ಚಿತ್ತಾಪುರ: ಅರಣ್ಯ ಪ್ರದೇಶದಲ್ಲಿ ಕಾಡು ಹಂದಿಯನ್ನು ಬೇಟೆಯಾಡಿದ ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನವರು ಎನ್ನಲಾದ ಸೋಮೇಶ್ ತಂದೆ ಅಯ್ಯಪ್ಪಾ ಮತ್ತು ಅಂಬರೀಷ್ ತಂದೆ ಮಣಮಪ್ಪ ಎಂಬುವವರು ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಬೂಳ್ ಗ್ರಾಮದ ಹತ್ತಿರ ಕಾಡು ಹಂದಿಯ ಭೇಟೆಯಾಡಿ ಬುಲೇರೋ ವಾಹನದಲ್ಲಿ ರಾಯಚೂರು ಕಡೆಗೆ ತೆಗೆದುಕೊಂಡು ಹೋಗುತ್ತಿರುವಾಗ ಕರ್ತವ್ಯ ನಿರತರಾಗಿದ್ದ ಬೀಟ್ ಪೊಲೀಸ್ ಪೇದೆ ಒಬ್ಬರು ತಪಾಸಣೆ ನಡೆಸಿ ಠಾಣೆಗೆ ಕರೆತಂದಾಗ ಪಿಎಸ್’ಐ ಶ್ರೀಶೈಲ್ ಅಂಬಾಟಿ ಅವರು ವಿಚಾರಣೆ ನಡೆಸಿದ ನಂತರ ವಲಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಅರಣ್ಯ ಇಲಾಖೆಯ ಡಿಸಿಎಫ್ ಸುಮಿತ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಎಂ.ಡಿ ಮುನೀರ್ ಅಹಮದ, ಆರ್ಎಫ್ಒ ವಿಜಯಕುಮಾರ್ ಅವರು ಕಾರ್ಯಾಚರಣೆ ನಡೆಸಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜೆಎಂಎಫ್ಸಿ ನ್ಯಾಯಾಧೀಶರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಈ ಸಂದರ್ಭದಲ್ಲಿ ಡಿಆರ್ಎಫ್ಒ ಅನಿಲಕುಮಾರ, ಮಂಜುನಾಥ ಹಂದ್ರಾಳ್, ಸಂತೋಷ ಟೆಂಗಳಿ, ಜಟ್ಟೆಪ್ಪ ನಾವಿ, ಪೀರಪ್ಪ ಕತ್ತಿ, ಬೀಟ್ ಫಾರೆಸ್ಟರ್ ರಮೇಶ ಹಾದಿಮನಿ, ಚಂದ್ರಕಾಂತ್, ಜಾಫರ್, ಮಲ್ಲಪ್ಪ, ಮಹದೇವ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…