ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರ ಬದುಕು-ಸಾಧನೆ ಕುರಿತಾದ ವಿಚಾರಗೋಷ್ಠಿ

ಕಲಬುರಗಿ: ಶರಣರ ವಚನಗಳು ನಮಗೆ ಅಂತರಂಗ ಮತ್ತು ಬಹಿರಂಗ ಶುದ್ಧಿ ಮಾಡುವ ದಿವ್ಯ ಔಷಧಿಗಳಾಗಿವೆ. ದಿನನಿತ್ಯ ನಾವುಗಳು ವಚನಗಳು ಪಠಣ ಮಾಡುವುದರಿಂದ ನಮ್ಮ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಶರಣ ತತ್ವಗಳನ್ನು ಅಧ್ಯಯನ ಮಾಡಿದರೆ ನಮ್ಮ ಜೀವನಶರಣ ಜೀವನವಾಗುತ್ತದೆ. ಇಂಥ ಮಾನವೀಯ ಮೌಲ್ಯಗಳ ಗಣಿಯಂತಿರುವ ವಚನಗಳನ್ನು ನಮಗೆ ಸಿಗುವಂತೆ ಮಾಡಿದ್ದು ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರಾಗಿದ್ದಾರೆ. ಹಳಕಟ್ಟಿ ಯವರು ಯಾವ ವಿಶ್ವವಿದ್ಯಾಲಯಗಳು ಮಾಡಲಾಗದ ಬಹು ದೊಡ್ಡ ಸಾಧನೆಯನ್ನು ಇವರು ಮಾಡುವ ಮೂಲಕ ವಚನ ಸಂರಕ್ಷಣೆಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಮಾಜಿ ಸಚಿವ ಎನ್. ಮಹೇಶ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಶ್ರೀಮತಿ ವ್ಹಿ.ಜಿ. ಮಹಿಳಾ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರ ಬದುಕು ಮತ್ತು ಸಾಧನೆ ಕುರಿತು ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ನಮ್ಮ ಜೀವನದಲ್ಲಿ ಎದುರಾಗುವ ಎಲ್ಲಾ ತರಹದ ಸಮಸ್ಯೆಗಳಿಗೆ ಅದಕ್ಕೆ ಸೂಕ್ತ ಪರಿಹಾರ ಒದಗಿಸುವ ಶಕ್ತಿ ವಚನ ಸಾಹಿತ್ಯ ಹೊಂದಿದೆ ಎಂದು ತಿಳಿಸಿದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಎಲ್ಲಾ ಕಾಯಕ ಶರಣರನ್ನು ಒಗ್ಗೂಡಿಸಿದಂತೆ, ವಚನಕಾರರ ಸಾಹಿತ್ಯವನ್ನು 20 ನೇ ಶತಮಾನದಲ್ಲಿ ಒಗ್ಗೂಡಿಸಲು ಶ್ರಮಿಸಿದ ಡಾ. ಫ.ಗು. ಹಳಕಟ್ಟಿ ಅವರನ್ನು ಆಧುನಿಕ ಬಸವಣ್ಣ ಎಂದು ಕರೆದರೆ ತಪ್ಪಾಗಲಾರದು. ಬಸವಾದಿ ಶರಣರ ವಚನಗಳು ಮುಂದಿನ ಪೀಳಿಗೆಗೆ ದಾರಿ ದೀಪವಾಗಬೇಕೆಂಬ ಉದ್ದೇಶದೊಂದಿಗೆ ವಿವಿಧ ಕಡೆಗಳಲ್ಲಿ ಹಂಚಿ ಹೋಗಿದ್ದ ವಚನಗಳನ್ನು ಸಂಶೋಧಿಸಿ, ಸಂಗ್ರಹಿಸಿ ಸಮಾಜಕ್ಕೆ ಮತ್ತು ವಿಶ್ವಕ್ಕೆ ಪರಿಚಯಿಸುವ ಬಹು ದೊಡ್ಡ ಕಾರ್ಯ ಮಾಡಿದ ಮೇಧಾವಿಗಳಿವರು ಎಂದು ಹೇಳಿದ ಅವರು, ಇಂಥ ಶ್ರೇಷ್ಠ ಕಾಯಕಜೀವಿ ಹಳಕಟ್ಟಿ ಶರಣರನ್ನು ಸದಾ ಸ್ಮರಿಸುವ ಕಾರ್ಯವಾಗಬೇಕು ಎಂದರು.

ಶರಣ ಚಿಂತಕಿ ಜಯಶ್ರೀ ಚಟ್ನಳ್ಳಿ ಮಾತನಾಡಿ, ಡಾ. ಫ.ಗು. ಹಳಕಟ್ಟಿ ಯವರು ತಮ್ಮ ವಯಕ್ತಿಕ ಜೀವನದ ಆಸೆ, ಆಕಾಂಕ್ಷೆಗಳನ್ನು ತೊರೆದು ಸಾಮಾಜಿಕ ಹಿತಕ್ಕಾಗಿ ವಚನ ಸಾಹಿತ್ಯವನ್ನು ಉಳಿಸಿ ಬೆಳೆಸಿದರು. ಕನ್ನಡ ಸಾಹಿತ್ಯ ಸಮೃದ್ಧಿಯಲ್ಲಿ ವಚನಗಳು ತಮ್ಮದೇ ಆದ ಪ್ರಾಮುಖ್ಯತೆ ಪಡೆದಿವೆ ಎಂದು ಅನೇಕ ಉಧಾಹರಣೆಗಳಿಂದ ವಿವರಣೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ನಾಗೇಂದ್ರ ಮಸೂತಿ, ವಿಶ್ವಗುರು ಬಸವಣ್ಣನವರನ್ನು ಮತ್ತು ಶರಣರ ವಚನಗಳನ್ನು ಇಂದಿಗೂ ಜೀವಂತವಾಗಿಟ್ಟವರು ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರಾಗಿದ್ದಾರೆ. ಹಳಕಟ್ಟಿ ಶರಣರ ಪರಿಶ್ರಮದ ಫಲವಾಗಿ ಇಂದು ನಾವುಗಳು ವಚನಗಳು ಕಾಣುತ್ತಿದ್ದೇವೆ ಎಂದರು.

ನ್ಯಾಯವಾದಿ ಶಿವಲಿಂಗಪ್ಪ ಅಷ್ಟಗಿ, ಪ್ರಮುಖರಾದ ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ವಿನೋದಕುಮಾರ ಜೇನವೇರಿ, ರಾಜೇಂದ್ರ ಮಾಡಬೂಳ, ಮಲ್ಲಿಕಾರ್ಜುನ ಪೂಜಾರಿ, ಜಗದೀಶ ಮರಪಳ್ಳಿ, ಶಿವಾನಂದ ಮಠಪತಿ, ರೇವಣಸಿದ್ದಪ್ಪ ಜೀವಣಗಿ, ಹಣಮಂತ ಪ್ರಭು, ಡಾ. ಕಾಶಿಬಾಯಿ ಬೋಗಶೆಟ್ಟಿ, ಪ್ರಭವ ಪಟ್ಟಣಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

10 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

10 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

10 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

10 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

10 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420