ಬಲಿಷ್ಠ ರಾಷ್ಟ್ರ ಕಟ್ಟಲು ಗುಣಮಟ್ಟದ ಶಿಕ್ಷಣ ಅಗತ್ಯ; ಸರಡಗಿ ಶ್ರೀಗಳು

ಕಲಬುರಗಿ; ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಬಲಿಷ್ಠ ರಾಷ್ಟ್ರ ಕಟ್ಟಲು ಸಹಕಾರಿಗುತ್ತದೆ ಎಂದು ಶ್ರೀನಿವಾಸ ಸರಡಗಿ ಪೂಜ್ಯರಾದ ಡಾ. ರೇವಣಸಿದ್ದ ಶಿವಾಚಾರ್ಯರು ಹೇಳಿದರು.

ನಗರದ ತಾಜ ಸುಲ್ತಾನಪುರ ರಸ್ತೆಯಲ್ಲಿರುವ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯ ತರಗತಿಯ ಕೊಠಡಿಗಳ ಲೋಕಾರ್ಪಣೆ ಹಾಗೂ ದಿ. ಬಸವರಾಜ ಶಹಾಪೂರಕರ ಸಾಂಸ್ಕೃತಿಕ ವೇದಿಕೆ ಉದ್ಘಾಟಿಸಿ ಆಶೀರ್ವಚನ ನೀಡುತ್ತಾ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಮನಸ್ಸು ಬಿಳಿ ಹಾಳೆಯಂತೆ ಇರುತ್ತದೆ. ತಾವು ಹಾಳೆಯ ಮೇಲೆ ಏನು ಬರೆಯುತ್ತಿರಿ ಅದನ್ನು ಮೂಡುತ್ತದೆ ಅದೇ ರೀತಿ ಶಿಕ್ಷಕರು ಪಾಲಕರು ಸೇರಿ ಒಳ್ಳೆಯ ಸಂಕಲ್ಪದೊಂದಿಗೆ ಮಕ್ಕಳನ್ನು ಬೆಳೆಸಿ ಗುಣಮಟ್ಟದ ಶಿಕ್ಷಣ ನೀಡಿದರೆ ಭಾವಿ ಭವಿಷ್ಯದ ಕುಡಿಗಳಾಗುತ್ತಾರೆ ಎಂದು ಮಾರ್ಮಿಕವಾಗಿ ನುಡಿದರು.

ಸಂಸ್ಥೆಯ ಅಧ್ಯಕ್ಷರಾದ ರವಿಕುಮಾರ ಶಹಾಪೂರಕರ ಮಾತನಾಡುತ್ತಾ ಬಳಸಿಕೊಂಡವರನ್ನು ಮರೆತು ಬಿಡು ಆದರೆ ಬೆಳೆಸಿದವರನ್ನು ಮಾತ್ರ ಯಾವತ್ತು ಮರೆಯಬೇಡ ಎನ್ನುವ ಹಾಗೆ ತಾಯಿ -ತಂದೆಯ ಜೊತೆಗೆ ಪಾಲಕರು ಸಹಿತ ನನ್ನನ್ನು ಆಶೀರ್ವದಿಸಿ ಶಿಕ್ಷಣ ಸಂಸ್ಥೆ ಬೆಳೆಯುವುದಕ್ಕೆ ಸಹಕಾರ ನೀಡಿದ್ದೀರಿ. ಇಂತಹ ಸ್ಪರ್ಧಾತ್ಮಕ ಸಮಯದಲ್ಲಿಯೂ ನನ್ನನ್ನು ಕೈಹಿಡಿದು ಬೆಳೆಸಿದ್ದೀರಿ ಅದಕ್ಕಾಗಿಯೇ ನಾವು ಗುಣಮಟ್ಟದ ಶಿಕ್ಷಣ ಕೊಡುವುದಕ್ಕೆ ಪ್ರಯತ್ನಿಸುತ್ತಿದ್ದೇವೆ. ತಮ್ಮ ಸಲಹೆ ಸಹಕಾರ ಹೀಗೆ ಮುಂದುವರೆಯಲೆಂದು ವಿನಂತಿಸಿಕೊಳ್ಳುತ್ತಿದ್ದೇನೆ.

ಮುಖ್ಯ ಅತಿಥಿಗಳಾಗಿ ಜನಪರ ಹೋರಾಟಗಾರ ನ್ಯಾಯವಾದಿ ಹಣಮಂತರಾಯ ಎಸ್ ಅಟ್ಟೂರ, ತಾಜ ಸುಲ್ತಾನಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸಂಜು ಕುಮಾರ ಜವರಕರ, ನಾಗಿಂದ್ರಯ್ಯ ಸ್ವಾಮಿ ಮಠ, ಸುನಿಲ ಮದನಕರ,ಗುರು ಹಾಂವಾ, ಜಗನ್ನಾಥ ಬಡಿಗೇರ ಅಖP, ಶರಣು ಹಂಗರಗಿ, ಶಶಿಕುಮಾರ ಶಹಾಪೂರಕರ, ಲಕ್ಷ್ಮಣ ಜಾಧವ ಆಗಮಿಸಿದರು. ಕಾರ್ಯಕ್ರಮದಲ್ಲಿ ರೇವಣಸಿದ್ದಯ್ಯ ಹೊಸಮಠ,ರೇವಣಸಿದ್ದ ಕಾಲಿಮರ, ಗುಂಡಪ್ಪ ಮಡಿವಾಳ, ಶಿಕ್ಷಕರಾದ ಅರ್ಚನಾ ಶಹಾಪೂರಕರ,ವಸುಮತಿ ತಳವಾರ,ವೈಶಾಲಿ ರಾಂಬಾಣ, ಸಪ್ನಾ ಆಖಿ, ಶಶಿಕಲಾ ಕುಂಬಾರ, ಪೂಜಾ ಚವ್ಹಾಣ,ಭಾಗ್ಯ ಸುತಾರ, ಪ್ರಿಯಾಂಕ ಹೊಸಮಠ,ವಿಜಯಲಕ್ಷ್ಮಿ ಚಿಳ್ಳ ಸೇರಿದಂತೆ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಅನೇಕ ಜನ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಜೂನಿಯರ್ ರಾಜಕುಮಾರ ಎಂದೆ ಪ್ರಖ್ಯಾತಿ ಪಡೆದ ಹೇಮಂತ ಮಾಲಗತ್ತಿ ಅವರು ಅದ್ಭುತ ನಟನೆಯ ಮೂಲಕ ಜನರನ್ನು ರಂಜಿಸಿದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

5 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

5 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

5 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

5 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

5 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420