾಡಿರುತ್ತಾರೆ. ಈ ಬಗ್ಗೆ ದಿನಾಂಕ 20-06-2024 ರಿಂದ ಶಾಲಾ ಆವರಣದಲ್ಲಿ ಎಸ್.ಎಪ್.ಐ ಸಂಘಟನೆ ಹಾಗೂ ಗ್ರಾಮಸ್ಥರು ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಆಯುಕ್ತರು ಇವರನ್ನು ಅಮಾನತು ಮಾಡಲು ವಿಳಂಬ ಮಾಡುತ್ತಿದ್ದಾರೆ ಎಂದು ಧರಣಿ ನಿರತರು ಆರೋಪಿಸಿದ್ದಾರೆ.

ಸೋಮವಾರ ಒಳಗೆ ಅಮಾನತು ಮಾಡಿಲ್ಲ ಅಂದ್ರೆ ಶಾಲೆಗೆ ಶಾಲೆಗೆ ಬೀಗ ಹಾಕಲು ತೀರ್ಮಾನಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ತಾಲ್ಲೂಕು ಕಾರ್ಯದರ್ಶಿ ಪವನ್ ಕಮದಾಳ, ತಾಲೂಕು ಮುಖಂಡರಾದ ವಿನಯ್ ಕುಮಾರ್, ಬಸವರಾಜ, ಸೋಮನ ಮರಡಿ, ಕೆಪಿಆರ್ ಎಸ್ ತಾಲ್ಲೂಕು ಮುಖಂಡ ನಿಂಗಪ್ಪ ಎಂ., ಎಸ್ ಡಿ ಎಂ ಸಿ ಅಧ್ಯಕ್ಷ ನಿಂಗಪ್ಪ ಸಾಹುಕಾರ್, ಸದಸ್ಯ ಮರಡಯ್ಯ ಸ್ವಾಮಿ, ವಿವಿಧ ಸಂಘಟನೆಗಳ ಮುಖಂಡರಾದ ಅಣ್ಣಯ್ಯ, ಶಿವಶಂಕರ, ವಡಿಕೆಪ್ಪ, ರಾಜು ನಾಯಕ, ತೋಟೆಂದ್ರ ಅಂಗಡಿ, ಸಿದ್ದು ಮಾಲಿ, ಶಿವು ಪಿ ಜಿ., ನಿರುಪಾದಿ, ವೆಂಕಟೇಶ್ ಯಾದವ್, ವೀರೇಶ್ ಬಡಿಗೇರ್, ಬೆಟ್ಟಪ್ಪ, ಸಿಐಟಿಯು ಮುಖಂಡ ಅಲ್ಲಾಭಕ್ಷ, ನಿಂಗಪ್ಪ ಬೋವಿ, ಶ್ರೀನಿವಾಸ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

8 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

8 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

10 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

10 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

10 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

11 hours ago