ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರ ಬದುಕು-ಸಾಧನೆ ಕುರಿತಾದ ವಿಚಾರಗೋಷ್ಠಿ

0
126

ಕಲಬುರಗಿ: ಶರಣರ ವಚನಗಳು ನಮಗೆ ಅಂತರಂಗ ಮತ್ತು ಬಹಿರಂಗ ಶುದ್ಧಿ ಮಾಡುವ ದಿವ್ಯ ಔಷಧಿಗಳಾಗಿವೆ. ದಿನನಿತ್ಯ ನಾವುಗಳು ವಚನಗಳು ಪಠಣ ಮಾಡುವುದರಿಂದ ನಮ್ಮ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಶರಣ ತತ್ವಗಳನ್ನು ಅಧ್ಯಯನ ಮಾಡಿದರೆ ನಮ್ಮ ಜೀವನಶರಣ ಜೀವನವಾಗುತ್ತದೆ. ಇಂಥ ಮಾನವೀಯ ಮೌಲ್ಯಗಳ ಗಣಿಯಂತಿರುವ ವಚನಗಳನ್ನು ನಮಗೆ ಸಿಗುವಂತೆ ಮಾಡಿದ್ದು ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರಾಗಿದ್ದಾರೆ. ಹಳಕಟ್ಟಿ ಯವರು ಯಾವ ವಿಶ್ವವಿದ್ಯಾಲಯಗಳು ಮಾಡಲಾಗದ ಬಹು ದೊಡ್ಡ ಸಾಧನೆಯನ್ನು ಇವರು ಮಾಡುವ ಮೂಲಕ ವಚನ ಸಂರಕ್ಷಣೆಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಮಾಜಿ ಸಚಿವ ಎನ್. ಮಹೇಶ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಶ್ರೀಮತಿ ವ್ಹಿ.ಜಿ. ಮಹಿಳಾ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರ ಬದುಕು ಮತ್ತು ಸಾಧನೆ ಕುರಿತು ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ನಮ್ಮ ಜೀವನದಲ್ಲಿ ಎದುರಾಗುವ ಎಲ್ಲಾ ತರಹದ ಸಮಸ್ಯೆಗಳಿಗೆ ಅದಕ್ಕೆ ಸೂಕ್ತ ಪರಿಹಾರ ಒದಗಿಸುವ ಶಕ್ತಿ ವಚನ ಸಾಹಿತ್ಯ ಹೊಂದಿದೆ ಎಂದು ತಿಳಿಸಿದರು.

Contact Your\'s Advertisement; 9902492681

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಎಲ್ಲಾ ಕಾಯಕ ಶರಣರನ್ನು ಒಗ್ಗೂಡಿಸಿದಂತೆ, ವಚನಕಾರರ ಸಾಹಿತ್ಯವನ್ನು 20 ನೇ ಶತಮಾನದಲ್ಲಿ ಒಗ್ಗೂಡಿಸಲು ಶ್ರಮಿಸಿದ ಡಾ. ಫ.ಗು. ಹಳಕಟ್ಟಿ ಅವರನ್ನು ಆಧುನಿಕ ಬಸವಣ್ಣ ಎಂದು ಕರೆದರೆ ತಪ್ಪಾಗಲಾರದು. ಬಸವಾದಿ ಶರಣರ ವಚನಗಳು ಮುಂದಿನ ಪೀಳಿಗೆಗೆ ದಾರಿ ದೀಪವಾಗಬೇಕೆಂಬ ಉದ್ದೇಶದೊಂದಿಗೆ ವಿವಿಧ ಕಡೆಗಳಲ್ಲಿ ಹಂಚಿ ಹೋಗಿದ್ದ ವಚನಗಳನ್ನು ಸಂಶೋಧಿಸಿ, ಸಂಗ್ರಹಿಸಿ ಸಮಾಜಕ್ಕೆ ಮತ್ತು ವಿಶ್ವಕ್ಕೆ ಪರಿಚಯಿಸುವ ಬಹು ದೊಡ್ಡ ಕಾರ್ಯ ಮಾಡಿದ ಮೇಧಾವಿಗಳಿವರು ಎಂದು ಹೇಳಿದ ಅವರು, ಇಂಥ ಶ್ರೇಷ್ಠ ಕಾಯಕಜೀವಿ ಹಳಕಟ್ಟಿ ಶರಣರನ್ನು ಸದಾ ಸ್ಮರಿಸುವ ಕಾರ್ಯವಾಗಬೇಕು ಎಂದರು.

ಶರಣ ಚಿಂತಕಿ ಜಯಶ್ರೀ ಚಟ್ನಳ್ಳಿ ಮಾತನಾಡಿ, ಡಾ. ಫ.ಗು. ಹಳಕಟ್ಟಿ ಯವರು ತಮ್ಮ ವಯಕ್ತಿಕ ಜೀವನದ ಆಸೆ, ಆಕಾಂಕ್ಷೆಗಳನ್ನು ತೊರೆದು ಸಾಮಾಜಿಕ ಹಿತಕ್ಕಾಗಿ ವಚನ ಸಾಹಿತ್ಯವನ್ನು ಉಳಿಸಿ ಬೆಳೆಸಿದರು. ಕನ್ನಡ ಸಾಹಿತ್ಯ ಸಮೃದ್ಧಿಯಲ್ಲಿ ವಚನಗಳು ತಮ್ಮದೇ ಆದ ಪ್ರಾಮುಖ್ಯತೆ ಪಡೆದಿವೆ ಎಂದು ಅನೇಕ ಉಧಾಹರಣೆಗಳಿಂದ ವಿವರಣೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ನಾಗೇಂದ್ರ ಮಸೂತಿ, ವಿಶ್ವಗುರು ಬಸವಣ್ಣನವರನ್ನು ಮತ್ತು ಶರಣರ ವಚನಗಳನ್ನು ಇಂದಿಗೂ ಜೀವಂತವಾಗಿಟ್ಟವರು ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರಾಗಿದ್ದಾರೆ. ಹಳಕಟ್ಟಿ ಶರಣರ ಪರಿಶ್ರಮದ ಫಲವಾಗಿ ಇಂದು ನಾವುಗಳು ವಚನಗಳು ಕಾಣುತ್ತಿದ್ದೇವೆ ಎಂದರು.

ನ್ಯಾಯವಾದಿ ಶಿವಲಿಂಗಪ್ಪ ಅಷ್ಟಗಿ, ಪ್ರಮುಖರಾದ ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ವಿನೋದಕುಮಾರ ಜೇನವೇರಿ, ರಾಜೇಂದ್ರ ಮಾಡಬೂಳ, ಮಲ್ಲಿಕಾರ್ಜುನ ಪೂಜಾರಿ, ಜಗದೀಶ ಮರಪಳ್ಳಿ, ಶಿವಾನಂದ ಮಠಪತಿ, ರೇವಣಸಿದ್ದಪ್ಪ ಜೀವಣಗಿ, ಹಣಮಂತ ಪ್ರಭು, ಡಾ. ಕಾಶಿಬಾಯಿ ಬೋಗಶೆಟ್ಟಿ, ಪ್ರಭವ ಪಟ್ಟಣಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here