ಚಿಗರಿಹಾಳ:ದಿ.ರಾಜಾ ವೆಂಕಟಪ್ಪ ನಾಯಕ ವೃತ್ತ ಉದ್ಘಾಟನೆ

0
19

ಸುರಪುರ: ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಶಾಸಕ ದಿ.ರಾಜಾ ವೆಂಕಟಪ್ಪ ನಾಯಕ ಅವರ ವೃತ್ತ ಉದ್ಘಾಟನೆ ಕಾರ್ಯಕ್ರಮ ನಡೆಸಲಾಗಿದೆ.

ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವೃತ್ತ ಉದ್ಘಾಟನೆ ಅಂಗವಾಗಿ ಹಾಕಲಾಗಿರುವ ನಾಮಫಲಕಕ್ಕೆ ತಳಿರು ತೋರಣಗಳಿಂದ ಸಿಂಗಾರಗೊಳಿಸಿ,ಗ್ರಾಮದ ಅನೇಕ ರಾಜಾ ವೆಂಕಟಪ್ಪ ನಾಯಕ ಅವರ ಮುಖಂಡರು ಹಾಗೂ ನೂರಾರು ಜನರು ಭಾಗವಹಿಸಿ ನಾಮಫಲಕ ಅನಾವರಣಗೊಳಿಸುವ ಮೂಲಕ ವೃತ್ತ ಉದ್ಘಾಟಿಸಿದರು.

Contact Your\'s Advertisement; 9902492681

ನಂತರ ನಾಮಫಲಕಕ್ಕೇ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಘೋಷಣೆಗಳನ್ನು ಕೂಗಿದರು.ಈ ಸಂದರ್ಭದಲ್ಲಿ ಮುಖಂಡರಾದ ಮಾನಯ್ಯ ಯಡಿಯಾಪೂರ ಜಾಗಿರದಾರ,ವಿಟೊಬಾ ದೊರಿ,ಸಂಗಯ್ಯಸ್ವಾಮಿ,ಹಣಮಂತ್ರಾಯ ದೊರಿ,ಖಾಸೀಂ ಅಲಿ ಸಾಬ್ ಔರಂಗಬಾದ್ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here