ಕಲಬುರಗಿ: ಯಾವುದೇ ಗೌರವಧನವಿಲ್ಲದೆ ದುಡಿಯುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರಿ ಆದೇಶ ಹೊರಡಿಸುವಂತೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ/ಬಿಟಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರಿಯಾಂಕ್ ಖರ್ಗೆ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.
ಕಲಬುರಗಿಯಲ್ಲಿ ಶನಿವಾರ ಸಚಿವರನ್ನು ಭೇಟಿಯಾದ ಪತ್ರಕರ್ತರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ 2024-25ರ ತಮ್ಮ ಬಜೆಟ್ ಭಾಷಣದಲ್ಲಿ ಮಂಡಿಸಿದ್ದಾರೆ. ಆದರೆ ಇದುವರೆಗೂ ಆ ಕುರಿತು ಸರಕಾರಿ ಆದೇಶ ಹೊರಡಿಸಿಲ್ಲ. ಆದ್ದರಿಂದ ಕೂಡಲೇ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಒದಗಿಸುವ ಕುರಿತು ಸರಕಾರಿ ಆದೇಶ ಹೊರಡಿಸುವಂತೆ ಸರ್ಕಾರದ ಸಾರಿಗೆ ಸಚಿವರ ಗಮನಕ್ಕೆ ತರುವಂತೆ ಒತ್ತಾಯಿಸಲಾಯಿತು.
ಈ ವೇಳೆ ಮಾತನಾಡಿದ ಸಚಿವರು, ಬಜೆಟ್ ಮಂಡಿಸಿದ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸರ್ಕಾರಿ ಆದೇಶ ಹೊರಡಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಸಂಪುಟ ಹಾಗೂ ಸಾರಿಗೆ ಸಚಿವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
ಕರ್ನಾಟಕ ಕಾರ್ಯನಿರತ ಸಂಘದ ಜಿಲ್ಲಾ ಕಾರ್ಯದರ್ಶಿ ವೀರೇಂದ್ರ ಕುಮಾರ ಕೊಲ್ಲೂರ, ತಾಲೂಕು ಘಟಕದ ಗೌರವಾಧ್ಯಕ್ಷ ರವಿಶಂಕರ ಬುರ್ಲಿ, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮಶಾಕ್ ಮುಲ್ಲಾ ಕಮರವಾಡಿ, ಮಾಜಿ ಅಧ್ಯಕ್ಷ ಕಾಶಿನಾಥ ಗುತ್ತೇದಾರ, ವಿಕ್ರಮ್ ತೇಜಸ್, ದಯಾನಂದ ಖಜೂರಿ, ಕರುಣೆೇಶ ಕೆಲ್ಲೂರು, ಅನಂತನಾಗ ದೇಶಪಾಂಡೆ, ಅಣ್ಣಾರಾಯ ಪಾಟೀಲ, ಸಂತೋಷ್ ಕಟ್ಟಿಮನಿ, ಪೃಥ್ವಿರಾಜ್ ಸಾಗರ್ ಇದ್ದರು
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…